TOP STORIES:

FOLLOW US

19 ಕ್ರಿಕೆಟಿಗೆ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಉಡುಪಿ ಜಿಲ್ಲೆಯ ಕಟಪಾಡಿಯ ತೇಜಸ್ವಿನಿ


ಅಂಡರ್ – 19 ಕ್ರಿಕೆಟಿಗೆ ಕಟಪಾಡಿಯ ತೇಜಸ್ವಿನಿ

ಕಟಪಾಡಿ, ಅ, 21: ಬಿಸಿಸಿಐ ನಡೆಸುವ ಅಂಡರ್-19 ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಉಡುಪಿ ಜಿಲ್ಲೆಯ ಕಟಪಾಡಿಯ ಕೆಆರ್ ಎಸ್ ಕ್ರಿಕೆಟ್ ಅಕಾಡೆಮಿಯ ತೇಜಸ್ವಿನಿ ಉದಯ್ ಆಯ್ಕೆಯಾಗಿದ್ದಾರೆ.ಇವರು ಆರಂಭಿಕ ಆಟಗಾರ್ತಿ ಮತ್ತು ಮಧ್ಯಮ ವೇಗಿ ಆಗಿದ್ದು,ಭರವಸೆಯ ಬ್ಯಾಟಿಂಗ್ ಮೂಲಕ ರಾಜ್ಯ ತಂಡಕ್ಕೆ ಪ್ರವೇಶ ಮಾಡಿದ್ದಾರೆ.

5ನೇ ವಯಸ್ಸಿನಲ್ಲಿ ಬಿಳಿ ಜೆರ್ಸಿ ತೊಟ್ಟು ಕ್ರಿಕೆಟ್ ಆಡಬೇಕೆಂದು ಹಠಹಿಡಿದ ತೇಜಸ್ವಿನಿಗೆ ಬ್ಯಾಟ್ ಹಿಡಿಯಲು ಹೇಳಿಕೊಟ್ಟು ಶುಭ ಹಾರೈಸಿದ್ದು ಭಾರತದ ಮಾಜಿ ಆಟಗಾರ ಸೈಯದ್ ಕಿರ್ಮಾನಿ ಎಂಬುದು ವಿಶೇಷ.

ಎಂಜಿಎಂ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ,ಕಳೆದ ವರ್ಷ ರಾಜ್ಯ ಸಂಭಾವ್ಯ ತಂಡದಲ್ಲಿದ್ದರು.ಆದರೆ ಪ್ರಧಾನ ತಂಡಕ್ಕೆ ಆಯ್ಕೆಯಾಗಿರಲಿಲ್ಲ. ಈ ವರ್ಷ ಲಭಿಸಿದ ಅವಕಾಶಗಳನ್ನೆಲ್ಲ ಸದುಪಯೋಗಪಡಿಸಿಕೊಂಡರು. ತಂದೆ ಉದಯ್ ಕುಮಾರ್ ಅವರ ಶಿಸ್ತಿನ ತರಬೇತಿ ಕೂಡ ಆಕೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿತು.

ತೇಜಸ್ವಿನಿ ಇತ್ತೀಚೆಗೆ ಶೈನ್ ಅಕಾಡೆಮಿಯಲ್ಲಿ ನಡೆದ ಪಂದ್ಯದಲ್ಲಿ 90 ಎಸೆತಗಳಿಂದ ಶತಕ ಬಾರಿಸಿದ್ದರು. ಇದರಲ್ಲಿ 20 ಬೌಂಡರಿ ಸೇರಿತ್ತು. ವಿವಿಧ ಪಂದ್ಯಗಳಲ್ಲಿ 350ಕ್ಕೂ ಹೆಚ್ಚು ರನ್ ಗಳಿಸಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.

ತೇಜಸ್ವಿನಿಯ ಆಯ್ಕೆ ಕರಾವಳಿಯ ಯುವ ಮಹಿಳಾ ಕ್ರಿಕೆಟಿಗರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ಸಾಮಾನ್ಯವಾಗಿ ರಾಜ್ಯ ತಂಡಕ್ಕೆ ಬೆಂಗಳೂರು ವಲಯದ ಆಟಗಾರರು ಆಯ್ಕೆಯಾಗುವುದೇ ಹೆಚ್ಚು ಉಡುಪಿ ಜಿಲ್ಲೆಯಿಂದ ಮಹಿಳಾ ಕ್ರಿಕೆಟಿಗರೊಬ್ಬರು ರಾಜ್ಯವನ್ನು ಪ್ರತಿನಿಧಿಸುತ್ತಿರುವುದು ಹೆಮ್ಮೆಯ ಸಂಗತಿ.

ಇವರು ಕಟಪಾಡಿಯ ಶ್ರೀಶೈಲ ಹಾಗೂ ಉದಯ್ ಕುಮಾರ್ ದಂಪತಿ ಪುತ್ರಿ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »