TOP STORIES:

ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಉಡುಪಿ : ವಾರ್ಷಿಕ ಮಹಾಸಭೆ


ಉಡುಪಿ : ನಾರಾಯಣಗುರು ಅರ್ಬನ್ ಕೋಆಪರೇಟಿವ್ ಬ್ಯಾಂಕ್ ಲಿ, ಉಡುಪಿ, ಇದರ 2021 – 2022 ನೇ ಸಾಲಿನ 20ನೇಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯು ಸೆಪ್ಟೆಂಬರ್‌ 11, ಭಾನುವಾರ ಬಿಲ್ಲವರ ಸೇವಾ ಸಂಘ (ರಿ), ಬನ್ನಂಜೆ ಉಡುಪಿ ಇದರಶಿವಗಿರಿ ಸಭಾಂಗಣದಲ್ಲಿ ಅಧ್ಯಕ್ಷರಾದ ಹರಿಶ್ಚಂದ್ರ ಅಮೀನ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು.
ವಾರ್ಷಿಕ ಸಾಮಾನ್ಯ ಸಭೆಯನ್ನು ಬ್ಯಾಂಕಿನ ಮಾರ್ಗದರ್ಶಕರಾದ ಎಸ್‌ ಕೆ ಸಾಲ್ಯಾನ್ ,ರಾಮಚಂದ್ರ ಕಿದಿಯೂರು ಮತ್ತು ಸೂರ್ಯಪ್ರಕಾಶ್ ಜಂಟಿಯಾಗಿ ಉದ್ಘಾಟಿಸಿ ಶುಭ ಹಾರೈಸಿದರು. ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ ಹರಿಶ್ಚಂದ್ರ ಅಮೀನ್ ಅವರು ಸರ್ವಸದಸ್ಯರುಗಳನ್ನು ಸ್ವಾಗತಿಸಿ ನಮ್ಮ ಬ್ಯಾಂಕ್ಭಾರತೀಯ ರಿಸರ್ವ್ ಬ್ಯಾಂಕಿನ ಮಾನ್ಯತೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದು, ನಮ್ಮ ಬ್ಯಾಂಕ್ ಅಧುನಿಕ ಸೌಲಭ್ಯಗಳಾದ ಕೋರ್ಬ್ಯಾಂಕಿಂಗ್ ,ಆರ್ ಟಿ ಜಿ ಎಸ್ / ನೆಪ್ಟ್ , ಸಿ ಟಿ ಎಸ್ ಚೆಕ್ ಕ್ಲಿಯರಿಂಗ್, ಸೇಫ್ ಲಾಕರ್ ಸೌಲಭ್ಯಗಳನ್ನು ಒಳಗೊಂಡಿದೆ . ಗ್ರಾಹಕರಐದು ಲಕ್ಷದವರೆಗಿನ ಠೇವಣಿಗಳಿಗೆ ಡಿ ಸಿ ಜಿ ಸಿ. ವಿಮಾ ಸೌಲಭ್ಯವನ್ನು ಹೊಂದಿದೆ . ಸ್ವಸಹಾಯ ಗುಂಪಿನ ಸದಸ್ಯರಿಗೆ ಅತ್ಯಂತಕಡಿಮೆ ಬಡ್ಡಿಯ ಸಾಲವನ್ನು ನೀಡುತ್ತಿದ್ದು ಚಿನ್ನಾಭರಣ ಈಡಿನ ಸಾಲ, ಗೃಹ ನಿರ್ಮಾಣ ಸಾಲ, ಅಡಮಾನ ಸಾಲ , ಭದ್ರತಾ ಸಾಲ , ವೈಯಕ್ತಿಕ ಸಾಲ , ವಾಹನ ಸಾಲ ವೇತನಾಧಾರಿತ ಸಾಲ ಹಾಗೂ ವ್ಯಾಪಾರ ಅಭಿವೃದ್ಧಿ ಸಾಲಗಳನ್ನು  ವಾಣಿಜ್ಯ ಬ್ಯಾಂಕಿನ ಬಡ್ಡಿ ದರಕ್ಕೆಸ್ಪರ್ಧಾತ್ಮಕವಾಗಿ ನೀಡಲಾಗುತ್ತದೆ .ಗ್ರಾಹಕರ ಠೇವಣಿಗೆ ಅತ್ಯಧಿಕ ಬಡ್ಡಿಯನ್ನು ನೀಡುತ್ತಿದ್ದು ಹಿರಿಯ ನಾಗರಿಕರಿಗೆ 0.5% ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಗ್ರಾಹಕರ ಹಾಗೂ ಆಡಳಿತ ಮಂಡಳಿಯ ಸಹಕಾರ ಸಿಬ್ಬಂದಿಗಳ ನಗುಮೊಗದ ಸೇವೆ ಸದಸ್ಯರಪ್ರೋತ್ಸಾಹದಿಂದ ನಮ್ಮ ಬ್ಯಾಂಕ್ ಉತ್ತಮ ಲಾಭವನ್ನು ಕಾಣುವಂತಾಗಿದೆ ಎಂದರು.

ಉಪಾಧ್ಯಕ್ಷರಾದ ವಿಜಯಾ ಜಿ ಬಂಗೇರ ಪ್ರಾಸ್ತಾವಿಕದ ಮೂಲಕ ವೇದಿಕೆಗೆ ಬರಮಾಡಿಕೊಂಡರು. ನಿರ್ದೇಶಕರಾದ ಕೆ. ಜಯಕುಮಾರ್‌, ಪ್ರಭಾಕರ ಬಂಗೇರ ಬಿ.ಬಿ. ಪೂಜಾರಿ, ನವೀನ್ ಅಮೀನ್, ಆನಂದ ಜತ್ತನ್ನ, ಡಿ.ಆರ್ ರಾಜು, ಶೇಕರ ಬಿ ಪೂಜಾರಿರಮೇಶ್ ಕೆ ಕೋಟ್ಯಾನ್ ,ಅಶೋಕ್ ಕುಮಾರ್ ,ಅರಣ್ ಜತ್ತನ್ನ      ವೃತ್ತಿಪರ ನಿರ್ದೇಶಕರಾದ ಬಾಸ್ಕರ ಪೂಜಾರಿ ಹಾಗೂ ಕೃಷ್ಣಬಿಲ್ಲವ ಸಭೆಯಲ್ಲಿ ಉಪಸ್ಥಿತರಿದ್ದರು.

ಸದಸ್ಯರಾದ ಗುರದತ್ ಅಮೀನ್ , ಕಟಪಾಡಿ ಶಂಕರ್ ಪೂಜಾರಿ, ರಮೇಶ್  ಬಂಗೇರ ,ಶೇಖರ್ ಕೋಟ್ಯಾನ್ ಮತ್ತು ಸುಲೋಚನಾದಾಮೋದರ್ ಇವರು ಬ್ಯಾಂಕಿನ ಅಭಿವೃದ್ಧಿಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿ ಬ್ಯಾಂಕನ್ನು ಲಾಭದತ್ತ ಮುನ್ನಡೆಸಿದ ಆಡಳಿತಮಂಡಳಿಯನ್ನು ಅಭಿನಂದಿಸಿದರು.

ಬ್ಯಾಂಕಿನ ನಿರ್ದೇಶಕರಾದ ಶಕುಂತಲ ಶ್ರೀನಿವಾಸ್ ಪ್ರಾರ್ಥಿಸಿ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೋಶನ್ ಫೌಸ್ಟಿನ್ಆಲ್ವರವರು ಬ್ಯಾಂಕಿನ 19ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ವರದಿಯನ್ನು ವಾಚಿಸಿದರು. ನಿರ್ದೇಶಕ ಶಿವಾಜಿ ಸುವರ್ಣಅವರು ಧನ್ಯವಾದವಿತ್ತರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »