TOP STORIES:

ಯಕ್ಷರಂಗದ ಗಾನ ಚತುರ,ಕನ್ನಡ ಭಾಷೆ ಬಾರದಿದ್ದರೂ ಸುಶ್ರಾವ್ಯವಾಗಿ ಹಾಡಬಲ್ಲ ಕಲಾವಿದ ರೋಶನ್ ಕೋಟ್ಯಾನ್


ಶತಮಾನಗಳ ಇತಿಹಾಸವಿರುವ ಯಕ್ಷಗಾನವು ಸದಾ ಪಂಡಿತ ಪಾಮರರ ಚಿಂತನಮಂಥನದ ವಸ್ತುವಾಗಿರುದು ಯಕ್ಷಗಾನ ಕಲೆಯಜೀವಂತಿಕೆಯ ಲಕ್ಷಣವಾಗಿದೆ. ಇದರ ವರ್ಣರಂಜಿತ ಇತಿಹಾಸದಲ್ಲಿ ತೆಂಕುಬಡಗಿನ ಅನೇಕ

     (Copyrights owned by: billavaswarriors.com )
ಕಲಾವಿದರುಅವಿಸ್ಮರಣೀಯರು.ಯಕ್ಷರಂಗದಲ್ಲಿ ಮಿಂಚಿ ಕಲಾ ಪ್ರೇಮಿಗಳ ಮನಗೆದ್ದ ತನ್ನದೇ ಆದ ಛಾಪನ್ನು ಒತ್ತಿ  ಪ್ರೇಕ್ಷಕರ ಮನ ಗೆಲ್ಲಲು ಅಂಗೈಅಗಲದ ರಂಗದಲ್ಲಿ ಕ್ಷಣಾರ್ಧದಲ್ಲಿ ಮೂರು ಲೋಕಗಳನ್ನು ಸಾಕ್ಷಾತ್ಕರಿಸಿ ಪುರಾಣ ಕಥೆಗಳಿಗೆ ಜೀವಂತಿಕೆಯನ್ನು ನೀಡಬಲ್ಲತೆಂಕುಬಡಗಿನ ಪ್ರಬುದ್ಧ ಕಲಾವಿದರನೇಕರು ಇಂದು ಕಣ್ಮರೆಯಾದರೂ ಅವರೆಲ್ಲರ ಆದರ್ಶನೀಯವಾದ ಮಾರ್ಗದರ್ಶನದಲ್ಲಿಯಕ್ಷರಂಗದತ್ತ ಪಾದ ಬೆಳೆಸುವ ಕಲಾವಿದರಿಂದ ಯಕ್ಷಗಾನವನ್ನು ಉಳಿಸಬೇಕು, ಬೆಳೆಸಬೇಕು ಮಾತ್ರವಲ್ಲದೆ ರಂಗಕರ್ಮಿಗಳಬದುಕನ್ನು ರೂಪಿಸಲೆಂದು ಉದಯಿಸಿರುವ  ಸಂಘ ಸಂಸ್ಥೆಗಳು ಹಲವಾರು.ಹಾಗಾಗಿ ಸರ್ವಾಂಗ ಸುಂದರವಾದ ಯಕ್ಷಗಾನವು ನಮ್ಮಜಿಲ್ಲೆಯ ಜನ ಜೀವನದಲ್ಲಿ ಬೆರೆತಂತೆ ಮತ್ಯಾವ ಕಲಾಪ್ರಕಾರವೂ ಬೆರೆತಿಲ್ಲವೆನ್ನಬಹುದು.

  (Copyrights owned by: billavaswarriors.com )
ಜಾನಪದ ಕಲಾಪ್ರಕಾರವು ಕೆಲವು ನಿರ್ದಿಷ್ಟ ಜಾತಿ,ಪಂಗಡಗಳಿಗೆ ಮಿಸಲಾಗಿದ್ದರೆ ಯಕ್ಷಗಾನಕ್ಕೆ ಬಂಧನವಿಲ್ಲ. ರಂಗದಲ್ಲಿ ಎಲ್ಲಾಸಮಾಜದ ಜನರು ವಿವಿಧ ಸ್ತರಗಳಲ್ಲಿ ಪಾರಂಗತರಾಗಿರುವುದನ್ನು ನಾವು ಕಾಣಬಹುದು. ಜನಾಕರ್ಷಣಿಯಾವಾದ ಕಲಾಪ್ರಪಂಚಕ್ಕೆ ಬೆಡಗಿಗೆ ಮನಸೋತು ತಾನೂ ಒಬ್ಬ ಅತ್ಯುತ್ತಮ ಕಲಾವಿದನಾಗಬೇಕೇಂಬ ಹಂಬಲ ಜಾಗ್ರತವಾದಾರೂ ಎಲ್ಲರಿಗೂಅವರ ಬಯಕೆ ಈಡೆರುವ ಅವಕಾಶ ಒದಗುವುದಿಲ್ಲ .ಪರಿಸರ ಪರಿಸ್ಥಿತಿ ಸಂಧರ್ಭದಲ್ಲಿ ಅನುಕೂಲವಾಗಿ ಒದಗಿ ಬಂದರೆ ಮಾತ್ರಬಾಳ ಪ್ರತಿಭೆಗಳಲ್ಲಿ ಸುಪ್ತವಾಗಿರುವ ಕಲಾ ಚೇತನಗಳಿಗೆ ಆಕಾರವು ಪ್ರಾಪ್ತಿಯಾಗುತ್ತದೆಯೆಂಬುದಕ್ಕೆ ಉಡುಪಿ ಜಿಲ್ಲೆಯ ಕಾಪುಸಮೀಪದ ಮೂಳೂರು ತುರ್ಕಿ ತೋಟದ ಜಯಂತಿ ಶಿವರಾಮ ಕೋಟ್ಯಾನ್ ರವರ ಪುತ್ರ ರೋಶನ್ ಕೋಟ್ಯಾನ್ ರವರೆಉದಾಹರಣೆಯಾಗಿದ್ದಾರೆ.

ಬೆಳೆಯುವ ಸಿರಿ ಮೊಳಕೆಯಲ್ಲಿಎಂಬತೆ ಮಹಾನಗರ ಮುಂಬಯಿಯ ಘಾಟ್ಕೋಪಾರ್ ಪಶ್ಚಿಮ ಆಂಗ್ಲ ಮಾಧ್ಯಮದ ಉತ್ತರ ಮುಂಬಾಯಿ ಶಾಲೆಯ ಆರನೇ ತರಗತಿ ಕಲಿಯುತ್ತಿರುವಾಗಲೇ ಶಾಲೆಯ ವಾರ್ಷಿಕೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಲಾಮುಖ್ಯೋಪಾಧ್ಯಾಯರಿಂದಲೇ ಪ್ರಶಂಸಿತನಾಗಿ ಭವಿಷ್ಯತ್ತಿನಲ್ಲಿ ತಾನೋರ್ವ ಶ್ರೇಷ್ಠ ಕಲಾವಿದನಾಗ ಬಲ್ಲೇ ಎಂಬ  ಭರವಸೆಯನ್ನುಮೂಡಿಸಿರುವ ಪುಟ್ಟ ಬಾಲಕನೇ ಇಂದು ಮುಂಬಯಿ ಹಾಗೂ ವಿದೇಶದಲ್ಲಿ ಯಕ್ಷ ಕಲಾಭಿಮಾನಿಗಳು ಕಂಡಉದಯೋನ್ಮುಖಭಾಗವತ

ಶಾಲೆಯ ಬಿಡುವಿನ ಸಮಯದಲ್ಲಿ ಇವರ ಕಲಾಭಿರುಚಿಯು  ಕೆರಳಿ ಅದು ಪ್ರತಿಭೆಗೆ ಬರಲು ಪ್ರೋತ್ಸಾಹಿಸಿದವರೆಂದರೆ ಇವರ ಮಾತಪಿತರು ,ಮಾತ್ರವಲ್ಲದೆ ಮನೆ ಸಮೀಪದ ಸಂಘಾನಿ ಶನಿ ಮಂದಿರದ ಭಕ್ತ ವ್ರಂದ.

ಇವರೆಲ್ಲರ ಸಂಪೂರ್ಣ ಸಹಕಾರದಿಂದ ಮಂದಿರದ ವಠಾರದಲ್ಲಿ ಜರಗುತ್ತಿದ್ದ  ಪ್ರತಿಯೊಂದು ಧಾರ್ಮಿಕ ಸಾಂಸ್ಕೃತಿಕಕಾರ್ಯಕ್ರಮದಲ್ಲಿ ಭಾಗವಹಿಸಿ ಭಕ್ತ ವ್ರಂದದ ಪ್ರಶಂಸೆಗೆ ಪಾತ್ರರಾದ ಅತ್ಯುತ್ತಮ ಭಜನಾ ಗಾಯಕರಾದ ಇವರ ಮಾವನಾದನಾಗೇಶ್ ಸುವರ್ಣರಿಂದ ಭಜನಾ ತರಬೇತಿಯನ್ನು ಅಲ್ಲದೆ ಶನಿಗ್ರಂಥ ಪಾರಾಯಣದ ತರಬೇತಿಯನ್ನು ಪಡೆದು ಎಲ್ಲರಿಂದಲೂ ಸೈಎನಿಸಿಕೊಂಡವರು.

    (Copyrights owned by: billavaswarriors.com )
ಯಕ್ಷರಂಗದ ಸವ್ಯಸಾಚಿಯೆಂದು ಖ್ಯಾತರಾದ ಕಟೀಲು ಮೇಳದ ಸುಪ್ರಸಿದ್ಧ ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಂದಮೃದಂಗನಾದವನ್ನು ಯಕ್ಷರಂಗದ ಪರಂಪರೆಯ ಯಕ್ಷಕಲಾ ಗುರುಗಳಾದ ಮೋಹನ ಬೈಪಡಿತ್ತಾಯರವರಿಂದ ಭಾಗವತಿಕೆಯನ್ನುಅಭ್ಯಾಸ ಮಾಡಿ ಗುರು ಪ್ರೇರಣೆಯಂತೆ ಗುರುನಾರಾಯಣ ಮೇಳದವರಶ್ರೀ ದೇವಿ ಮಹಾತ್ಮೆಪ್ರಸಂಗದಲ್ಲಿ ಪ್ರಥಮಭಾಗವತಿಕೆಯನ್ನು ಮಾಡಿ ಪ್ರೇಕ್ಷಕರ ಮನಗೆದ್ದು ಗುರುಪ್ರಶಂಸೆಯನ್ನು ಪಡೆದ ಕೀರ್ತಿಗೆ ಭಾಜನರಿವರು.ಗುರುನಾರಾಯಣ ಮೇಳದಪ್ರಸಿದ್ಧ ಭಾಗವತ ಜಯಪ್ರಕಾಶ್ ನಿಡ್ವಣ್ಣಾಯರವರಿಂದ ಭಾಗವತಿಕೆಯ ಹೆಚ್ಚಿನ ತರಬೇತಿಯನ್ನು ಪಡೆದಿರುವ ಇವರು ಉದ್ಯೋಗದನಿಮಿತ್ತ ವಿದೇಶಕ್ಕೆ ತೆರಳಿ ಅಲ್ಲಿ ಶಿಪ್ಪಿಂಗ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ತನ್ನ ಕಲಾ ಪ್ರತಿಭೆಗೆ  ಕಾರಣರಾಗಿರುವ ಹಿರಿಯಕಿರಿಯರನೇಕರನ್ನು ಸದಾ ಸ್ಮರಿಸುತ್ತಿರುವ ಪ್ರಸ್ತುತ ವಿದೇಶದಲ್ಲಿರೂ ಆಗಾಗ್ಗೆ ತನ್ನತಾಯ್ನಾಡಿಗೆ ಮರಳಿದಾಗ ನಗರದಲ್ಲಿ ಜರಗುತ್ತಿರುವ ಪ್ರತಿಯೊಂದು ಸಂಘ ಸಂಸ್ಥೆಗಳ ಧಾರ್ಮಿಕಸಾಂಸ್ಕೃತಿಕ ಕಾರ್ಯಕ್ರಮದಲ್ಲಿಭಾಗವಹಿಸಿ ತನ್ನ ಕಲಾರಂಗದ ಮನದಾಸೆಯನ್ನು ಪೂರೈಸಿಕೊಂಡು ಸಂತಸ ಪಡುವ ಸಂತೃಪ್ತ ಕಲಾವಿದರು.

ಇವರ ಕಲಾ ಪ್ರೌಡಿಮೆಗೆ ತಾನಾಗಿ ಒಲಿದು ಬಂದ ಸನ್ಮಾನಗಳು, ಪ್ರಶಸ್ತಿಗಳು ಅನೇಕ.

ಅವುಗಳಲ್ಲಿ ಪ್ರಧಾನವಾದವು ಬೆಹರಿನ್ ಕರ್ನಾಟಕ ಸಂಘದ ವತಿಯಿಂದ ಹಾಗೂ “ಹವ್ಯಾಸಿ ಕಲಾವಿದರುಸೌದಿ ಅರೇಬಿಯಾಮತ್ತು  ಕುಡ್ಲ ಅಡ್ವೆಂಚರ್‌  ದಮಾಮ್  ಇಲ್ಲಿ ಅಲ್ಲದೆ ಅಮ್ಮ ಕಲಾವಿದರು, ಪಟ್ಲ ಫೌಂಡೇಶನ್ ಟ್ರಸ್ಟ್. ಮುಂತಾದ ಕಡೆಗಳಲ್ಲಿಒದಗಿರುವ ಗೌರವ ಸನ್ಮಾನಗಳು   ಅವಿಸ್ಮರಣೀಯವಾಗಿದೆ ಎನ್ನುತ್ತಾರೆ. ಮುಂಬೈಯ ಯಕ್ಷ  ಭ್ರಾಮರಿ ನೃತ್ಯ ನಿಲಯದ ಸನ್ಮಾನವುಮತ್ತು ಇವರಿಗೆ    ಭ್ರಮರಇಂಚರ ಹಾಗೂ 2021 ಮುಂಬಾಯಿ ಯಲ್ಲಿ ನಡೆದ ಜಯ.ಸಿ. ಸುವರ್ಣ ಬಿಲ್ಲವಾರ್ ಐಕೊನ್ ಪ್ರಶಸ್ತಿತುಂಬಾ ಖುಷಿ ಕೊಟ್ಟಿದ್ದೆನ್ನುತ್ತಾರೆ. ಶ್ರೀಯುತರು 2013ರಲ್ಲಿ ಶ್ರೀ ಮತಿ ದೀಕ್ಷಾ ಎಂಬವರೊಡನೆ ದಾಂಪತ್ಯ ಜೀವನಕ್ಕೆ ಪಾದಾರ್ಪಣೆಮಾಡಿರುತ್ತಾರೆ ಇವರಿಗೆ ವೃತಿ ಎಂಬ ಪುಟ್ಟ ಹೆಣ್ಣು ಮಗಳು ಇದ್ದಾರೆ ಹೀಗೆ ಚಿಕ್ಕದಾದರೂ ಚೊಕ್ಕ ಸಂಸಾರದಲ್ಲಿ ಸಂತೃಪ್ತ ಜೀವನನಡೆಸುತ್ತಿದ್ದಾರೆ.

ವಿದೇಶದಲ್ಲಿ ಅದೆಷ್ಟೋ ಯಕ್ಷ ಕಲಾಭಿಮಾನಿಗಳು ಇದ್ದು ಅವರಿಗೆ ಇವರ ಭಾಗವತಿಕೆ ಎಂದರೆ ಅಚ್ಚು ಮೆಚ್ಚು. ಇವರುವಿದ್ಯಭ್ಯಾಸವನ್ನು ಮುಂಬೈಯಲ್ಲಿ ಪೂರ್ಣಗಳಿಸಿರುದರಿಂದ ಇವರಿಗೆ ಕನ್ನಡ ಅಕ್ಷರ ಓದಲು ಬರೆಯಲು ಬರುವುದಿಲ್ಲ ಆದರೂಇವರು ಛಲ ಬಿಡದೆ ಕನ್ನಡದಲ್ಲಿ ಬರೆದ ಭಾಗವತಿಕೆಯನ್ನು ಹಲವರ ಸಹಾಯದಿಂದ  ಹಿಂದಿ ಭಾಷೆಯಲ್ಲಿ ಬರೆದು  ಭಾಗವತಿಕೆಯನ್ನುಅಭ್ಯಾಸ ಮಾಡುತ್ತಾರೆ. ವೃತ್ತಿ ಜೀವನದಲ್ಲಿ ಸಮಯ ಸರಿಯಾಗಿ ಸಿಕ್ಕಿಲ್ಲವೆಂದರೂ ಸುಮಾರೂ ಮೂರು ಗಂಟೆಗಳ ಕಾಲ ತನ್ನವಾಹನದಲ್ಲಿ ಸಂಚಾರ ಮಾಡಿ ಯಕ್ಷಗಾನ ಅಭ್ಯಾಸ ಮಾಡಿ ಮತ್ತು ಯುವಕರನ್ನು ಯಕ್ಷರಂಗದತ್ತ ಒಲವು ಮೂಡಿಸುವ ಕಾರ್ಯಮಾಡುತ್ತಿದ್ದಾರೆ‌. ತನ್ನ ಕಲಾ ಜೀವನದಲ್ಲಿ ಸಂಪೂರ್ಣ ರೀತಿಯಲ್ಲಿ ಸಹಕರಿಸುವ ಕಟೀಲು ಮೇಳದ ಪ್ರಸಿದ್ಧ ಭಾಗವತ ಸತೀಶ್ ಶೆಟ್ಟಿಬೊಂದೆಲ್ ಹಾಗೂ ಪ್ರಸಿದ್ಧ ಸ್ತ್ರೀ ಪಾತ್ರಧಾರಿ ದೀಪಕ್ ರಾವ್ ಪೇಜಾವರ ಅವರ ಹಾಗೂ ಪ್ರಸಿದ್ಧ ಭಾಗವತ ಸತೀಶ್ ಶೆಟ್ಟಿ ಪಟ್ಲ ಇವರಹೆಸರನ್ನು ಹೇಳಲು ಮರೆಯುದಿಲ್ಲ.

ಬೊಟ್ಟಿಕೆರೆ ಪುರುಷೋತ್ತಮ ಪೂಂಜರು,ಮೋಹನ ಬೈಪಾಡಿತ್ತಾಯರು,ಜಯಪ್ರಕಾಶ್ ನಿಡ್ವಣ್ಣಾಯರು ಹೀಗೆ ಗುರುತ್ರಯರಿಂದ ಯಕ್ಷರಂಗದ ತರಬೇತಿ ಪಡೆದಿರುವ ಇವರು ಭವಿಷ್ಯತ್ತಿನಲ್ಲಿ ಅತ್ಯುತ್ತಮ ಕಲಾವಿದನಾಗಿ ಯಕ್ಷ ಪ್ರಪಂಚದಲ್ಲಿ ವಿಜೃಂಭಿಸಲಿಯೆಂಬುದೇನಮ್ಮ ಶುಭ ಹಾರೈಕೆ.

(Copyrights owned by: billavaswarriors.com )

ಟೀಮ್ ಬಿಲ್ಲವ ವಾರಿಯರ್ಸ್ 

 


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »