TOP STORIES:

ಎಪ್ರಿಲ್ 22 ರಂದು ದುಬೈನಲ್ಲಿ ನಡೆಯಲಿದೆ ‘ದುಬೈ ಬಿಲ್ಲವೋತ್ಸವ’


ಬಿಲ್ಲವಾಸ್ ಫ್ಯಾಮಿಲಿ ದುಬೈಯ 25 ನೇ ವರ್ಷದ ಬೆಳ್ಳಿ ಹಬ್ಬಕ್ಕೆ ರೇಣುಕ ಮಠದ ಸೋಲೂರು ಶ್ರೀ ವಿಖ್ಯಾತನಂದಸ್ವಾಮೀಜಿಯವರು ಕಾರ್ಯಕ್ರಮಕ್ಕೆ ಆಗಮಿಸಿ ಆರ್ಶಿವಚನ ಮಾಡಲಿದ್ದಾರೆ ಹಾಗೂ ಎಪ್ರಿಲ್ 22 ರಂದು ಬೆಳಿಗ್ಗೆಯಿಂದಸಾಯಂಕಾಲದ ವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ ಎಂದು ತಿಳಿಸಿದರು.ಎಪ್ರಿಲ್ 22 ರಂದು ನಗರದ ಶೇಖ್ ಝಯೆದ್ ರಸ್ತೆಯ ಕ್ರೌನ್ ಪ್ಲಾಜಾ ದಲ್ಲಿ ನಡೆಯುವ ಬಿಲ್ಲವಾಸ್ ಫ್ಯಾಮಿಲಿ ದುಬೈಯ 25 ನೇವರ್ಷದದುಬೈ ಬಿಲ್ಲವೋತ್ಸವ ಸಲುವಾಗಿ ಎಪ್ರಿಲ್ 7 ರಂದು ನಗರದ ಊದ್ ಮೇತದ ಬಿರಿಯಾನಿ 2020 ರೆಸ್ಟೋರೆಂಟ್ ನಲ್ಲಿನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಲ್ಲವಾಸ್ ಫ್ಯಾಮಿಲಿ ದುಬೈಯ ಕಾರ್ಯದರ್ಶಿ ದೀಪಕ್ ಎಸ್.ಪಿ. ಮಾತನಾಡುತ್ತಾ ಬೆಳಿಗ್ಗೆಯಿಂದಸಂಜೆಯವರೆಗೆ ನಡೆದ ಬಿಲ್ಲವಾಸ್ ಫ್ಯಾಮಿಲಿ ದುಬೈಯ ಸ್ನೇಹ ಸಮ್ಮಿಲನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ವಿದ್ವಾನ್ಸುರೇಶ್ ಅತ್ತಾವರ್ ಇವರ ನಿರ್ದೇಶನದಲ್ಲಿಬಿರುವ ಬೊಲ್ಲಿಲುಎಂಬ ತುಳು ನೃತ್ಯ ರೂಪಕ, ಬಿರುವೆರ್ ಕುಡ್ಲ ದುಬೈತಂಡದವರಿಂದಬಿರ್ದುದ ಪಿಲಿಕುಲು”(ಪಿಲಿನಲಿಕೆ) ಮತ್ತು ತೆಲಿಕೆದ ತೆನಾಲಿ ಸುನೀಲ್ ನೆಲ್ಲಿಗುಡ್ಡೆಯವರ ನೇತೃತ್ವದಲ್ಲಿ ಊರಿನಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದಗಮ್ಜಲ್ ಕಾಮಿಡಿಎಂಬ ಹಾಸ್ಯ ಕಾರ್ಯಕ್ರಮ ಜರಗಲಿದೆ.ಕುಡ್ಲ ಕುಸಲ್ ರವಿರಾಮರಾಮಕುಂಜ,ಕಾಮಿಡಿ ಕಿಲಾಡಿಗಳು ಖ್ಯಾತಿಯ ಪಿಂಕಿ ರಾಣಿ,ಕುಸಾಲ್ದ ಗುರಿಕಾರೆ ಸುಜಿತ್ ಕೋಟ್ಯಾನ್, ಹರೀಶ್ ಬಂಗೆರ,ಸಂಗೀತನಿರ್ದೇಶಕ ಶುಭಕರ ಬೆಳಪುರವರು ಊರಿಂದ ಆಗಮಿಸಲಿದ್ದು ಎಲ್ಲರನ್ನೂ ಮನರಂಜಿಸಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಲ್ಲವಾಸ್ ಫ್ಯಾಮಿಲಿ ದುಬೈಯ ನಿಕಟ ಪೂರ್ವ ಅಧ್ಯಕ್ಷರಾದ ಸತೀಶ್ ಪೂಜಾರಿ,ನಿಕಟ ಪೂರ್ವಉಪಾಧ್ಯಕ್ಷರಾದ ಆನಂದ ಬೈಲೂರು,ಈಗಿನ ಉಪಾಧ್ಯಕ್ಷರಾದ ಸತೀಶ್ ಉಳ್ಳಲ್,ಪ್ರಕಾಶ್ ಪೂಜಾರಿ,ಸಾಂಸ್ಕೃತಿಕ ಕಾರ್ಯದರ್ಶಿ ರವಿಕೋಟ್ಯಾನ್,ಕೋಶಾಧಿಕಾರಿ ಪ್ರಭಾಕರ ಪೂಜಾರಿ ಉಪಸ್ಥಿತರಿದ್ದರು.

ವರದಿವಿಜಯಕುಮಾರ್ ಶೆಟ್ಟಿ ಗಾಣದಮೂಲೆ ಮಜಿಬೈಲ್ (ದುಬೈ)


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »