TOP STORIES:

FOLLOW US

10 ಮತ್ತು 12 ನೇ ಕ್ಲಾಸಿನ ವಿದ್ಯಾರ್ಥಿಗಳಿಗೆ ಮಾತ್ರ ಆನ್​ಲೈನ್ ತರಗತಿಗಳು, ಉಳಿದವರಿಗೆ ಕೇವಲ ಆಫ್​ಲೈನ್: ಆರ್ ಅಶೋಕ


ನಮ್ಮ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಲ್ಲಿ ಪಾಸಿಟಿವಿಟಿ ದರ ಶೇಕಡಾ ಮೂರಕ್ಕಿಂತ ಹೆಚ್ಚಾಗಿದೆ ಎಂದರು. ಸೋಂಕು 20 ರಿಂದ 50 ವರ್ಷ ವಯಸ್ಸಿನವರಿಗೆ ತಾಕುತ್ತಿದೆ ಎಂದು ಅಶೋಕ ಹೇಳಿದರು.

ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಒಂದೇಸಮ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಸಂಪುಟದ ಸಹೋದ್ಯೋಗಿ, ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸುದೀರ್ಘವಾದ ಸಭೆ ನಡೆಸಿ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ದೃಷ್ಟಿಯಿಂದ ಕೆಲವು ನಿಯಮಗಳನ್ನು ಜಾರಿಗೊಳಿಸುವ ನಿರ್ಧಾರ ತೆಗೆದುಕೊಂಡರು.

ಸಭೆಯ ಬಳಿಕ ಹಿರಿಯ ಸಚಿವ ಆರ್ ಅಶೋಕ ಅವರು ಸರ್ಕಾರ ತೆಗೆದುಕೊಂಡಿರುವ ನಿರ್ಣಯಗಳ ಬಗ್ಗೆ ಮಾಧ್ಯಮಗಳಿಗೆ ತಿಳಿಸಿದರು. ಬೆಂಗಳೂರು ನಗರ ಪ್ರದೇಶದಲ್ಲಿ ಕೇವಲ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಆಫ್ ಲೈನ್ ತರಗತಿ ನಡೆಸುವ ಅವಕಾಶವನ್ನು ನೀಡಲಾಗಿದ್ದು 1ರಿಂದ 9 ನೇ ತರಗತಿಗಳನ್ನು ಕೇವಲ ಅನ್ ಲೈನಲ್ಲಿ ನಡೆಸುವಂತೆ ಶಾಲಾ ಕಾಲೇಜುಗಳಿಗೆ ತಿಳಿಸಲಾಗಿದೆ ಎಂದು ಅಶೋಕ ಹೇಳಿದರು.

ಅಮೇರಿಕನಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಕಾಳ್ಗಿಚಿನಂತೆ ಹಬ್ಬುತ್ತಿವೆ ಸದ್ಯಕ್ಕೆ ಆ ದೇಶದಲ್ಲೊಂದೇ 5 ಕೋಟಿಗೂ ಹೆಚ್ಚು ಸೋಂಕಿತರಿದ್ದಾರೆ ಎಂದು ಹೇಳಿದ ಸಚಿವರು ರಾಜ್ಯದ ಅರೋಗ್ಯ ಸಚಿವ ಡಾ ಕೆ ಸುಧಾಕರ್ ಆ ದೇಶದ ಕೋವಿಡ್ ಸ್ಥಿತಿಯ ಬಗ್ಗೆ ಮಾಹಿತಿ ತರಿಸಿಕೊಂಡಿದ್ದಾರೆ ಎಂದು ಹೇಳಿದರು.

ನಮ್ಮ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಲ್ಲಿ ಪಾಸಿಟಿವಿಟಿ ದರ ಶೇಕಡಾ ಮೂರಕ್ಕಿಂತ ಹೆಚ್ಚಾಗಿದೆ ಎಂದರು. ಸೋಂಕು 20 ರಿಂದ 50 ವರ್ಷ ವಯಸ್ಸಿನವರಿಗೆ ತಾಕುತ್ತಿದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ನಾಳೆ ರಾತ್ರಿಯಿಂದ ಎರಡು ವಾರಗಳ ಕಾಲ ನೈಟ್ ಕರ್ಫ್ಯೂ ಜಾರಿಗೆ ಬರುತ್ತದೆ ಎಂದು ಆರ್ ಆಶೋಕ ಹೇಳಿದರು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »