TOP STORIES:

ಶ್ರೀಯುತ ಗೋಪಾಲಕೃಷ್ಣ ಕುಂದರ್ ಬಜಪೆ ಇವರಿಗೆ ನವಕರ್ನಾಟಕ ರತ್ನ- 2022 ಗೌರವ ಪಶಸ್ತಿ ಪ್ರದಾನ


ಕನ್ನಡ ಭಾಷೆ ಅಳಿಯುವ ಭೀತಿ ಇದೆ ಎನ್ನುವ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸುತ್ತಿದ್ದಾರೆ. ಅಂತಹ ಆತಂಕದಆವಶ್ಯಕತೆಯಿಲ್ಲ. ಎರಡೂವರೆ ಸಾವಿರ ಇತಿಹಾಸವಿರುವ ಕನ್ನಡ ಭಾಷೆಯ ಬೇರುಗಳು ಗಟ್ಟಿಯಾಗಿವೆ. ಅದು ಎಂತಹಬಿರುಗಾಳಿಯನ್ನು ತಡೆದುಕೊಳ್ಳಬಲ್ಲದು, ಕಾಲಕಾಲಕ್ಕೆ ಒಂದಷ್ಟು ಬದಲಾವಣೆ ಯನ್ನು ಕಾಣಬಹುದಷ್ಟೆ ಭಾಷೆ ಗಟ್ಟಿಯಾಗಲು ಅದರಅವಶ್ಯಕತೆ ಇರುತ್ತದೆ. ಸಾಹಿತ್ಯ ರಚನೆ ಭಾಷೆಗೆ ಪುನಶ್ವೇತನ ನೀಡುವ ಮಾಧ್ಯಮ. ಕನ್ನಡದಲ್ಲಿ ಸಾಹಿತ್ಯ ರಚನೆ ಆಗಾದಪ್ರಮಾಣದಲ್ಲಿ ನಿರಂತರವಾಗಿ ನಡೆಯುತ್ತಿದೆ. ಇದು ಕನ್ನಡದ ಅಸ್ತಿತ್ವವನ್ನು ಮತ್ತಷ್ಟು ಬಲಿಷ್ಠ ವಾಗಿ ಸಾಗುತ್ತಿದೆ ಎಂದು .. ಜಿಲ್ಲಾಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್‌.ಕೆ. ಅಭಿಪ್ರಾಯ ಪಟ್ಟರು.

ಮಂಗಳೂರಿನ ಕುದ್ಮಲ್ ರಂಗರಾವ್ ಸಭಾಂಗಣ ದಲ್ಲಿ ನಡೆದ ಹೃದಯವಾಹಿನಿ ಮಂಗಳೂರು ಮತ್ತು ಲಯನ್ಸ್ ಕ್ಲಬ್, ಸ್ಮಾರ್ಟ್ ಸಿಟಿಮಂಗಳೂರು:ಜಂಟಿ ಆಶ್ರಯದಲ್ಲಿ

ಮಂಗಳೂರು ಪುರಭವನದಲ್ಲಿ

ಜರುಗಿದ 16ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ನಾಲ್ಕು ಕೃತಿಗಳನ್ನುಲೋಕಾರ್ಪಣೆಗೊಳಿಸಿ ಕೃಷ್ಣಮೂರ್ತಿ ಅಭಿಜಾಯಪಟ್ಟರು.

ಸಮ್ಮೇಳನಾಧ್ಯಕ್ಷ ಡಾ. ಸತೀಶ್ ಕುಮಾರ್ ಹೊಸಮನಿ ಮಾತನಾಡಿ ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಇಲಾಖೆಆಧುನಿಕರಣಗೊಂಡಿದೆ. ಡಿಜಿಟಲ್ ಗ್ರಂಥಾಲಯದ ಮಾದರಿ ಯನ್ನು ಇತರ ರಾಜ್ಯಗಳು ಅನುಸರಿಸಬೇಕು ಎಂದು ಕೇಂದ್ರ ಸರ್ಕಾರದಮಾರ್ಗಸೂಚಿ ಇದೆ. ಇದು ನಮಗೆ ರಾಷ್ಟ್ರಮಟ್ಟದಲ್ಲಿ ದೊರೆತ ಶ್ರೇಷ್ಠ ಗೌರವವಾಗಿದೆ ಎಂದರು.

ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್, ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಹರಿಕೃಷ್ಣಪುನರೂರು ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷ ಚಿತ್ತರಂಜನ್ ಬೋಳೂರು ಮುಂತಾದ ಗಣ್ಯರು ಭಾಗವಹಿಸಿದ್ದಾರೆ.

ಸಾರ್ವಜನಿಕ ಕ್ಷೇತ್ರದಲ್ಲಿ, ಅಪರಾಧ ಮುಕ್ತ ಸಮಾಜದ ನಿರ್ಮಾಣ ಪರಿಕಲ್ಪನೆಯ ಬಗ್ಗೆ ಪಾಠ ಮಾಡುತ್ತಿರುವ

ಶ್ರೀಯುತ ಗೋಪಾಲಕೃಷ್ಣ ಕುಂದರ್ ಬಜಪೆ  ಇವರಿಗೆ ನವಕರ್ನಾಟಕ ರತ್ನ– 2022 ಗೌರವ ಪಶಸ್ತಿ ಪ್ರದಾನ ಮಾಡಲಾಯಿತು.

ಸಮ್ಮೇಳನ ಸಮಿತಿ ಸ್ಥಾಪಕ ಅಧ್ಯಕ್ಷ ಕೆ.ಪಿ.ಮಂಜುನಾಥ್ ಸಾಗರ್ ಸ್ವಾಗತಿಸಿದರು.  ಪ್ರಿಯಾ ಮೊಂತೇರೊ ಕಾರ್ಯಕ್ರಮನಿರೂಪಿಸಿದರು. ಜಿ.ಕೆ. ಹರಿಪ್ರಸಾದ್ ಧನ್ಯವಾದ ಅರ್ಪಿಸಿದರು


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »