TOP STORIES:

ಶ್ರೀ ಕ್ಷೇತ್ರ ಕುಕ್ಕಾಜೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಧ್ಯಕ್ಷರಾಗಿ ಡಾ.ಗೀತಪ್ರಕಾಶ್ ಆಯ್ಕೆ


ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ದೇವಸ್ಥಾನದಲ್ಲಿ ಮಾ.5ರಿಂದ ಮಾ.10ರವರೆಗೆ ನಡೆಯುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ ಭಾನುವಾರ ನಡೆಯಿತು.

                                                                                                                                                           

                                                                                                                           

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಸಭೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿ, ದೇಗುಲ ನಿರ್ಮಾಣವೆಂದರೆ ಧರ್ಮ, ಸಂಸ್ಕ್ರತಿಯ ಅನಾವರಣವಾಗಿದೆ. ಬ್ರಹ್ಮಕಲಶೋತ್ಸವ ಧರ್ಮ ಸಂರಕ್ಷಣೆಯ ಕಾರ್ಯವೂ ಆಗಿದೆ. ಸುವಸ್ತುಗಳನ್ನು ಸಮರ್ಪಿಸಿ ಸೇವೆ ಸಲ್ಲಿಸುವ ಅವಕಾಶ ಇದಾಗಿದೆ. ಭವ್ಯತೆಯ ಸೃಷ್ಟಿಗೆ ದಿವ್ಯ ದೃಷ್ಟಿ ಬೇಕು. ತಾಯಿಯ ಸೇವೆಗೆ ಯಾರೂ ಸೇರಿಕೊಳ್ಳಬಹುದು. ಅನ್ನದಾನ ವ್ಯವಸ್ಥಿತವಾಗಿರಬೇಕು. ಸ್ವಚ್ಛತೆಗೆ ಆದ್ಯತೆ ಕೊಡಬೇಕು. ಅತಿಥಿಗಳ ಉಪಚಾರ ಉತ್ತಮವಾಗಿರಬೇಕು. ಅರ್ಥಿಕ ಕ್ರೋಡೀಕರಣ, ಮಹಿಳೆಯರು ಯುವಕರ ತಂಡಗಳ ತಯಾರಾಗಬೇಕು. ಶಿಸ್ತು ಸಂಯಮ ಇದ್ದ ಸಂಘಟನೆ ಯಶಸ್ವಿಯಾಗುತ್ತದೆ ಎಂದರು.

ಶ್ರೀ ಕ್ಷೇತ್ರ ಕುಕ್ಕಾಜೆಯ ಶ್ರೀಕೃಷ್ಣ ಗುರೂಜಿ ಮಾತನಾಡಿ ಸಾನ್ನಿಧ್ಯದ ಕಾಳಿಕಾಂಬೆ, ಆಂಜನೇಯರ ಇಚ್ಛೆಯಂತೆ, ನಿಮ್ಮೆಲ್ಲರ ಪ್ರೀತಿ,ಭಕ್ತಿ, ಸಹಕಾರದಿಂದ ದೇಗುಲ ಜೀರ್ಣೋದ್ಧಾರಗೊಂಡಿದೆ. ಪ್ರಾಂಜಲ ಮನಸ್ಸಿನ ಭಕ್ತರ ಸರ್ವರೀತಿಯ ಸೇವೆಯಿಂದ ಬ್ರಹ್ಮಕಲಶೋತ್ಸವ ಸಾಂಗವಾಗಿ ನೆರವೇರಲಿದೆ ಎಂದರು.
ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಎಂ.ಕೆ.ಕುಕ್ಕಾಜೆ ಅಧ್ಯಕ್ಷತೆ ವಹಿಸಿದ್ದರು.

ಯತೀಶ್ ಆಳ್ವ ಏಳ್ನಾಡುಗುತ್ತು, ವಿಟ್ಲ ಬಿಲ್ಲವ ಸಂಘದ ಬೆಳ್ಳಿಹಬ್ಬ ಸಂಭ್ರಮ ಸಮಿತಿ ಅಧ್ಯಕ್ಷ ಡಾ.ಗೀತಪ್ರಕಾಶ್, ನಿವೃತ್ತ ಮುಖ್ಯೋಪಾಧ್ಯಾಯ ಲಕ್ಷ್ಮಣ ನಾಯ್ಕ ಕಣ್ಣಕಜೆ, ನವೀನ ತಾರಿದಳ, ಸದಾಶಿವ ಶೆಟ್ಟಿ ಬೀಡಿನಬೈಲು, ಶೀನ ನಾಯ್ಕ ಅಡ್ಯನಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪುರುಷೋತ್ತಮ ಕಾರ್ಯಾಡಿ, ಐತ್ತಪ್ಪ ಪೂಜಾರಿ, ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸೇವಾ ಪ್ರತಿನಿಧಿ ಗುಲಾಬಿ ಎನ್., ಹರೀಶ್ ಮಣಿಯಾಣಿ ತಚ್ಚಮೆ, ವಿಠಲ ಶೆಟ್ಟಿ ಸುಣ್ಣಂಬಳ ಮತ್ತಿತರರು ಉಪಸ್ಥಿತರಿದ್ದರು.

ಶ್ರೀಧರ ಬಾಳೆಕಲ್ಲು ಸ್ವಾಗತಿಸಿದರು. ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣ್ ಅಳಿಕೆ ವಂದಿಸಿದರು.
ಬ್ರಹ್ಮಕಲಶ ಸಮಿತಿ ಅಧ್ಯಕ್ಷರಾಗಿ ಡಾ.ಗೀತಪ್ರಕಾಶ್ ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಒಡಿಯೂರು ಶ್ರೀ, ಮಾಣಿಲಶ್ರೀ, ಕಣಿಯೂರುಶ್ರೀ ಅವರನ್ನು ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »