TOP STORIES:

ಗೆಜ್ಜೆಗಿರಿ ನೂತನ ಪಧಾಧಿಕಾರಿಗಳ ಪದಗ್ರಹಣ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿಯ ನೂತನ ಅಧ್ಯಕ್ಷರಾದ ರವಿ ಪೂಜಾರಿ ಚಿಲಿಂಬಿ ಇವರ ನೇತೃತ್ವದ ಪಧಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಇಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜರಗಿತು. ನೂತನ ಪಧಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿದ ಆಡಳಿತ ಸಮಿತಿಯ ನಿಕಟ ಪೂರ್ವ ಅಧ್ಯಕ್ಷರೂ ಹಾಗೂ ನೂತನ ಆಡಳಿತ ಸಮಿತಿಯ ಗೌರವಾಧ್ಯಕ್ಷ ರಾದ ಪೀತಾಂಬರ ಹೆರಾಜೆಯವರು ತಮ್ಮ ಅವಧಿಯಲ್ಲಿ ಕ್ಷೇತ್ರಾಡಳಿತ ಸಮಿತಿಯು ಸತ್ಯ ನ್ಯಾಯ ಪ್ರಾಮಾಣಿಕತೆಯ ಮೂಲಕ ಸಮಾಜದ ಗೌರವಕ್ಕೆ ಯಾವುದೇ ಚ್ಯುತಿ ಬಾರದ ಹಾಗೆ ಕಾರ್ಯ ನಿರ್ವಹಿಸಿದ […]