TOP STORIES:

FOLLOW US

60 ಹೆಚ್ಚು ಕೋವಿಡ್ ಮೃತರ ಶವ ಸಂಸ್ಕಾರ, ಕೊರೋನಾ ವಾರಿಯರ್‌ ನಾಗಾರ್ಜುನ್ ಪೂಜಾರಿ


ನಾಗಾರ್ಜುನ್.ಡಿ.ಪೂಜಾರಿಯವರು ದಿನೇಶ್. ಪೂಜಾರಿ ಹಾಗೂ ಜಯ. ಡಿ. ಪೂಜಾರಿ. ರವರ ಪುತ್ರನಾಗಿದ್ದು, ಉಡುಪಿಯ ಗುಂಡಿಬೈಲಿನಲ್ಲಿ ನೆಲೆಸಿದ್ದಾರೆ. ಉಡುಪಿ ನಗರಸಭೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇವರು ಸತತ ಮೂರು – ನಾಲ್ಕು ತಿಂಗಳಿಂದ ಕೋರೋನಾ ಸೋಂಕಿತ ಮೃತದೇಹವನ್ನು ದಹನ ಮಾಡುವ ಕಾರ್ಯದಲ್ಲಿ ಮತ್ತೆರಡು ಜನ ಒಳಗೊಂಡ ತಂಡಕ್ಕೆ ಸಾರಥಿಯಂತೆ ಇದ್ದು ಅವರಿಗೂ ಧೈರ್ಯ ನೀಡುತ್ತ ಮಾನವೀಯತೆಯಿಂದ ನಿಸ್ವಾರ್ಥವಾಗಿ ಯಾವುದೇ ಅಪೇಕ್ಷೆ ಇಲ್ಲದೆ ಇಂತಹ ಕಾರ್ಯದಲ್ಲಿ ತೊಡಗಿ ಕೊಂಡಿದ್ದಾರೆ.

ಕ್ರಿಕೆಟ್ ಲೋಕದ ಅತ್ಯದ್ಭುತ ಪ್ರತಿಭೆ ಕೂಡಾ ಹೌದು ನಾಗಾರ್ಜುನ್

ತನ್ನ ಹದಿಮೂರನೆಯ ವಯಸ್ಸಿಗೇ ದೊಡ್ಡಣಗುಡ್ಡೆ ಫ್ರೆಂಡ್ಸ್ ತಂಡದ ಮೂಲಕವಾಗಿ ಟೆನಿಸ್ ಕ್ರಿಕೆಟ್ ಗೆ ಪರಿಚಯ ಕಂಡು ನಂತರ ಗುರುಶ್ರೀ ಗುಂಡಿಬೈಲು ಹಾಗೂ ವಿಷ್ಣುಮೂರ್ತಿ ದೊಡ್ಡಣಗುಡ್ಡೆ, ಸಾಟರ್ಡೇ ಪ್ಯಾಂಥರ್ಸ್ ಇಂದ್ರಾಳಿ ಹಾಗೂ ಲೋಕಲ್ ಬಾಯ್ಸ್ ಉಡುಪಿ ತಂಡದ ಪರವಾಗಿ ಬಹಳಷ್ಟು ಪಂದ್ಯಾಟವನ್ನು ಗೆಲ್ಲಿಸಿಕೊಟ್ಟ ಕ್ರಿಕೆಟಿಗ.

ಜಿಲ್ಲೆ ಹಾಗೂ ರಾಜ್ಯಮಟ್ಟದ ಪಂದ್ಯಾವಳಿಗಳಲ್ಲಿ ಆಲ್-ರೌಂಡರ್ ಆಟಗಾರನಾಗಿ ಗುರುತಿಸಿಕೊಂಡರು. ಟೆನಿಸ್ ಕ್ರಿಕೆಟ್‌ನ ಜನಪ್ರಿಯ ತಂಡಗಳಾದ ಉಡುಪಿಯ ಎ.ಕೆ. ಸ್ಪೋರ್ಟ್ಸ್, ಉಡುಪಿ ಫ್ರೆಂಡ್ಸ್, ಬಿಬಿಸಿ ಅಗ್ರಹಾರ, ಸೈಮಂಡ್ಸ್ ಕಡಿಯಾಳಿ, ರಿಯಲ್ ಫೈಟರ್ಸ್ ನಂತಹ ತಂಡಗಳನ್ನು ಪ್ರತಿನಿಧಿಸಿ ಅಪಾರ ಯಶಸ್ಸನ್ನು ಕೂಡಾ ತನ್ನದಾಗಿಸಿಕೊಂಡಿದ್ದಾರೆ.

ಕರಾವಳಿಯ ಭಾಗದಲ್ಲಿ ಜನಪ್ರಿಯತೆಯನ್ನು ಪಡೆದಿರುವ 40 ಗಜಗಳ ಮಾದರಿಯ ಪಂದ್ಯಾಕೂಟಗಳಲ್ಲಿ ಆ ಪಂದ್ಯಾಕೂಟಗಳ ಶ್ರೇಷ್ಠ ತಂಡಗಳೆನಿಸಿಕೊಂಡ ಜಾನ್ಸನ್ ಕುಂದಾಪುರ, ಚಾಲೆಂಜ್ ಕುಂದಾಪುರ , ಈಗಲ್ಸ್ ಕುಂಭಾಶಿಯ ಪರವಾಗಿ ಉತ್ತಮ ನಿರ್ವಹಣೆ ನೀಡಿದ್ದಾರೆ.

2011 ರಿಂದ ಈಚೆಗೆ ತನ್ನನ್ನು ಸಂಪೂರ್ಣವಾಗಿ ಕ್ರಿಕೆಟ್‌ನಲ್ಲಿ ತೊಡಗಿಸಿಕೊಂಡು ಇಲ್ಲಿಯವರೆಗೆ ತನ್ನ ಸಾಧನೆಗಾಗಿ 350 +ಕ್ಕೂ ಮಿಗಿಲಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ, 170ಕ್ಕೂ ಹೆಚ್ಚು ಉತ್ತಮ ದಾಂಡಿಗ ಹಾಗೂ ಉತ್ತಮ ಬೌಲರ್ ಪ್ರಶಸ್ತಿ ಮತ್ತು 45 ಬಾರಿ ಸರಣಿಶ್ರೇಷ್ಠ ಪ್ರಶಸ್ತಿ ಇವರ ಮುಡಿಗೇರಿದೆ.

ಉಡುಪಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ತಂಡಕ್ಕೆ ಸತತ ಮೂರು ವರ್ಷಗಳ ಕಾಲ ಉಚಿತವಾಗಿ ಕ್ರಿಕೆಟ್ ತರಬೇತಿ ನೀಡಿ ಒಟ್ಟು ನಾಲ್ಕು ಬಾರಿ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಒಟ್ಟಾರೆಯಾಗಿ ಉಡುಪಿ ಜಿಲ್ಲೆಯಲ್ಲಿ ತನ್ನ ಉತ್ತಮ ರೀತಿಯ ದಾಂಡಿಗ ಹಾಗೂ ನಿಖರವಾಗಿ ಚೆಂಡನ್ನು ತಿರುಗಿಸಬಲ್ಲ ಚಾಣಾಕ್ಷ ಎಸೆತಗಾರನಾಗಿ ತನ್ನನ್ನು ಗುರುತಿಸಿಕೊಂಡು ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿಕೊಂಡಿದ್ದಾರೆ.

“ಕೋರೋನಾ ಪ್ರಾರಂಭವಾದಾಗ ಪಾಸಿಟಿವ್ ಬಂದ ಪ್ರಕರಣದ ಶವವನ್ನು ಬೀಡಿನಗುಡ್ಡೆಯಲ್ಲಿ ಸುಡಲಾಗಿತ್ತು . ಇದು ಅಲ್ಲಿಗೆ ಬರುವ ಸಾರ್ವಜನಿಕರಿಗೆ ಆತಂಕ ಹುಟ್ಟಿಸಿತ್ತು. ಆದ್ದರಿಂದ ಇಂದ್ರಾಳಿಯಲ್ಲಿರುವ ಶವಾಗಾರವನ್ನು ಸ್ವಚ್ಛ ಗೊಳಿಸಿ ಅಲ್ಲಿ ಸುಡುವ ಕೆಲಸ ಆರಂಭಿಸಿದ್ದೆ. ಐವತ್ತು ಶವಗಳನ್ನ ಸಂಸ್ಕಾರ ಮಾಡುವವರೆಗೆ ಮನೆಯವರಿಗೂ ಗೊತ್ತಿರಲಿಲ್ಲ. ಇಲ್ಲಿ ಎರಡು ಹೆಣ ಸುಡುವ ಪೆಟ್ಟಿಗೆ ಇದೆ. ಈ ಹಿಂದೆ ಕೋವಿಡ್ ನಿಂದ ಮರಣ ಹೊಂದಿದವರನ್ನು ಹೂಳಲಾಗ್ತಾ ಇತ್ತು.

ಆದರೆ ಅದು ಹಿಂದುಗಳ ಕ್ರಮವಲ್ಲ. ಸತ್ತ ಮೇಲೆ ಮನೆಯವರು ಬೂದಿಯೂ ಸಿಕ್ಕಿಲ್ಲ ಎಂಬ ಪಶ್ಚಾತ್ತಾಪ ಪಡಬಾರದಲ್ಲ. ಪಿಪಿಇ ಕಿಟ್ ಬಳಸಿದ ಮೇಲೆ ಅದನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಿ, ಮನೆಯ ಒಳಗೆ ಹೋಗುವ ಮೊದಲು ನನ್ನ ಮತ್ತು ಮನೆಯವರ ಆರೋಗ್ಯದ ದೃಷ್ಟಿಯಿಂದ ಸ್ವಚ್ಚತೆಯನ್ನು ಮಾಡಿಕೊಳ್ಳುವುದನ್ನು ಮರೆಯುವುದಿಲ್ಲ”.

“ಒಂದು ಹೆಣ ಸುಡಲು 350 ರಿಂದ 400 ಕೆಜೆ , ಅಂದರೆ ರೂ 1200 ಕಟ್ಟಿಗೆ ಬೇಕಾಗುತ್ತದೆ. ಕೆಲವರು ಶವ ಸಂಸ್ಕಾರಕ್ಕೆ ಹಣ ಕೊಡುತ್ತಾರೆ. ಇನ್ನು ಬಡವರು ಅಷ್ಟು ಶಕ್ತರಾಗಿರುವುದಿಲ್ಲ. ಆಗ ನಾವೇ ಮುಂದೆ ನಿಂತು ನಿಭಾಯಿಸುತ್ತೇವೆ. ಈ ಎಲ್ಲಾ ಕೆಲಸಕ್ಕೆ ನಗರಸಭೆಯ ಅಧಿಕಾರಿಗಳ ಸಂಪೂರ್ಣ ಬೆಂಬಲ ಇದೆ. ಕೊರೊನ ಸಂಕಷ್ಟ ಸಮಯದಲ್ಲಿ ಇದು ಒಂದು ಸಣ್ಣ ಸೇವೆ ಎಂದು ಕೆಲಸ ಮುಂದುವರಿಸಿದ್ದೇನೆ”, ಎನ್ನುತ್ತಾರೆ ನಾಗಾರ್ಜುನ್.

ಲಾಕ್ ಡೌನ್ ಶುರುವಾದಾಗಿನಿಂದ ಒಂದು ರಜೆಯ ನ್ನೂ ತೆಗೆದುಕೊಂಡಿಲ್ಲವಂತೆ ನಾಗಾರ್ಜುನ್. ಆಗಲೂ ಸ್ಯಾನಿಟೈಸೇಶನ್, ನಿರಾಶ್ರಿತರಿಗೆ ಊಟ ಕೊಡುವುದು ನಡೆದೇ ಇತ್ತು. ಅಲ್ಲದೇ ಪ್ರತಿ ದಿನ 10-30 ಮನೆಗಳಿಗೆ ಹೋಗಿ ಕೊರೋನಾ ಜಾಗ್ರತಿ ಮೂಡಿಸುವ ಕೆಲಸ ಕೂಡ ಮಾಡ್ತ ಇದ್ದಾರೆ.

ಇನ್ನು ನಿತ್ಯದ ಸೇವೆ ಹೊರತು ಪಡಿಸಿ ಕ್ರಿಕೆಟ್ ಆಡುವುದು ಇವರ ಆಸಕ್ತಿ. ಈಗ ಕೆಲಸದ ಒತ್ತಡದಿಂದ ಆಡಲು ಆಗುತ್ತಿಲ್ಲ. ಆದರೂ ಸ್ಥಳೀಯ ಕಡೆ ಕ್ರಿಕೆಟ್ ಪಂದ್ಯಾಟವಿದ್ದರೆ ಇವರು ಹಾಜರ್. ಇಷ್ಟು ಕೆಲಸ ನಿರಂತರ ಮಾಡುತ್ತಿದ್ದರೂ ಎಲೆ ಮರೆ ಕಾಯಿಯಂತೆ ತಮ್ಮ ಸೇವೆಯನ್ನು ಮಾಡುತ್ತಿದ್ದಾರೆ.

Special: Billavaswarriors.com team


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »