TOP STORIES:

ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ ಸೇರಿದಂತೆ ಸುಮಾರು 26 ಪಂಗಡಗಳಿಗೆ ರಾಜ್ಯ ಸರ್ಕಾರ ಎಂದು ಭಾವಿಸಿದೆ: ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌.


ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ ಸೇರಿದಂತೆ ಸುಮಾರು 26 ಪಂಗಡಗಳಿಗೆ ರಾಜ್ಯ ಸರ್ಕಾರ ಹೊಸತಾಗಿ ಸ್ಥಾಪಿಸಲು ಆದೇಶನೀಡಿರುವ, ‘ಬ್ರಹ್ಮಶ್ರೀ ನಾರಾಯಣಗುರು ಕೋಶವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು ವಿರೋಧಿಸಿದ್ದು,‘ರಾಜ್ಯದ ಬಿಜೆಪಿ ಸರ್ಕಾರ ಬಿಲ್ಲವ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದಂತಿದೆಎಂದುಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ರಾಜ್ಯದ ನಾಲ್ಕನೇ ಅತೀ ದೊಡ್ಡ ಸಮುದಾಯವಾದ, ಸುಮಾರು 70 ಲಕ್ಷಜನಸಂಖ್ಯೆ ಇರುವ ಬಿಲ್ಲವಈಡಿಗ ಸಮುದಾಯಕ್ಕೆ ಒಂದು ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಇರುವ ಸಮಸ್ಯೆ ಏನು? ಇದು ಸರ್ಕಾರಕ್ಕೆಬಿಲ್ಲವ ಸಮುದಾಯದ ಮೇಲೆ ಇರುವ ತಾತ್ಸಾರ ಭಾವನೆ ಅಲ್ಲದೆ ಮತ್ತೇನು?” ಎಂದು ಕೇಳಿದರು.

ಬಿಲ್ಲವ ಸಮುದಾಯಕ್ಕೆ ನಿಗಮ ಸ್ಥಾಪಿಸಬೇಕು ಎಂದು ಆರು ವರ್ಷದಿಂದ ಹೋರಟ ಮಾಡುತ್ತಿದ್ದೇವೆ. ತೀರಾ ಕಡಿಮೆ ಜನಸಂಖ್ಯೆಇರುವ ಹಲವು ಹಿಂದುಳಿದ ಸಮುದಾಯಕ್ಕೆ ನಿಗಮಗಳನ್ನು ಸ್ಥಾಪಿಸಲಾಗಿದೆ, ಬಗ್ಗೆ ನಮಗೆ ತಕರಾರು ಏನಿಲ್ಲ. ಅದರ ಜೊತೆಗೆಆರ್ಥಿಕವಾಗಿ ಬಲಿಷ್ಠರಾಗಿರುವ ಒಕ್ಕಲಿಗ, ಬ್ರಾಹ್ಮಣ ಮತ್ತು ಮರಾಠ ಸಮುದಾಯಗಳಿಗೆ ನಿಗಮಗಳಿವೆ. ಆದರೆ ಬಿಲ್ಲವಈಡಿಗಸಮುದಾಯಕ್ಕೆ ಒಂದು ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಸಮಸ್ಯೆಯೇನಿದೆಎಂದು ಪ್ರಶ್ನಿಸಿದರು.

ಸರ್ಕಾರ ಹೊಸದಾಗಿ ನೀಡಿರುವಕೋಶವನ್ನು ಸ್ಥಾಪನೆ ಮಾಡದೆ ಇದ್ದರೆ ಒಳ್ಳೆಯದಿತ್ತು. ‘ಕೋಶಸ್ಥಾಪನೆ ಎಂಬುವುದು ಚುನಾವಣೆಹತ್ತಿರ ಇರಬೇಕಾದರೆ ಜನರನ್ನು ದಾರಿ ತಪ್ಪಿಸುವ ಒಂದು ದಾರಿಯಷ್ಟೆ. ನಿಗಮಕ್ಕೂ ಕೋಶಕ್ಕು ಬಹಳಷ್ಟು ವ್ಯತ್ಯಾಸವಿದೆ, ಇದರಿಂದಸಮುದಾಯಕ್ಕೆ ಒಂದಿಷ್ಟು ಲಾಭವಿಲ್ಲ ಎಂದು ಪದ್ಮರಾಜ್ ಹೇಳಿದರು.

ನಿಗಮ ಎಂದರೆ ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಅದಕ್ಕೆ ಒಂದು ಸ್ವಾಯತ್ತತೆ ಇರುತ್ತದೆ. ಅದಕ್ಕೆ ತನ್ನದೇ ಆದ ಕಾನೂನು, ಸಂವಿಧಾನ ಇರುತ್ತದೆ. ನಿಗಮಕ್ಕೆ ಒಬ್ಬ ಅಧ್ಯಕ್ಷರು ಇರುತ್ತಾರೆ, ಸದಸ್ಯರು ಇರುತ್ತಾರೆ, ನಿದೇಶಕರು ಇರುತ್ತಾರೆ. ಇಲ್ಲೆಲ್ಲಾ ಸಮುದಾಯದಪ್ರತಿನಿಧಿಗಳಿದ್ದು, ಇವರೆಲ್ಲಾ ತಮ್ಮ ಪರಿಧಿಯಲ್ಲಿ ಸಮುದಾಯದ ಅಭಿವೃದ್ಧಿಗಾಗಿ ಕೆಲಸ ಮಾಡುವ ಅಧಿಕಾರ ಇರುತ್ತದೆ. ಕೋಶಎಂದರೆ, ನಿರ್ದೇಶನಾಲಯ ಅಡಿಯಲ್ಲಿ ಬರುವ ಒಂದು ಸಣ್ಣ ಅಂಗ ಸಂಸ್ಥೆ ಮಾತ್ರವಾಗಿದೆಎಂದು ಅವರು ತಿಳಿಸಿದರು.

ಕೋಶಕ್ಕೆ ಸರ್ಕಾರದ ಕಡೆಯಿಂದ ಒಬ್ಬ ಅಧಿಕಾರಿ ಇರುತ್ತಾರೆ ಎಂಬುವುದನ್ನು ಬಿಟ್ಟು, ಅಧಿಕಾರಿಗೆ ಕೂಡಾ ಯಾವುದೇ ಅಧಿಕಾರಇರುವುದಿಲ್ಲ. ಎಲ್ಲವನ್ನೂ ತನ್ನ ಮೇಲಾಧಿಕಾರಿಯ ಅಡಿಯಲ್ಲೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಸಮುದಾಯವನ್ನುಪ್ರತಿನಿಧಿಸುವ ಒಬ್ಬನೇ ಒಬ್ಬ ಸದಸ್ಯ ಕೋಶದಲ್ಲಿ ಇರುವುದಿಲ್ಲ. ಇದೊಂದು ಹಲ್ಲಿಲ್ಲದ ಹಾವು ಎಂದೇ ಹೇಳಬಹುದುಎಂದುಅವರು ಅಭಿಪ್ರಾಯಪಟ್ಟರು.

ಚುನಾವಣೆ ಹೊತ್ತಿಗೆ ನಾವು ಹಿಂದುಳಿದ ವರ್ಗಗಳಿಗೆಏನೋನೀಡಿದ್ದೇವೆ ಎಂದು ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಕೇವಲ ಬಿಲ್ಲವಸಮಾಜಕ್ಕೆ ಮಾತ್ರವಲ್ಲ, ಸಮಸ್ತ ಹಿಂದುಳಿದ ವರ್ಗಗಳನ್ನು ಮತ್ತೇ ಹಿಂದುಳಿಯುವಂತೆ ಮಾಡುವ ಎಲ್ಲಾ ಪ್ರಯತ್ನಗಳು ನಡೆಯುತ್ತಲೆಇವೆ. ಸರ್ಕಾರ ಹೊಸದಾಗಿ ರಚಿಸಲಿರುವ ಕೋಶವು ನಿಗಮಗಳು ಮಾಡುವ 2% ಕೆಲಸಗಳನ್ನು ಮಾಡುವುದಿಲ್ಲಎಂದು ಅವರುಅಸಮಾಧಾನ ವ್ಯಕ್ತಪಡಿಸಿದರು.

ಕೋಶಕ್ಕೆ ಅನುದಾನ ನೀಡುತ್ತೇವೆ ಎಂದು ಸರ್ಕಾರ ಹೇಳಿದೆ, ಆದರೆ ಎಷ್ಟು ನೀಡುತ್ತೇವೆ ಎಂದು ಇನ್ನೂ ಹೇಳಿಲ್ಲ ಎಂದು ಹೇಳಿದಪದ್ಮರಾಜ್, “ನನ್ನ ಪ್ರಕಾರ ಹೆಚ್ಚೆಂದರೆ 10 ರಿಂದ 15 ಕೋಟಿ ನೀಡಬಹುದು. ಆದರೆ ನಿಗಮಗಳಿಗೆ ಕಡಿಮೆಯೆಂದರೂ 100-200 ಕೋಟಿ ನೀಡಬೇಕಾಗುತ್ತದೆ. ಒಂದು ವೇಳೆ ಕೋಶಕ್ಕೆ 100 ಕೋಟಿ ಕೊಡುತ್ತೇವೆ ಎಂದರೂ ಅದನ್ನು ಸಮುದಾಯದ ಅಭಿವೃದ್ಧಿಗೆಸುಲಭದಲ್ಲಿ ಖರ್ಚು ಮಾಡಲು ಸಾಧ್ಯವಿಲ್ಲ

ಹಿಂದೆ ಶೇಂದಿ ಇಳಿಸುವವರಿಗೆ ಪರ್ಯಾಯ ಉದ್ಯೋಗಕ್ಕೆ ಸಹಾಯ ಎಂದು ಸಿದ್ದರಾಮಯ್ಯ ಸರ್ಕಾರ 12 ಕೋಟಿ ರೂ. ಅನುದಾನ ಮೀಸಲು ಇಡಲಾಗಿತ್ತು. ಆದರೆ ಅದರಲ್ಲಿ ಖರ್ಚಾಗಿದ್ದು, 2-3 ಕೋಟಿ ಮಾತ್ರ. ಉಳಿದ ಹಣ ಈಗಲೂ ಇದೆ. ಇದೇ ರೀತಿಕೋಶದಲ್ಲೂ ನಡೆಯುತ್ತದೆಎಂದು ತಿಳಿಸಿದರು.

ಒಂದು ವೇಳೆ ಹತ್ತು ಕೋಟಿ ನೀಡುತ್ತೇವೆ ಎಂದು ಹೇಳಿದರೂ, ಕೋಶದಲ್ಲಿ ಸಮುದಾಯದ ಯಾವೊಬ್ಬ ಪ್ರತಿನಿಧಿಯು ಇರದೆಇದ್ದುದರಿಂದ ಅದನ್ನು ಕೂಡಾ ಹಲವು ಕಾರಣಗಳನ್ನು ನೀಡಿ ಹಾಗೆಯೆ ಇಡುತ್ತಾರೆಯೆ ಹೊರತು ಬಳಸುವುದಿಲ್ಲ. ಬ್ರಾಹ್ಮಣ ಮತ್ತುಲಿಂಗಾಯತ ನಿಗಮವನ್ನು ನೀಡಿದ್ದು ತೀರಾ ಇತ್ತೀಚೆಗೆ ಹೀಗಿರುವಾಗ ಬಿಲ್ಲವರಿಗೆ ನಿಮಗವನ್ನು ಯಾಕೆ ನೀಡಬಾರದುಎಂದುಪದ್ಮರಾಜ್ ಆರ್‌‌. ಹೇಳಿದರು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »