TOP STORIES:

ತುಳು ಸತ್ಯ ಅನಾವರಣದ ಮಹಾಶಕ್ತಿ ಡಾ. ವೆಂಕಟರಾಜ ಪುಣಿಂಚಿತ್ತಾಯ!


ತುಳುವರಿಗೆ ಕುವೆಂಪು, ದ. ರಾ. ಬೇಂದ್ರೆ, ಮಾಸ್ತಿ ಇಂತಹ ಕನ್ನಡ ಕವಿಗಳ ಹೆಸರು ಚಿರಪರಿಚಿತ. ಆಗಾಗ ಅವರ ಕವಿತೆಗಳನ್ನು, ಸಾಹಿತ್ಯಗಳನ್ನು ಓದಿ ಖುಷಿ ಪಡುತ್ತೇವೆ. ಅದರೆ ತುಳು ಕವಿಗಳ ಬಗ್ಗೆ ಕೇಳಿದರೆ ಮಾತ್ರ ಯಾಕೋ ಮುಖ ಮುಖ ನೋಡುತ್ತೇವೆ.

ಯಾರೊಬ್ಬರ ಪರಿಚಯವೂ ನಮಗಿಲ್ಲ. ಅವರ ಬರಹಗಳು ಕವಿತೆಗಳನ್ನಂತೂ ನೋಡಿಯೇ ಇರಲಿಕ್ಕಿಲ್ಲ. ಅನೇಕ ಕವಿಗಳು ಅಥವಾ ಸಾಹಿತಿಗಳು ತುಳು ಭಾಷೆಯಲ್ಲಿ ತುಳು ಭಾಷೆಗಾಗಿ ಅನರ್ಘ್ಯ ಸೇವೆ ಸಲ್ಲಿಸಿದ್ದಾರೆ. ಅಂಥವರಲ್ಲೇ ಒಬ್ಬರು ಡಾ. ವೆಂಕಟರಾಜ ಪುಣಿಚಿತ್ತಾಯ!

ಪುಣಿಚಿತ್ತಾಯರು ಸಾಹಿತಿ ಮಾತ್ರವಲ್ಲ ಸಂಶೋಧಕರು. ತುಳು ಸಾಹಿತ್ಯ ಸಂಶೋಧನೆಯಲ್ಲಿ ಅಗಾಧ ಸಾಧನೆ ಮಾಡಿರುವ ಪುಣಿಂಚಿತ್ತಾಯರು ತುಳುವಿನಲ್ಲಿ ಶಿಷ್ಟ ಸಾಹಿತ್ಯ ಪರಂಪರೆಯೇ ಇರಲಿಲ್ಲ ಎಂಬ ವಾದವನ್ನು ಅಲ್ಲಗಳೆದು 4 ಅತಿ ಪ್ರಾಚೀನ ತಾಡವಾಲೆ ಗ್ರಂಥಗಳನ್ನು ಪತ್ತೆಹಚ್ಚಿ ಅವುಗಳನ್ನು ಕನ್ನಡಕ್ಕೆ ಲಿಪ್ಯಂತರಗೊಳಿಸಿ ವಿಸ್ತಾರವಾದ ಪೀಠಿಕೆ, ಅಡಿಟಿಪ್ಪಣಿ, ಅರ್ಥ ಕೋಶಗಳೊಂದಿಗೆ ಸಂಪಾದಿಸುವ ಮೂಲಕ ತುಳು ಭಾಷೆಗೆ ಭಾರತದ ಇತರ 20 ಭಾಷೆಗಳ ಸಾಲಿನಲ್ಲಿ ಸಮಾನ ಸ್ಥಾನವನ್ನು ದೊರಕಿಸಿಕೊಟ್ಟ ಶ್ರೇಯಸ್ಸು ಹೊಂದಿದ್ದಾರೆ. ಶ್ರೀ ಭಾಗವತೊ, ಕಾವೇರಿ, ದೇವಿ ಮಹಾತ್ಮೆ, ತುಳು ಮಹಾಭಾರತೋ ಈ ಪ್ರಾಚೀನ ತುಳು ಗ್ರಂಥಗಳಾಗಿವೆ. ಹೆಂಗಸರ ಬಾಯಿಯಿಂದ ಕೇಳಿದ ತುಳು ಹಾಡುಗಳ ಬೆನ್ನು ಹತ್ತಿ ಹೋಗಿ ತುಳುವಿಗೂ ಲಿಪಿ ಇದೆ ಎಂದು ತೋರಿಸಿದ ಡಾ. ವೆಂಕಟರಾಜ ಪುಣಿಂಚಿತ್ತಾಯರ ಸಾಧನೆ ತುಳುನಾಡು ಯಾವತ್ತೂ ಮರೆಯಲಾಗದ್ದು.

ಎಲ್ಲ ದ್ರಾವಿಡ ಭಾಷೆಗಳಂತೆ ಸಂಶೋಧನೆಯ ಶಾಸ್ತ್ರೀಯ ಚೌಕಟ್ಟಿನಲ್ಲಿ ತುಳುವಿನ ಬಗ್ಗೆ ಮೊದಲು ಆಸಕ್ತಿ ತೋರಿಸಿದ್ದು ಇಂಗ್ಲಿಷರು. ಆದರೆ, ತುಳುವಿನ ಮೂಲದ ಜಾಡು ಹುಡುಕಿ ಹೊರಟವರು ಪುಣಿಂಚಿತ್ತಾಯರು.

ಅವರನ್ನು ಸಂಶೋಧಕರನ್ನಾಗಿಸಿದ್ದು ಹೊರಗಿನದ್ದಲ್ಲ, ಒಳಗಿನ ಒತ್ತಡ. ಗದ್ದೆಯಲ್ಲಿ ಕಾಯಕ ನಡೆಸುತ್ತಿದ್ದ ಹತ್ತಾರು ಹೆಂಗಸರ ಬಾಯಿಯಿಂದ ಕೇಳಿದ ತುಳು ಹಾಡುಗಳು ಅವರಲ್ಲಿ ಮೂಡಿಸಿದ ಆಸಕ್ತಿ ‘ಶ್ರೀ ಭಾಗವತೋ’ದಂಥ ಪ್ರಾಚೀನ ತುಳು ಕಾವ್ಯದ ಹುಡುಕಾಟ ಸತತ ಸಂಶೋಧನ ಕಾಯಕದ ವರೆಗೆ ತಂದು ನಿಲ್ಲಿಸಿತು.

ಸಂಶೋಧನೆ ಸ್ವಭಾವವನ್ನು ಮೂಲಭೂತವಾಗಿಯೇ ಹೊಂದಿದ್ದ ಪುಣಿಂಚಿತ್ತಾಯರನ್ನು ಪಂಚ ದ್ರಾವಿಡ ಭಾಷೆಗಳ ಪೆಕಿ ತುಳುವನ್ನು ಉಳಿದು ಮಿಕ್ಕ 4ಕ್ಕೂ ಲಿಪಿಯಿದೆ. ಹಾಗಿದ್ದರೆ ತುಳುವಿಗೂ ಲಿಪಿ ಇದ್ದಿರಲೇಬೇಕು ಎಂಬ ಜಿಜ್ಞಾಸೆ ಕಾಡುತ್ತಲೇ ಇತ್ತು. ಪುಣಿಂಚಿತ್ತಾಯರು ಒಮ್ಮೆ ಮಧೂರಿನ ಶಿವನಾರಾಯಣ ಸರಳಾಯ ಅವರ ನಿವಾಸಕ್ಕೆ ತೆರಳಿದ್ದ ವೇಳೆ ಮಾತಿನ ನಡುವೆ ಸರಳಾಯರು ತಂದು ತೋರಿದ ತಾಡವಾಲೆ ಗ್ರಂಥವೇ ಹೊಸ ಅಧ್ಯಾಯ ಬರೆಯಿತು. ಆ ಕೃತಿ ತುಳು ಮಹಾಕಾವ್ಯ ‘ಶ್ರೀಭಾಗವತೋ’.

16ನೇ ಶತಮಾನದ ಅಂದಾಜಿನಲ್ಲಿ ಕವಿ ವಿಷ್ಣುತುಂಗ ಈ ಕತಿ ರಚಿಸಿದ್ದರು. ಇದರ ಜಾಡು ಹಿಡಿದು ಹೋದ ವರು ಕೋಯಿಕೋಡ್ ವಿವಿ ಸಂಸ್ಕೃತ ಗ್ರಂಥಾಲಯದಲ್ಲಿ ಅನಾಥವಾಗಿದ್ದ ತುಳು ಕಾವ್ಯ ‘ಕಾವೇರಿ’ಯನ್ನು ಪತ್ತೆ ಹಚ್ಚಿದರು. ನಂತರ ದೇವಿ ಮಹಾತ್ಮೆ, ನಾಟಿ ವೆದ್ಯ ಪದ್ಧತಿಯ ಚರ್ಚೆಗಳಿರುವ ಗ್ರಂಥವೊಂದನ್ನೂ ಹುಡುಕಿದರು.

ತುಳು ಪಾಡ್ದನಗಳನ್ನು ದೊಡ್ಡ ಪ್ರಮಾಣದಲ್ಲಿ ಸಂಗ್ರಹಿಸಿದ್ದು ತುಳು ಜಾನಪದ ಲೋಕದಲ್ಲಿ ಅಜರಾಮರರನ್ನಾಗಿಸಿದೆ.

Inputs: Beauty of Tulunadu


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »