TOP STORIES:

ಮಂಗಳೂರು: ‘ಬಿಎಸ್ ಡಬ್ಲ್ಯೂಟಿ’ ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ…


ಮಂಗಳೂರು : . 20 : ಭಾರತ್  ಸೋಶಿಯಲ್ ವೆಲ್ಫೇರ್ ಟ್ರಸ್ಟ್ “BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ಬೋಳಾರ್ ರವರು ಆಯ್ಕೆಯಾಗಿದ್ದಾರೆ. ಅರವಿಂದ್ ಬೋಳಾರ್ ಅವರು ತುಳು ನಾಟಕ. ಚಲನಚಿತ್ರ ಮತ್ತು ಯಕ್ಷಗಾನ ರಂಗದ  ಪ್ರಮುಖ ಕಲಾವಿದರಲ್ಲಿ ಒಬ್ಬರು. ಕನ್ನಡ, ಕೊಂಕಣಿ, ಮಲೆಯಾಳಂ ಭಾಷಾ ಸಿನಿಮಾದಲ್ಲಿ ಅಭಿನಯಿಸುತ್ತಾ ಬ್ಯಾರಿ ಭಾಷಾಪಾತ್ರದಲ್ಲಿಯೂ ಸೈ ಎನಿಸಿಕೊಂಡವರು.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೋಳಾರ್ ಎಂಬಲ್ಲಿ ತಂದೆ  ಕೃಷ್ಣಪ್ಪ ಮತ್ತು ತಾಯಿ ಸುಂದರಿಯವರ  ಮಗನಾಗಿ ಜನಿಸಿದಇವರು ತುಳು ನಾಟಕ ಕಲಾವಿದನಾಗಿ ಸಾಂಸ್ಕೃತಿಕ ರಂಗ ಪ್ರವೇಶಿಸಿದರು. ಹಾಗೂ ತುಳು ಚಲನಚಿತ್ರ ರಂಗದ ಪ್ರಮುಖಕಲಾವಿದರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ತಮ್ಮ ಕಾಮಿಕ್ ಟೈಮಿಂಗ್ ಮತ್ತು ಪಂಚಿಂಗ್ ಡೈಲಾಗ್ ಗಳಿಂದ ಅವರು ಕರಾವಳಿನಾಟಕ ಉದ್ಯಮದಲ್ಲಿ ಮತ್ತು ತುಳು ಚಿತ್ರರಂಗದಲ್ಲಿ ತಮ್ಮದೇ ಆದ ಸಹಿಯನ್ನು ರಚಿಸಿಕೊಂಡಿರುವ ಇವರಿಗೆ ಕನ್ನಡ ರಾಜ್ಯೋತ್ಸವಪ್ರಶಸ್ತಿಯ ಜೊತೆಗೆಸಾಧನೆ ಶಾರದಾರ್ಮತ್ತುತುಳುವ ಮಾಣಿಕ್ಯಎಂಬ ಬಿರುದು ಗಳಿಸಿದ್ದಾರೆ ಅದಲ್ಲದೆ ವಿವಿಧ ಸಂಘಸಂಸ್ಥೆಗಳ ವತಿಯಿಂದ 00ಕ್ಕೂ ಹೆಚ್ಚು ಗೌರವ ಸಂದಿವೆ.

ದೈಜಿವಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ವಾಲ್ಡರ್ ನಂದಳಿಕೆ ಅವರೊಂದಿಗೆ ಜೋಡಿಯಾಗಿ, ಸಾಮಾನ್ಯ ಜನರನೋವಗಳನ್ನು ಅರಿತು ಅವರಂತೆ ಪಾತ್ರಾಭಿನಯಿಸಿ ದೈಜಿವಲ್ಡ್ ಟಿವಿ ಶೋಪ್ರೈವೇಟ್ ಚಾಲೆಂಜ್ಎಂಬ ಹೊಸ ಪ್ರಯೋಗದಮುಖಾಂತರ ಜನರ ಸಂಕಷ್ಟಗಳಿಗೆ ಸ್ಪಂದಿಸಿದರು. ಕೊರೋನ ಲಾಕ್ ಡೌನ್  ಸಂದರ್ಭದಲ್ಲಿ ಇದು ಹೆಚ್ಚು ಪ್ರಯೋಜನಕಾರಿಯಾದಬೆಳವಣಿಗೆಯಾಗಿ ಗುರುತಿಸಲಾಗಿದ್ದು ಸಮಾಜದ ಕಣ್ಣು ತೆರೆಯಿತು.

ಅವರ  ಸಾಮಾಜಿಕ ಬದ್ಧತೆಯನ್ನು ಪರಿಗಣಿಸಿ ಭಾರತ್ ಸೋಶಿಯಲ್ ಅಂಡ್ ವೆಲ್ಫೇರ್ ಟ್ರಸ್ಟ್ ಅವರನ್ನು ವರ್ಷದ ವ್ಯಕ್ತಿಯಾಗಿಆಯ್ಕೆ ಮಾಡಿದೆ. ಭಾರತ್ ಸೋಶಿಯಲ್ ಅಂಡ್ ವೆಲ್ಫೇರ್ ಟ್ರಸ್ಟ್ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಮೂರು ಕೇಂದ್ರೀಯವಿಷಯಗಳಲ್ಲಿ ಕಳೆದ ಎಂಟು ವರ್ಷಗಳಿಂದ ಕರ್ನಾಟಕದಾದ್ಯಂತ ವಿವಿಧ ಸೇವಾ ಕಾರ್ಯಗಳನ್ನು ಮಾಡುತ್ತಾ ಪ್ರತಿ ವರ್ಷನೂರೈವತ್ತು ಅರ್ಹ ಬಡಾ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಾ ಬಂದಿದೆ. ಪ್ರಸಕ್ತ ವರ್ಷದ ವಿದ್ಯಾರ್ಥಿ ವೇತನ ವಿತರಣಾಕಾರ್ಯಕ್ರಮ ಜನವರಿ 26-2023 ರಂದು ಸಂಜೆ 3.00 ಗಂಟೆಗೆ ಸರಿಯಾಗಿ ಸಹೋದಯ ಸಭಾಂಗಣ ಬಲ್ಮಟ್ಟ ಮಂಗಳೂರು ಇಲ್ಲಿನಡೆಯಲಿದೆ. ಕಾರ್ಯಕ್ರಮದಲ್ಲಿ ಅರವಿಂದ್ ಬೋಳಾರ್ ಅವರಿಗೆವರ್ಷದ ವ್ಯಕ್ತಿಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದುಟ್ರಸ್ಟ್ ನ್ ಪ್ರಧಾನ ಕಾರ್ಯದರ್ಶಿ ಆಕಿಫ್ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »