TOP STORIES:

FOLLOW US

ಬಿಲ್ಲವರ ಹಾದಿ ತಪ್ಪಿಸುತ್ತಿರುವ ಸರ್ಕಾರ : ಪದ್ಮರಾಜ್ ಆರ್


ಮಂಗಳೂರು : ಸರ್ಕಾರ ಸ್ಥಾಪಿಸಿದ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ಬಿಲ್ಲವ ಸಮಾಜ ವಿರೋಧ ವ್ಯಕ್ತಪಡಿಸಿಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವೇ ಬೇಕು ಎಂದು ಆಗ್ರಹಿಸಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆಸರ್ಕಾರ ಈಡಿಗ ಸಮುದಾಯದ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಬೆಳದಿಂಗಳು ಫೌಂಡೇಶನ್ ಅಧ್ಯಕ್ಷಪದ್ಮರಾಜ ಆರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ .5ರಂದು ಸಚಿವ ಸುನೀಲ್‌ಕುಮಾರ್ ನೇತೃತ್ವದಲ್ಲಿ ಬಿಲ್ಲವರ ನಿಯೋಗ ಕೋಶದ ಬದಲು ನಿಗಮ ಸ್ಥಾಪನೆ ಮಾಡಬೇಕುಎಂದು ಮುಖ್ಯಮಂತ್ರಿಗೆ ಮನವಿಯನ್ನು ಸಲ್ಲಿಸಿತ್ತು. ಸಂದರ್ಭ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ವಿರೋಧ ಇರುವುದುಸರ್ಕಾರಕ್ಕೆ ಮನವರಿಕೆಯಾಗಿದ್ದು, ಕೋಶವನ್ನು ಹಿಂಪಡೆದು ಅಭಿವೃದ್ಧಿ ನಿಗಮವನ್ನಾಗಿ ಪರಿವರ್ತಿಸುವುದಾಗಿ ಭರವಸೆಯನ್ನೂಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದರು. ಆದರೆ .6ರಂದು ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ  10 ಕೋಟಿ ರೂ. ಬಿಡುಗಡೆಗೊಳಿಸಿ ಆದೇಶ ಹೊರಡಿಸುವ ಮೂಲಕ ಸಮಾಜದ ದಾರಿ ತಪ್ಪಿಸುವ ಕಾರ್ಯ ನಡೆಸಿದೆ. ಬಿಲ್ಲವ ಈಡಿಗ ನಿಗಮದ ಬಗ್ಗೆತಮ್ಮ ನಿಲುವು ಏನು ಎಂಬುದನ್ನು ಕೂಡಲೇ ಸರ್ಕಾರ ಸ್ಪಷ್ಟಪಡಿಸಲಿ. ಯಾಕೆ ಪದೇ ಪದೇ ಗೊಂದಲ ಸೃಷ್ಟಿಸುತ್ತೀರಿ.

ಸುಮಾರು 26 ಪಂಗಡಗಳನ್ನು ಒಳಗೊಂಡ ಬಿಲ್ಲವ ಈಡಿಗ ನಾಮಧಾರಿ ಸಮಾಜಕ್ಕೆ ಪತ್ಯೇಕ ನಿಗಮ ಸ್ಥಾಪನೆ ಮಾಡಬೇಕು ಎಂದು ಹಿಂದಿನಿಂದಲೂ ಆಗ್ರಹಿಸುತ್ತಾ ಬರಲಾಗಿತ್ತು. ಆದರೆ ಬೇರೆ ಬೇರೆ ಕಾರಣ ಹೇಳಿ ಸರ್ಕಾರ ನಿಗಮ ಸ್ಥಾಪನೆಯನ್ನುಮುಂದೂಡುತ್ತಲೇ ಬರುತ್ತಿತ್ತು. ಇದರ ಮಧ್ಯದಲ್ಲಿ ಬಿಲ್ಲವ ಅಭಿವೃದ್ಧಿ ಕೋಶ ಸ್ಥಾಪನೆ ಮಾಡಿ ಆದೇಶ ಹೊರಡಿಸಿತ್ತು. ಜೀವವಿಲ್ಲದಕೋಶ ಮತ್ತು ನಿಗಮಕ್ಕೆ ಅಜಗಜಾಂತರ ವ್ಯತ್ಯಾಸ ಇರುವುದರಿಂದ ಅಂದೇ ಕೋಶಕ್ಕೆ ಸಮಾಜ ವಿರೋಧ ವ್ಯಕ್ತಪಡಿಸಿತ್ತು.

ಕೋಶ ದೊಡ್ಡ ಮೋಸ. ಇದರಲ್ಲಿ ಏನು ಕೂಡ ಇಲ್ಲ. ಬಿಲ್ಲವ ಈಡಿಗರ ಅಭಿವೃದ್ಧಿಗೆ ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಸ್ಥಾಪಿಸಿ ಇದಕ್ಕೆ 5೦೦ ಕೋಟಿ ಮೀಸಲಿಡಿ ಎಂಬ ಸಮಾಜದ ಬೇಡಿಕೆಗೆ ಸ್ಪಂದಿಸುವ ಬದಲು ಬಿಲ್ಲವ ಸಮಾಜದಲ್ಲಿ ಒಡಕುಉಂಟುಮಾಡುವ ರಾಜಕೀಯ ಕಾರ್ಯತಂತ್ರದ ಭಾಗವಾಗಿ ಕಳೆದ .5ರಂದು ಆಯ್ದ ಕೆಲವರನ್ನು ಬೆಂಗಳೂರಿಗೆ ಕರೆಸಿ ಬ್ರಹ್ಮಶ್ರೀನಾರಾಯಣಗುರು ನಿಗಮ ಘೋಷಣೆ ಇದೆ ಎಂದು ಹೇಳಿ ದಾರಿ ತಪ್ಪಿಸಲಾಗಿತ್ತು. ಕೆಲವರು ಸಂಭ್ರಮ ಪಟ್ಟು ಬ್ರಹ್ಮಶ್ರೀನಾರಾಯಣಗುರು ನಿಗಮ ಆಯಿತು ಎಂಬ ರಾಜಕಾರಣಿಗಳ ಪೊಳ್ಳು ಭರವಸೆಗೆ ಅಭಿನಂದನೆಯನ್ನೂ ಸಲ್ಲಿಸಿಯಾಗಿತ್ತು.

ಇದೀಗ ಅದರ ಬೆನ್ನಲ್ಲೇ .6ರಂದು ಸರ್ಕಾರ ಬಿಲ್ಲವ ಅಭಿವೃದ್ಧಿ ಕೋಶಕ್ಕೆ 10 ಕೋಟಿ ರೂಪಾಯಿ ಬಿಡುಗಡೆ ಮಾಡಿ ಸರ್ಕಾರ ಅಧೀನಕಾರ್ಯದರ್ಶಿ ಆದೇಶಿಸಿದ್ದಾರೆ. ಇದರ ಅರ್ಥ ಏನು? ಅನಗತ್ಯ ಗೊಂದಲ ಸೃಷ್ಟಿಸುವುದರ ಉದ್ದೇಶವಾದರೂ ಏನುಆದ್ದರಿಂದಸರ್ಕಾರಕ್ಕೆ ನಿಗಮ ಸ್ಥಾಪನೆ ಮಾಡಲು ಸಾಧ್ಯ ಇಲ್ಲದಿದ್ದರೆ ಇಲ್ಲ ಎಂದು ನೇರವಾಗಿ ತಿಳಿಸಲಿ. ಅದು ಬಿಟ್ಟು ಬೋಗಸ್ ಭರವಸೆನೀಡುತ್ತಾ ಬರುತ್ತಿರುವುದು ಖಂಡನಾರ್ಹ.

ಮಾತ್ರವಲ್ಲದೆ ಸರ್ಕಾರದ ನಿಲುವು ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲದೆ ಅಭಿನಂದನೆ ಸಲ್ಲಿಸಿರುವುದೂ ಕೂಡ ಖೇದಕರ. ನಾಯಕರುಎನಿಸಿಕೊಂಡವರನ್ನು ಸಮಾಜ ಅನುಸರಿಸಿಕೊಂಡು ಹೋಗುತ್ತದೆ. ಅವರ ಮೇಲೆ ಅತಿಯಾದ ವಿಶ್ವಾಸವನ್ನು ಇಟ್ಟುಕೊಂಡಿರುತ್ತಾರೆ. ಆದ್ದರಿಂದ ಯಾವುದೇ ಸ್ಪಷ್ಟತೆ ಇಲ್ಲದೆ ಗಡಿಬಿಡಿಯಲ್ಲಿ ಸರ್ಕಾರದ ನಿಲುವನ್ನು ಸ್ವಾಗತಿಸಿ ದ್ವಂದ್ವ ನಿಲುವು ಪ್ರಕಟಿಸಿದರೆ ಸಮಾಜದದಾರಿ ತಪ್ಪಿದಂತೆಯೂ ಆಗುತ್ತದೆ. ಹಿಂದೆ ಸಮಾಜ ನಡೆಸಿದ ಹೋರಾಟಕ್ಕೂ ಯಾವುದೇ ಮಾನ್ಯತೆ ಇಲ್ಲದಂತಾಗುತ್ತದೆ ಎಂದುಪದ್ಮರಾಜ್ ಆಕ್ರೋಶ ವ್ಯಕ್ತಪಡಿಸಿದರು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »