TOP STORIES:

ಕಂಬಳ ಲೋಕದ ಕಿಂಗ್‌ ‘ತಾಟೆ’: ₹ 8 ಲಕ್ಷಕ್ಕೂ ಅಧಿಕ ದರಕ್ಕೆ ಮಾರಾಟವಾಗಿದ್ದ ಕೋಣದ ಸಾಧನೆ ಏನು..?


ಮಂಗಳೂರು, ನವೆಂಬರ್‌ 6: ಕರಾವಳಿಯಲ್ಲಿ ಕಂಬಳ ಕಲರವ ಆರಂಭವಾಗಿದೆ. ಋತುವಿನ ಆರಂಭದ ಎರಡೂಕಂಬಳಗಳು ಭರ್ಜರಿ ಯಶಸ್ಸುಗಳಿಸಿದೆ.

ಜೊತೆಗೆ ಕಂಬಳ ಕ್ಷೇತ್ರದ ಅತೀ ವೇಗದ ಓಟದ ಕೋಣ ಎಂಬ ಬಿರುದು ಪಡೆದತಾಟೆಎಂಬ ಕಂಬಳ ಕೋಣದ ಯಶಸ್ಸಿನನಾಗಲೋಟವೂ ಮುಂದುವರಿದಿದೆ. ಕಳೆದ ಎರಡು ಕಂಬಳದಲ್ಲೂ ಅಡ್ಡಹಲಗೆ ವಿಭಾಗದಲ್ಲಿತಾಟೆಕೋಣ ಪ್ರಥಮಸ್ಥಾನವನ್ನು ಪಡೆದಿದೆ.

ಕ್ರಿಕೆಟ್ ಲೋಕದ ದಿ ಬೆಸ್ಟ್ ಫಿನಿಷರ್ ಮಹೇಂದ್ರ ಸಿಂಗ್ ಧೋನಿಯಾದರೆ ಕಂಬಳ ಕ್ಷೇತ್ರದ ದಿ ಬೆಸ್ಟ್ ಫಿನೀಶರ್ ತಾಟೆಕೋಣ ಎನ್ನುವುದು ಕಂಬಳ ಕೂಟದ ಲಕ್ಷಾಂತರ ಮಂದಿ ಕಂಬಳ ಕೂಟದ ಅಭಿಮಾನಿಗಳ ಮಾತಾಗಿದೆ.


ಎಂಟೂ ಮುಕ್ಕಾಲು ಲಕ್ಷ ರೂಪಾಯಿಗೆ ಮಾರಾಟವಾಗಿದ್ದ ತಾಟೆ

ಕೊನೆಯ ಹತ್ತು ಮೀಟರ್ ದೂರದಲ್ಲಿ ಗಾಳಿಯನ್ನು ಸೀಳಿ ಮುನ್ನುಗ್ಗುವ ತಾಟೆ ಎಲ್ಲರ ಹುಬ್ಬೇರಿಸುವಂತೆ ವಿಜಯದ ಗುರಿತಲುಪುತ್ತದೆ. ಇದೇ ಮಾದರಿಯಲ್ಲಿ ನೂರಾರು ಪ್ರಶಸ್ತಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಕಂಬಳ ಕ್ಷೇತ್ರಕ್ಕೆ ಹಗ್ಗ ಕಿರಿಯವಿಭಾಗದಲ್ಲಿ ಕಾಲಿಟ್ಟ ತಾಟೆ ಬಳಿಕ ಹಿಂದೆ ತಿರುಗಿ ನೋಡಲೇ ಇಲ್ಲ. ಹಗ್ಗ ಕಿರಿಯ ವಿಭಾಗದಲ್ಲಿ ನೂರಾರು ಪದಕಗಳನ್ನುಸಂಪಾದಿಸಿದ ಬಳಿಕ ನೇಗಿಲು ಹಿರಿಯ ವಿಭಾಗಕ್ಕೆ ಕಾಲಿಟ್ಟಾಗ ಎಂಟೂ ಮುಕ್ಕಾಲು ಲಕ್ಷ ರೂಪಾಯಿಗೆ ಕಂಬಳದ ಪ್ರಸಿದ್ಧಕೋಣಗಳ ಯಜಮಾನ ಇರುವೈಲು ಪಾಣಿಲ ಬಾಡ ಪೂಜಾರಿಯವರ ಮಡಿಲು ಸೇರಿದೆ. ಇಷ್ಟು ದೊಡ್ಡ ಮೊತ್ತದಲ್ಲಿ ಕೋಣಮಾರಾಟವಾಗಿದ್ದು ಕಂಬಳ ಕ್ಷೇತ್ರದಲ್ಲೇ ಭಾರಿ ಸಂಚಲನ ಮೂಡಿಸಿತ್ತು.

ಕಂಬಳದಲ್ಲಿ ಬೊಟ್ಟಿಮಾರ್ ಮತ್ತು ತಾಟೆ ಕೋಣಗಳ ಜೋಡಿ ಮೋಡಿ

ಇರುವೈಲುಗೆ ಬಂದ ಬಳಿಕ ಬೊಟ್ಟಿಮಾರ್ ಮತ್ತು ತಾಟೆ ಕೋಣಗಳ ಜೋಡಿ ಕಂಬಳ ಪ್ರೇಮಿಗಳನ್ನು ಮೋಡಿ ಮಾಡಿದೆ. ಹಲವುವರ್ಷಗಳ ಕಾಲ ಕೋಣಗಳ ಜೋಡಿ ಕಂಬಳ ಕೂಟದಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಬಾಚಿದೆ. 2019ರಲ್ಲಿ ಮಂಗಳೂರಿನಐಕಳದಲ್ಲಿ ನಡೆದ ಕಾಂತಾಭಾರೆ ಬೂಧಭಾರೆ ಜೋಡುಕರೆ ಕಂಬಳಕೂಟದಲ್ಲಿ ಕಂಬಳ ಇತಿಹಾಸದ ಅತೀ ವೇಗದ ಓಟ ಓಡಿದಖ್ಯಾತ ಓಟಗಾರ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡರ ಅಂದಿನ ಸಾಧನೆಗೆ ಕಾರಣ ಇದೇ ತಾಟೆ ಎನ್ನುವುದು ಕೂಡವಿಶೇಷವಾಗಿದೆ.

ತಾಟೆಯ ಓಟವನ್ನು ನೋಡಲೆಂದೇ ಕಂಬಳಕ್ಕೆ ಜನ ಸಾಗರ

ಕಂಬಳ ಕೂಟದಲ್ಲಿ ಎಲ್ಲರ ಕಣ್ಮನ ಸೆಳೆಯುವ ತಾಟೆ ಕೋಣ ಓಡುವ ರೀತಿಯೇ ಬಹಳ ವಿಶಿಷ್ಠವಾಗಿದೆ. ತಲೆ ಎತ್ತಿ ಓಡುವತಾಟೆ ವಿಜಯದ ಗುರಿಗೆ ಹಾರಿ ರೇಸ್‌ ಅನ್ನು ಅಂತಿಮ ಮಾಡುವುದೇ ವಿಶೇಷವಾಗಿದೆ. ಇಂದಿಗೂ ಜನ ಕಂಬಳಕ್ಕೆ ತಾಟೆಯಓಟವನ್ನು ನೋಡಲೆಂದೇ ಬರುವುದು. ಸದ್ಯ ನಾರಾವಿ ಯುವರಾಜ ಜೈನ್ ಅವರ ಯಜಮಾನಿಕೆಯ ತಂಡದಲ್ಲಿರುವ ತಾಟೆ, ಅಡ್ಡ ಹಲಗೆ ವಿಭಾಗದಲ್ಲಿ ಎರಡೂ ಕಂಬಳ ಕೂಟದಲ್ಲಿ ಪ್ರಥಮ ಸ್ಥಾನ ಗಳಿಸಿ ಯಜಮಾನನ ನಂಬಿಕೆ ಉಳಿಸಿದೆ.

ತಾಟೆ ಓಟ ಸಾಮಾಜಿಕ ಜಾಲತಾಣದಲ್ಲಿ ವೈರಲ್‌

ಒಟ್ಟಿನಲ್ಲಿ ಕರಾವಳಿಯಲ್ಲಿ ಕಂಬಳ ರಂಗು ಹೆಚ್ಚಾಗಿದೆ. ಓಟಗಾರನ ಪ್ರಸಿದ್ಧಿಗೆ ಓಡುವ ಕೋಣದ ಪ್ರಸಿದ್ಧಿಯೇಜಗದಗಲವಾಗಿದ್ದು ಕಂಬಳದ ಮೇಲಿರುವ ಜನರ ಪ್ರೀತಿಗೆ ಸಾಕ್ಷಿಯಾಗಿದೆ. ತಾಟೆಯ ಓಟದ ವಿಡಿಯೋಗಳು ಸಾಮಾಜಿಕಜಾಲತಾಣದಲ್ಲಿ, ರೀಲ್ಸ್‌ ಮೂಲಕ ಜನಪ್ರಿಯತೆ ಪಡೆಯುತ್ತಿದೆ. ಚಿಗರೆಯ ಓಟದ ತಾಟೆಯನ್ನು ಅಭಿಮಾನಿಗಳು ಪ್ರೀತಿಯಿಂದಕಿಂಗ್ ತಾಟೆ ಎಂದು ಬಿರುದು ನೀಡಿ ಅಭಿಮಾನ ತೋರಿಸಿದ್ದಾರೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »