TOP STORIES:

ಶ್ರೀ ಗೆಜ್ಜೆಗಿರಿ ಮೇಳದ ಮುಂಬೈಯ ವ್ಯವಸ್ಥಾಪಕರಾಗಿ ಶ್ರೀ ನವೀನ್ ಪೂಜಾರಿ ಪಡು ಇನ್ನಾ, ಮುಂಬೈ


ಮಾಯಾನಗರಿ ಮುಂಬೈಯಲ್ಲಿ ಚತುರ ಸಂಘಟಕನಾಗಿ, ನಾಟಕ, ಯಕ್ಷಗಾನ ಮತ್ತು ಚಲನ ಚಿತ್ರ ಸಂಚಾಲಕರಾಗಿ  ಮಿನುಗುತ್ತಿರುವಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ, ಕಮಲ ಕಲಾ ವೇದಿಕೆ ಮುಂಬಯಿಯ ರೂವಾರಿ  ನಮ್ಮ ತುಳುನಾಡ ಪ್ರತಿಭೆ, ಕ್ಯಾಂಟಿನ್ ಉದ್ಯಮಿ ಶ್ರೀ ನವೀನ್ ಪಡು ಇನ್ನಾ, ಮುಂಬೈ ಅವರು ಮೂಲತ ದಕ್ಷಿಣ ಕನ್ನಡ ಜಿಲ್ಲೆಯ ಪಡು ಇನ್ನಾ ಗ್ರಾಮದವರು ತನ್ನಭವಿಷ್ಯದ ಹೊಂಗನಸನ್ನು ಸಾಕಾರಗೊಳಿಸಲು ಮಾಯಾನಗರಿ ಮುಂಬೈಗೆ ಆಗಮಿಸಿ ಫೋರ್ಟ್ ನಲ್ಲಿರುವ ಕನ್ನಡ ಭವನಜ್ಯೂನಿಯರ್ ಕಾಲೇಜಿನಲ್ಲಿ ವಿಧ್ಯಾಭ್ಯಾಸವನ್ನು ಮಾಡುತ್ತಾ ಕ್ಯಾಂಟೀನ್ ಕಾರ್ಮಿಕನಾಗಿ ದುಡಿದು ಮಾಲೀಕರ ಪ್ರೀತಿ ವಿಶ್ವಾಸವನ್ನುಗಳಿಸಿ ನಂತರ ಎಲ್ಲರೊಂದಿಗೆ ಆತ್ಮೀಯತೆಯ ಒಡನಾಟ ಮತ್ತು  ಸಹಕಾರವನ್ನು ಸೂಕ್ತವಾಗಿ ಬಳಸಿಕೊಂಡು ನಗರದಲ್ಲಿ ಯುವಕ್ಯಾಂಟೀನ್ ಉದ್ಯಮಿಯಾಗಿ ತನನ್ನು ಪರಿಚಯಿಸಿಕೊಂಡರು.  ಶ್ರೀ ನವೀನ್ ರವರು ದೈವ ದೇವರ ಧಾರ್ಮಿಕ ಕಾರ್ಯಗಳಲ್ಲೂಕೂಡಾ ತುಂಬಾ ಆಸಕ್ತಿಯನ್ನು ಹೊಂದಿ ತನ್ನ ಶಾಲಾ ದಿನಗಳಿಂದಲೇ ಸಂಘಟನಾ ಚಾತುರ್ಯ ಹಾಗೂ ಕ್ರೀಡಾ ನಾಯಕತ್ವದಗುಣಗಳಿಂದ ಮಾಯಾನಗರಿ  ಮುಂಬಯಿಯಲ್ಲಿ ನವೀನ್ ಪಡು ಇನ್ನಾ ಎಂದೇ ಪರಿಚಿತರಾಗಿ, ಕಲಾಪ್ರೇಮಿ ಯಾಗಿ ಕಳೆದ ಹತ್ತುವರ್ಷಗಳಿಂದ ತನ್ನ ಅಜ್ಜಿಯ ಹೆಸರಲ್ಲಿ ಕಮಲ ಕಲಾ ವೇದಿಕೆ ಎನ್ನುವ ಸಂಸ್ಥೆಯನ್ನು ಸ್ಥಾಪಿಸಿ ಸಂಚಾಲಕತ್ವ ವನ್ನು ವಹಿಸಿ ಸಾಂಸ್ಕ್ರತಿಕಕಾರ್ಯಕ್ರಮಗಳ ಮುಖೇನ ನಾಟಕದ ಪ್ರದರ್ಶನಗಳನ್ನು ಯಶಸ್ವಿಯಾಗಿಆಯೋಜಿಸಿಕೊಂಡು *ತವರೂರ ಹಾಗೂ ನಗರದಸುಮಾರು 50 ಕ್ಕೂ ಹೆಚ್ಚಿನ ಕಲಾವಿದರನ್ನು, ಸಮಾಜ ಸೇವಕರನ್ನು  ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಸನ್ಮಾನಿಸಿದಹೆಗ್ಗಳಿಕೆಗೆ ಪಾತ್ರರಾಗಿದ್ದಾರೆಇವರ ಸಾಮಾಜಿಕ ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಯು ಆರ್ಯಭಟಅಂತರಾಷ್ಟ್ರೀಯ ಪ್ರಶಸ್ತಿ -2017 ನ್ನು ನೀಡಿ ಗೌರವಿಸಿದೆಇಷ್ಟು ಮಾತ್ರವಲ್ಲದೆ ರಾಷ್ಟ್ರ ಪ್ರಶಸ್ತಿ ವಿಜೇತ “ಮದಿಪು” ತುಳುಚಿತ್ರವನ್ನು ತನ್ನ ಚೊಚ್ಚಲ ಸಂಚಾಲಕತ್ವದಲ್ಲಿ  ಮಹಾರಾಷ್ಟ್ರದಾದ್ಯಂತ ಬಿಡುಗಡೆ ಗೊಳಿಸಿ ಸುಮಾರು 20 ಕ್ಕೂ ಮಿಕ್ಕಿದಪ್ರದರ್ಶನಗಳ್ಳನ್ನು ನೀಡಿದ ಕೀರ್ತಿಯನ್ನೂ ಗಳಿಸಿದ್ದಾರೆ.

ಬಾಲ್ಯದಿಂದಲೇ ಪ್ರತಿಭಾವಂತರಾದ ಇವರಿಗೆ ಎಮ್. ವಿ. ಶಾಸ್ತ್ರಿ ಆಯುರ್ವೇದ ಭೂಷಣ ಹೈಸ್ಕೂಲ್ ಇನ್ನಾ ವು ಯುವರತ್ನ ಬಿರುದು, ತುಳುನಾಡ ಸೇವಾ ಸಮಾಜ ಮೀರಾಭಾಯಂದರ್ ರಿಂದ  ಚತುರ ಸಂಘಟಕ‘, ಸಮಾಜಪರಕಲಾ ಸೇವೆಗಾಗಿ ನಮನ ಫ್ರೆಂಡ್ಸ್ ಮುಂಬಯಿ, ಬಿಲ್ಲವರ ಎಸೋಸಿಯೇಶನ್ ಅಂಧೇರಿ ಸ್ಥಳೀಯ ಕಛೇರಿ, ಫ್ರೆಂಡ್ಸ್ ಸರ್ಕಲ್ ಕಣಂಜಾರು  ಮುಂಬಯಿ, ನಮ್ಮ ಕಲಾವಿದೆರ್ ಬೆದ್ರ  ತಂಡದವರಿಂದ ‘ಉತ್ತಮ ಸಂಘಟಕ‘ ಬಿರುದನ್ನು ನೀಡಿರುತ್ತಾರೆ.  ಸಮಾಜದಲ್ಲಿಎಲ್ಲರೊಂದಿಗೂ ಬೆರೆಯುವ ಸ್ವಭಾವದೊಂದಿಗೆ ಹಲವು ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಇವರು ಶ್ರೀ ವಿಠಲಪ್ರತಿಷ್ಠಾಪನೆ ಮುಂಬಯಿ ಇದರ ಯುವ ವಿಭಾಗದ ಸಂಚಾಲಕ ರಾಗಿ, ಶಿವಾಯ್ ಫೌಂಡೇಶನ್ ಮುಂಬಯಿ ಮತ್ತು ರಂಗಮಿಲನ ಮುಂಬಯಿ   ಉಪಾಧ್ಯಕ್ಷ ರಾಗಿ, ಶ್ರೀ ಬ್ರಹ್ಮಶ್ರೀ ಗುರುನಾರಾಯಣ ಭಕ್ತವ್ರಂದ ಇದರ ಗೌ. ಕೋಶಾಧಿಕಾರಿ ಯಾಗಿ, ಇನ್ನಾ ಹಿತವರ್ಧಕ ಸಂಘ ಮುಂಬಯಿ  ಜೊತೆ ಕೋಶಾಧಿಕಾರಿ ಯಾಗಿ, ಯಂಗ್ ಫ್ರೆಂಡ್ಸ್ ಮುಂಬಯಿ ಯ ಸ್ಥಾಪಕ ರಾಗಿ, ಉಮೇಶ್ ಮಿಜಾರ್ ರವರ ನಮ್ಮ ಕಲಾವಿದೆರ್ ಬೆದ್ರ  ಹಾಗೂ ತುಳುವೆರ್ ಉಡಲ್ ಜೋಡುಕಲ್ಲು ನಾಟಕತಂಡಗಳ ಮುಂಬಯಿ ಸಂಚಾಲಕ ರಾಗಿ, ಶ್ರೀ ಸದ್ಗುರು ನಿತ್ಯಾನಂದ ಸೇವಾ ಸಂಘ ಬೇಲಾಪುರ್ ಹಾಗೂ ಸಪ್ತಸ್ವರ ಕಲ್ಚರಲ್ಎಸೋಸಿಯೇಶನ್(ರಿಇದರ ಸಕ್ರಿಯ ಕಾರ್ಯಕರ್ತ  ನಾಗಿ ಕಾರ್ಯ ನಿರ್ವಹಿಸುತ್ತಿರುವುದು ಅತ್ಯಂತ ಶ್ಲಾಘನೀಯವಾದದ್ದು. ಕೋರೋನಾ  ಮಹಾಮಾರಿಯ ಸಂಕಟದ ಪರಿಸ್ಥಿತಿಯಲ್ಲಿ ತಮ್ಮ  ಸಂಸ್ಥೆ ಕಮಲಾ ಕಲಾ ವೇದಿಕೆ  ಆಶ್ರಯದಲ್ಲಿ ದಾನಿಗಳಸಹಾಯದಿಂದ ಸುಮಾರು 200 ಕ್ಕೂ  ಹೆಚ್ಚಿನ ಬಡ ಕುಟುಂಬಗಳಿಗೆ ಸಹಾಯ ಮಾಡಿರುವುದು ನಿಜವಾಗಲೂ ವಂದನೀಯ.

ನವೀನ್ ಪಡು ಇನ್ನಾ ರವರು ತನ್ನ ಬಾಳ ಸಂಗಾತಿ ಜ್ಯೋತಿ ಯವರೊಂದಿಗೆ ದಿನಾಂಕ 29/11/2017 ರಂದು ಸಪ್ತಪದಿ ತುಳಿದುಇದೀಗ ಮುದ್ದು ಕಂದ ಅಧ್ವಿಕ್  ನೊಂದಿಗೆ ಸುಖ ಜೀವನವನ್ನು ನಡೆಸುತ್ತಿದ್ದಾರೆ.

ಇದೀಗ ತೆಂಕುತಿಟ್ಟಿನ ನೂತನ ಮೇಳ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇದರ ಶ್ರೀಗೆಜ್ಜೆಗಿರಿ ಯಕ್ಷಗಾನ ಮೇಳದ ಮುಂಬೈಯ ವ್ಯವಸ್ಥಾಪಕರಾಗಿ ಆಯ್ಕೆಯಾಗಿರುವ ಶ್ರೀಯುತ ಶ್ರೀ ನವೀನ್ ಪೂಜಾರಿ ಪಡು ಇನ್ನಾ ಅವರಿಗೆ ಕ್ಷೇತ್ರದ ವತಿಯಿಂದ ಅಭಿನಂದನೆಗಳೊಂದಿಗೆ ತಮ್ಮ ಮುಂಬೈಯ ವ್ಯವಸ್ಥಾಪಕತ್ವದಲ್ಲಿ ಮಾಯಾನಗರಿ ಮುಂಬೈನಲ್ಲಿ ಶ್ರೀಗೆಜ್ಜೆಗಿರಿ ಮೇಳದ ಗೆಜ್ಜೆಸೇವೆಯ ಹೆಚ್ಚಿನ ಯಕ್ಷಗಾನವನ್ನು ಪ್ರದರ್ಶಿಸುವಂತಾಗಲಿ.  ಶ್ರೀ ಕ್ಷೇತ್ರದ ಸರ್ವ ಶಕ್ತಿಗಳು ಉತ್ತಮ ಆರೋಗ್ಯಭಾಗ್ಯವನ್ನು ಕರುಣಿಸಿ ನಿಮ್ಮ ಎಲ್ಲಾ ಇಷ್ಟಾರ್ಥ ನೆರವೇರಿಸಲಿ ಎಂದು ಪ್ರಾರ್ಥಿಸುತ್ತೇವೆ.

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »