ಬೆಳ್ಳಿ ಹಬ್ಬದ ಸಂದರ್ಭದಲ್ಲಿ ನಮ್ಮಕುಡ್ಲ ಗೂಡುದೀಪ ಪಂಥ: ಚಾಲನೆ ನೀಡಿದ ಜನಾರ್ದನ ಪೂಜಾರಿ ದಂಪತಿ

ನಮ್ಮ ಕುಡ್ಲ ವಾಹಿನಿ ಆಯೋಜಿಸಿದ್ದ 25ನೇ ವರ್ಷದ ಗೂಡುದೀಪ ಸ್ಪರ್ಧೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಕುದ್ರೋಳಿ ಕ್ಷೇತ್ರದ ನವೀಕರಣ ರೂವಾರಿ ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಹಾಗೂ ಅವರ ಧರ್ಮಪತ್ನಿ ಮಾಲತಿ ಜೆ ಪೂಜಾರಿ ಅವರು ದೀಪ ಬೆಳಗಿಸುವ ಮೂಲಕ ಗೂಡುದೀಪ ಸ್ಪರ್ಧೆಯನ್ನು ಉದ್ಘಾಟಿಸಿದ್ದಾರೆ. ಗೂಡುದೀಪವನ್ನು ಏರಿಸಿ ದೀಪ ಉರಿಸುವ ಮೂಲಕ ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಅವರು ಚಾಲನೆ ನೀಡಿದ್ದಾರೆ. ದೀಪಾವಳಿಯ ಸಂದೇಶ ನೀಡಿದ ಮಾಜಿ ಸಚಿವ ಕೃಷ್ಣ ಜೆ […]