TOP STORIES:

19 ಕ್ರಿಕೆಟಿಗೆ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಉಡುಪಿ ಜಿಲ್ಲೆಯ ಕಟಪಾಡಿಯ ತೇಜಸ್ವಿನಿ


ಅಂಡರ್ – 19 ಕ್ರಿಕೆಟಿಗೆ ಕಟಪಾಡಿಯ ತೇಜಸ್ವಿನಿ

ಕಟಪಾಡಿ, ಅ, 21: ಬಿಸಿಸಿಐ ನಡೆಸುವ ಅಂಡರ್-19 ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಉಡುಪಿ ಜಿಲ್ಲೆಯ ಕಟಪಾಡಿಯ ಕೆಆರ್ ಎಸ್ ಕ್ರಿಕೆಟ್ ಅಕಾಡೆಮಿಯ ತೇಜಸ್ವಿನಿ ಉದಯ್ ಆಯ್ಕೆಯಾಗಿದ್ದಾರೆ.ಇವರು ಆರಂಭಿಕ ಆಟಗಾರ್ತಿ ಮತ್ತು ಮಧ್ಯಮ ವೇಗಿ ಆಗಿದ್ದು,ಭರವಸೆಯ ಬ್ಯಾಟಿಂಗ್ ಮೂಲಕ ರಾಜ್ಯ ತಂಡಕ್ಕೆ ಪ್ರವೇಶ ಮಾಡಿದ್ದಾರೆ.

5ನೇ ವಯಸ್ಸಿನಲ್ಲಿ ಬಿಳಿ ಜೆರ್ಸಿ ತೊಟ್ಟು ಕ್ರಿಕೆಟ್ ಆಡಬೇಕೆಂದು ಹಠಹಿಡಿದ ತೇಜಸ್ವಿನಿಗೆ ಬ್ಯಾಟ್ ಹಿಡಿಯಲು ಹೇಳಿಕೊಟ್ಟು ಶುಭ ಹಾರೈಸಿದ್ದು ಭಾರತದ ಮಾಜಿ ಆಟಗಾರ ಸೈಯದ್ ಕಿರ್ಮಾನಿ ಎಂಬುದು ವಿಶೇಷ.

ಎಂಜಿಎಂ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ,ಕಳೆದ ವರ್ಷ ರಾಜ್ಯ ಸಂಭಾವ್ಯ ತಂಡದಲ್ಲಿದ್ದರು.ಆದರೆ ಪ್ರಧಾನ ತಂಡಕ್ಕೆ ಆಯ್ಕೆಯಾಗಿರಲಿಲ್ಲ. ಈ ವರ್ಷ ಲಭಿಸಿದ ಅವಕಾಶಗಳನ್ನೆಲ್ಲ ಸದುಪಯೋಗಪಡಿಸಿಕೊಂಡರು. ತಂದೆ ಉದಯ್ ಕುಮಾರ್ ಅವರ ಶಿಸ್ತಿನ ತರಬೇತಿ ಕೂಡ ಆಕೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿತು.

ತೇಜಸ್ವಿನಿ ಇತ್ತೀಚೆಗೆ ಶೈನ್ ಅಕಾಡೆಮಿಯಲ್ಲಿ ನಡೆದ ಪಂದ್ಯದಲ್ಲಿ 90 ಎಸೆತಗಳಿಂದ ಶತಕ ಬಾರಿಸಿದ್ದರು. ಇದರಲ್ಲಿ 20 ಬೌಂಡರಿ ಸೇರಿತ್ತು. ವಿವಿಧ ಪಂದ್ಯಗಳಲ್ಲಿ 350ಕ್ಕೂ ಹೆಚ್ಚು ರನ್ ಗಳಿಸಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.

ತೇಜಸ್ವಿನಿಯ ಆಯ್ಕೆ ಕರಾವಳಿಯ ಯುವ ಮಹಿಳಾ ಕ್ರಿಕೆಟಿಗರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ಸಾಮಾನ್ಯವಾಗಿ ರಾಜ್ಯ ತಂಡಕ್ಕೆ ಬೆಂಗಳೂರು ವಲಯದ ಆಟಗಾರರು ಆಯ್ಕೆಯಾಗುವುದೇ ಹೆಚ್ಚು ಉಡುಪಿ ಜಿಲ್ಲೆಯಿಂದ ಮಹಿಳಾ ಕ್ರಿಕೆಟಿಗರೊಬ್ಬರು ರಾಜ್ಯವನ್ನು ಪ್ರತಿನಿಧಿಸುತ್ತಿರುವುದು ಹೆಮ್ಮೆಯ ಸಂಗತಿ.

ಇವರು ಕಟಪಾಡಿಯ ಶ್ರೀಶೈಲ ಹಾಗೂ ಉದಯ್ ಕುಮಾರ್ ದಂಪತಿ ಪುತ್ರಿ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »