TOP STORIES:

ಅಶಕ್ತ ಕುಟುಂಬಕ್ಕೆ ಬಿರುವೆರ್ ಕುಡ್ಲದಿಂದ ರೂ: 50 ಸಾವಿರ ಆರ್ಥಿಕ ನೆರವು ಹಸ್ತಾಂತರ


ಕುದ್ರೋಳಿ:- ಫ್ರೆಂಡ್ಸ್ ಬಳ್ಳಾಲ್‍ಬಾಗ್ ಬಿರುವೆರ್ ಕುಡ್ಲ ಇದರ ವತಿಯಿಂದ ಕುಪ್ಪೆ ಪದವಿನ ಜಗದೀಶ್ ಜಯಶ್ರೀ ಅವರ ಪುತ್ರ ಎರಡುವರ್ಷದ ಶಮಿತ್ ಚಿಕಿತ್ಸೆಗಾಗಿ 50 ಸಾವಿರ ಆರ್ಥಿಕ ನೆರವನ್ನು ಬುಧವಾರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದವಠಾರದಲ್ಲಿ ಹಸ್ತಾಂತರಿಸಲಾಯಿತು.

ಕ್ಷೇತ್ರದ ಮೊಕ್ತೇಸರ ಸಾಯೀರಾಮ್ ಅವರು ನೆರವಿನ ಚೆಕ್ ಹಸ್ತಾಂತರಿಸಿ, ಬಿರುವೆರ್ ಕುಡ್ಲ  ಸಮಾಜಮುಖೀ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬಿರುವೆರ್ ಕುಡ್ಲ ವಕ್ತಾರ ದಿನೇಶ್ ರಾಯಿ ಅವರು ಬಿರುವೆರ್ ಕುಡ್ಲದ ಕುರಿತಾಗಿ ಮಾಹಿತಿ ನೀಡಿ,

ಬಿರುವೆರ್ ಕುಡ್ಲದ  ಸ್ಥಾಪಕಾಧ್ಯಕ್ಷ ಉದಯಪೂಜಾರಿ ಬಳ್ಳಾಲ್‍ಬಾಗ್ ನೇತೃತ್ವದಲ್ಲಿ ಅವರ ಸದಸ್ಯರ,ಸ್ನೇಹಿತರ,ದಾನಿಗಳಕೊಡುಗೆಯಿದೆ.

ನಮ್ಮ ಸಂಘಟನೆಯು ಶಾರದಾ ಹುಲಿ ವೇಷ ಕುಣಿತ, ಕುದ್ರೋಳಿ ಕ್ಷೇತ್ರದ ದಸರದಲ್ಲಿ ಭಾಗವಹಿಸುತ್ತಾ ಬಂದಿದೆ. ಹುಲಿ ವೇಷದಲ್ಲಿಬಂದ ಹಣವನ್ನು ಸೇವಾ ರೂಪದಲ್ಲಿ ಖರ್ಚು ಮಾಡುತ್ತಿದ್ದೆವು. ಕಳೆದ 8 ವರ್ಷದಿಂದ ಸಂಸ್ಥೆಯು ಬಡ ವರ್ಗದ ಸೇವೆಗಾಗಿ  5 ಕೋಟಿರೂ.ನಷ್ಟು ನೆರವಿಗೆ ವಿನಿಯೋಗಿಸಿದ್ದೇವೆ. ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶದಲ್ಲಿ ಎಲ್ಲಾ ಜಾತಿ ಧರ್ಮದ ಕುಟುಂಬಕ್ಕೆನೆರವು ನೀಡಲಾಗಿದೆ.ಬೇರೆ ಬೇರೆ ಘಟಕಗಳು ತಮ್ಮ ಕರ್ತವ್ಯ ನಿರತವಾಗಿದೆ. ಕೊರೊನಾ ಸಂದರ್ಭದಲ್ಲಿ ನೀಡಿದ ಉಚಿತವಾಗಿ  ಸೇವೆನೀಡುವ ಆಂಬುಲೆನ್ಸ್  ನಿರ್ವಹಣೆ ಮಾಡುತ್ತಿದ್ದೇವೆ.ಹೀಗೆ ನಮ್ಮಿಂದಾದ ಸೇವೆ ಸಮಾಜಕ್ಕೆ ನಿರಂತರವಾಗಿ ಮಾಡುತ್ತಾ  ಬಂದಿದ್ದೇವೆಎಂದರು.

ನೆರವು ಪಡೆದ ಕುಟುಂಬದ ಸದಸ್ಯರಾದ ಸಂಜಿತ್ ಅಚಾರ್ಯ ಮನವಿ ಮಾಡಿ,

ಪ್ರತೀ ತಿಂಗಳು 50 ಸಾವಿರ ವೆಚ್ಚ  ಬರುತ್ತಿದ್ದು,ಬಡ ಕುಟುಂಬಕ್ಕೆ ಭರಿಸಲು ಕಷ್ಟವಾಗುತ್ತಿದೆ.

ಬಿರುವೆರ್ ಕುಡ್ಲದ ನೆರವಿಗೆ ಕೃತಜ್ಞತೆ ವ್ಯಕ್ತ ಪಡಿಸುತ್ತೇವೆ.

ಇತರರೂ ಮುಂದೆ ಬಂದು ಸಹಾಯ ಮಾಡಿದರೆ ನಮಗೆ ಮಗುವಿನ ರಕ್ಷಣೆಗೆ ಸಹಾಯವಾಗುತ್ತದೆ‌ ಎಂದು ಮನವಿ ಮಾಡಿದರು.

ಪ್ರಮುಖರಾದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್ ಬಾಗ್, ವಸಂತ ಪೂಜಾರಿ, ವೆಂಕಟೇಶ್ ಭಂಡಾರಿ,ರಾಧಕೃಷ್ಣಮುಂಬಾಯಿ ಅಧ್ಯಕ್ಷ  ರಾಕೇಶ್ ಪೂಜಾರಿ ಬಳ್ಳಾಲ್‍ಬಾಗ್,ವಿನು ಶೆಟ್ಟಿ  ತಲಪಾಡಿ,ಲತೀಶ್ ಪೂಜಾರಿ,ಕಿಶೋರ್ ಬಾಬು,ರಾಕೇಶ್ಚಿಲಿಂಬಿ,ಲೋಹಿತ್ ಗಟ್ಟಿ,ರಾಮ್‍ಪ್ರಸಾದ್ ಎಕ್ಕೂರ್,ಗಣೇಶ್ ಚಿಲಿಂಬಿ,ವಾಝಿ ಫೆರ್ನಾಂಡಿಸ್,ಪ್ರಾಣೇಶ್ ಬಂಗೇರ,ವಿಘ್ನೇಶ್  ಮತ್ತಿತರರು ಉಪಸ್ಥಿತರಿದ್ದರು.


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »