TOP STORIES:

ಪ್ರತಿಷ್ಠಿತ ಬಿಲ್ಲವ ಸಾಧಕರಿಗೆ “ಗುರು ಶ್ರೀ“ ಪ್ರಶಸ್ತಿ ಪ್ರಧಾನ ಮತ್ತು ಗುರು ಜಯಂತಿ


 

ಬ್ರಹ್ಮ ಶ್ರೀ ನಾರಾಯಣ ಗುರುಗಳ 168 ಜಯಂತಿ ಪ್ರಯುಕ್ತ ಗುರು ಪೂಜೆಯನ್ನು ದಿನಾಂಕ 9-9-2022 ರಂದು ಮಂಗಳಾದೇವಿ ಪ್ರಾಂಗಣ ದಲ್ಲಿ ನಡೆಸಲು ನಿರ್ಧರಿಸಿದ್ದೇವೆ. ಕಾರ್ಯಕ್ರಮವು ಭಜನೆಯೊಂದಿಗೆ ಪ್ರಾರಂಭಗೊಂಡು, ಸಭಾ ಕಾರ್ಯಕ್ರಮ ಮತ್ತು ಮಹಾಪೂಜೇಯೊಂದಿಗೆ ಸಂಪನ್ನಗೊಳ್ಳಲಿದೆ.

ನಮ್ಮ ಸಂಘವು ಪ್ರಪ್ರಥಮ ಬಾರಿಗೆ ಪ್ರತಿಷ್ಠಿತ ಬಿಲ್ಲವ ಸಮಾಜದಲ್ಲಿ, ವಿವಿಧ ಕ್ಷೇತ್ರದಲ್ಲಿ ತನ್ನದೇ ಆದ ಸೇವೆ ಸಲ್ಲಿಸುತ್ತಿರುವ ಗಣ್ಯ ವ್ಯಕ್ತಿಗಳನ್ನು ಗುರುತಿಸಿ ನೀಡುವ ಸನ್ಮಾನದ ಪ್ರಶಸ್ತಿಯೇ “ಗುರು ಶ್ರೀ ‘.. ಪ್ರಸಕ್ತ ಸಾಲಿನಲ್ಲಿ ಐದು ಕ್ಷೇತ್ರವನ್ನು ಆಯ್ಕೆ ಮಾಡಿದ್ದೇವೆ. 1) ಸಹಕಾರ ಕ್ಷೇತ್ರ,2) ಆಧ್ಯಾತ್ಮಿಕ ಕ್ಷೇತ್ರ 3)ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರ 4) ಯುವಜನ ಮತ್ತು ಕ್ರೀಡಾ ಕ್ಷೇತ್ರ,5)ವೈದ್ಯಕೀಯ ಕ್ಷೇತ್ರ (ಮಹಿಳೆ ).

“ ಗುರು ಶ್ರೀ “ ಪ್ರಶಸ್ತಿ ಗೆ ಆಯ್ಕೆ ಯಾದ ಗಣ್ಯರು.

1) ಸಹಕಾರ ಕ್ಷೇತ್ರ : ಶ್ರೀಯುತ ಚಿತ್ತರಂಜನ್ ಬೋಳಾರ್.. ಸ್ಥಾಪಕರು ಆತ್ಮಶಕ್ತಿ ವಿವಿದೊದ್ದೇಶ ಸಹಕಾರಿ ಸಂಘ.

2) ಆಧ್ಯಾತ್ಮಿಕ ಕ್ಷೇತ್ರ: ಶ್ರೀಯುತ ಎ ವಿದ್ಯಾಧರ್..ಅನುವಂಶಿಕ ಆಡಳಿತ ಮೊಕ್ತೆಸರರು, ಶ್ರೀ ಅರಸುಮುಂಡಿತ್ತಾಯ ದೈವಸ್ಥಾನ ಅತ್ತಾವರ.

3) ಕಲೆ ಮತ್ತು ಸಂಸ್ಕೃತಿಕ ಕ್ಷೇತ್ರ.. ಶ್ರೀಯುತ ಅರವಿಂದ್ ಬೋಳಾರ್.. ಭಾರತೀಯ ಚಲನಚಿತ್ರ ನಟ.

 

4) ಯುವಜನ ಮತ್ತು ಕ್ರೀಡಾ ಕ್ಷೇತ್ರ.ಶ್ರೀಯುತ ದೀಪಕ್ ಅಂಚನ್.. ರಾಜ್ಯ ಮಟ್ಟದ ಕುಸ್ತಿ ಪಟು.

 

5) ವೈದ್ಯಕೀಯ ಕ್ಷೇತ್ರ…ಡಾ. ಮನಿಷಾ. ಏನ್. ಅಸೋಸಿಯೇಟ್ ಪ್ರೊಫೆಸರ್ ENT ಡಿಪಾರ್ಟ್ಮೆಂಟ್ ಕೆಎಂಸಿ ಮಂಗಳೂರು.

ಈ ಐವರು ಸಾಧಕರಿಗೆ ಪ್ರಶಸ್ತಿ ನೀಡಲಾಗುವುದು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ವೇದವ್ಯಾಸ ಕಾಮತ್, ಶಾಸಕರು ಮಂಗಳೂರು ದಕ್ಷಿಣ ವಿಧಾನ ಸಭಾ, ಶ್ರೀ ಉಮಾನಾಥ್ ಕೋಟ್ಯಾನ್ ಶಾಸಕರು ಮೂಲ್ಕಿ ಮೂಡಬಿದ್ರಿ,ಶ್ರೀ ಪ್ರೇಮಾನಂದ ಶೆಟ್ಟಿ, ಮೇಯರ್ ಮಂಗಳೂರು ಮಹಾನಗರ ಪಾಲಿಕೆ.ಶ್ರೀ ಪಿ. ರಮಾನಾಥ್ ಹೆಗ್ಡೆ ಆಡಳಿತ ಮೊಕ್ತೇಸರರು ಶ್ರೀ ಮಹೋತೋಭಾರ ಮಂಗಾದೇವಿ.ಶ್ರೀ ಬಿ ಅಶೋಕ್ ಕುಮಾರ್ ಮೊಕ್ತೇಸರರು ಬೋಳಾರ ಮಾರಿಗುಡಿ, ಶ್ರೀ ಆರ್ ಪದ್ಮರಾಜ್ ಕೋಶಾಧಿಕಾರಿ ಶ್ರೀ ಗೋಕರ್ಣನಾಥ ದೇವಸ್ಥಾನ ಕುದ್ರೋಳಿ ಮಂಗಳೂರು ಇವರು ಭಾಗಾವಹಿಸಲಿದ್ದಾರೆ.ಬಿಲ್ಲವ ಸಂಘ ಮಂಗಳಾದೇವಿ ವತಿಯಿಂದ ಇದೇ ಕಾರ್ಯಕ್ರಮ ದಲ್ಲಿ ಅಶಕ್ತರಿಗೆ ಸಹಾಯಧನವನ್ನು ನೀಡಲಿದ್ದೇವೆ ಎಂದು ಕಾರ್ಯಕ್ರಮ ಸಂಚಾಲಕರಾದ ಶ್ರೀ ರಾಜರತ್ನ ಸನಿಲ್ ತಿಳಿಸಿದರು. ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣಪ್ಪ ಪೂಜಾರಿ, ಕಾರ್ಯದರ್ಶಿ ಶ್ರೀ ರಮಾನಂದ ಪೂಜಾರಿ, ಸದಸ್ಯರಾದ ಶ್ರೀ ಕೀರ್ತಿರಾಜ್, ಶ್ರೀ ಮೋನಪ್ಪ ಹಾಜರಿದ್ದರು. ಕಾರ್ಯದರ್ಶಿ ಶ್ರೀ ರಮಾನಂದ ಪೂಜಾರಿ ಸ್ವಾಗತಿಸಿದರು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »