TOP STORIES:

FOLLOW US

ಅಶಕ್ತ ಕುಟುಂಬಕ್ಕೆ ಬಿರುವೆರ್ ಕುಡ್ಲದಿಂದ ರೂ: 50 ಸಾವಿರ ಆರ್ಥಿಕ ನೆರವು ಹಸ್ತಾಂತರ


ಕುದ್ರೋಳಿ:- ಫ್ರೆಂಡ್ಸ್ ಬಳ್ಳಾಲ್‍ಬಾಗ್ ಬಿರುವೆರ್ ಕುಡ್ಲ ಇದರ ವತಿಯಿಂದ ಕುಪ್ಪೆ ಪದವಿನ ಜಗದೀಶ್ ಜಯಶ್ರೀ ಅವರ ಪುತ್ರ ಎರಡುವರ್ಷದ ಶಮಿತ್ ಚಿಕಿತ್ಸೆಗಾಗಿ 50 ಸಾವಿರ ಆರ್ಥಿಕ ನೆರವನ್ನು ಬುಧವಾರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದವಠಾರದಲ್ಲಿ ಹಸ್ತಾಂತರಿಸಲಾಯಿತು.

ಕ್ಷೇತ್ರದ ಮೊಕ್ತೇಸರ ಸಾಯೀರಾಮ್ ಅವರು ನೆರವಿನ ಚೆಕ್ ಹಸ್ತಾಂತರಿಸಿ, ಬಿರುವೆರ್ ಕುಡ್ಲ  ಸಮಾಜಮುಖೀ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬಿರುವೆರ್ ಕುಡ್ಲ ವಕ್ತಾರ ದಿನೇಶ್ ರಾಯಿ ಅವರು ಬಿರುವೆರ್ ಕುಡ್ಲದ ಕುರಿತಾಗಿ ಮಾಹಿತಿ ನೀಡಿ,

ಬಿರುವೆರ್ ಕುಡ್ಲದ  ಸ್ಥಾಪಕಾಧ್ಯಕ್ಷ ಉದಯಪೂಜಾರಿ ಬಳ್ಳಾಲ್‍ಬಾಗ್ ನೇತೃತ್ವದಲ್ಲಿ ಅವರ ಸದಸ್ಯರ,ಸ್ನೇಹಿತರ,ದಾನಿಗಳಕೊಡುಗೆಯಿದೆ.

ನಮ್ಮ ಸಂಘಟನೆಯು ಶಾರದಾ ಹುಲಿ ವೇಷ ಕುಣಿತ, ಕುದ್ರೋಳಿ ಕ್ಷೇತ್ರದ ದಸರದಲ್ಲಿ ಭಾಗವಹಿಸುತ್ತಾ ಬಂದಿದೆ. ಹುಲಿ ವೇಷದಲ್ಲಿಬಂದ ಹಣವನ್ನು ಸೇವಾ ರೂಪದಲ್ಲಿ ಖರ್ಚು ಮಾಡುತ್ತಿದ್ದೆವು. ಕಳೆದ 8 ವರ್ಷದಿಂದ ಸಂಸ್ಥೆಯು ಬಡ ವರ್ಗದ ಸೇವೆಗಾಗಿ  5 ಕೋಟಿರೂ.ನಷ್ಟು ನೆರವಿಗೆ ವಿನಿಯೋಗಿಸಿದ್ದೇವೆ. ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶದಲ್ಲಿ ಎಲ್ಲಾ ಜಾತಿ ಧರ್ಮದ ಕುಟುಂಬಕ್ಕೆನೆರವು ನೀಡಲಾಗಿದೆ.ಬೇರೆ ಬೇರೆ ಘಟಕಗಳು ತಮ್ಮ ಕರ್ತವ್ಯ ನಿರತವಾಗಿದೆ. ಕೊರೊನಾ ಸಂದರ್ಭದಲ್ಲಿ ನೀಡಿದ ಉಚಿತವಾಗಿ  ಸೇವೆನೀಡುವ ಆಂಬುಲೆನ್ಸ್  ನಿರ್ವಹಣೆ ಮಾಡುತ್ತಿದ್ದೇವೆ.ಹೀಗೆ ನಮ್ಮಿಂದಾದ ಸೇವೆ ಸಮಾಜಕ್ಕೆ ನಿರಂತರವಾಗಿ ಮಾಡುತ್ತಾ  ಬಂದಿದ್ದೇವೆಎಂದರು.

ನೆರವು ಪಡೆದ ಕುಟುಂಬದ ಸದಸ್ಯರಾದ ಸಂಜಿತ್ ಅಚಾರ್ಯ ಮನವಿ ಮಾಡಿ,

ಪ್ರತೀ ತಿಂಗಳು 50 ಸಾವಿರ ವೆಚ್ಚ  ಬರುತ್ತಿದ್ದು,ಬಡ ಕುಟುಂಬಕ್ಕೆ ಭರಿಸಲು ಕಷ್ಟವಾಗುತ್ತಿದೆ.

ಬಿರುವೆರ್ ಕುಡ್ಲದ ನೆರವಿಗೆ ಕೃತಜ್ಞತೆ ವ್ಯಕ್ತ ಪಡಿಸುತ್ತೇವೆ.

ಇತರರೂ ಮುಂದೆ ಬಂದು ಸಹಾಯ ಮಾಡಿದರೆ ನಮಗೆ ಮಗುವಿನ ರಕ್ಷಣೆಗೆ ಸಹಾಯವಾಗುತ್ತದೆ‌ ಎಂದು ಮನವಿ ಮಾಡಿದರು.

ಪ್ರಮುಖರಾದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್ ಬಾಗ್, ವಸಂತ ಪೂಜಾರಿ, ವೆಂಕಟೇಶ್ ಭಂಡಾರಿ,ರಾಧಕೃಷ್ಣಮುಂಬಾಯಿ ಅಧ್ಯಕ್ಷ  ರಾಕೇಶ್ ಪೂಜಾರಿ ಬಳ್ಳಾಲ್‍ಬಾಗ್,ವಿನು ಶೆಟ್ಟಿ  ತಲಪಾಡಿ,ಲತೀಶ್ ಪೂಜಾರಿ,ಕಿಶೋರ್ ಬಾಬು,ರಾಕೇಶ್ಚಿಲಿಂಬಿ,ಲೋಹಿತ್ ಗಟ್ಟಿ,ರಾಮ್‍ಪ್ರಸಾದ್ ಎಕ್ಕೂರ್,ಗಣೇಶ್ ಚಿಲಿಂಬಿ,ವಾಝಿ ಫೆರ್ನಾಂಡಿಸ್,ಪ್ರಾಣೇಶ್ ಬಂಗೇರ,ವಿಘ್ನೇಶ್  ಮತ್ತಿತರರು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »