TOP STORIES:

ಮಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕೈಕೊಟ್ಟ ವಿದ್ಯುತ್‌: ವಿಮಾನಗಳ ಹಾರಾಟ ಸ್ಥಗಿತ


ತಾಂತ್ರಿಕ ಕಾರಣದಿಂದಾಗಿ ಮಂಗಳೂರು ವಿಮಾನ ನಿಲ್ದಾಣದ ರನ್ ವೇನಲ್ಲಿ ವಿದ್ಯುತ್ ಕೈ ಕೊಟ್ಟಿದ್ದು, ಏರ್ಪೋರ್ಟ್ ನಲ್ಲಿ ಲ್ಯಾಂಡ್ಆಗಬೇಕಿದ್ದ ವಿಮಾನಗಳನ್ನು ಡೈವರ್ಟ್ ಮಾಡಲಾಗಿದೆ.

ಮಂಗಳೂರು: ತಾಂತ್ರಿಕ ಕಾರಣದಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ( Mangaluru International Airport) ರನ್ ವೇನಲ್ಲಿ ವಿದ್ಯುತ್ ಕೈ ಕೊಟ್ಟಿದ್ದು, ಏರ್ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಡೈವರ್ಟ್ಮಾಡಲಾಗಿದೆ. ಪವರ್ ಸಪ್ಲೇ ಸಮಸ್ಯೆಯಿಂದ ರನ್ ವೇನಲ್ಲಿ ಕತ್ತಲು ಆವರಿಸಿದೆ. ಮುಂಬೈನಿಂದ ಆಗಮಿಸಿದ ವಿಮಾನ ಎಟಿಸಿಸೂಚನೆ ಹಿನ್ನೆಲೆ ಲ್ಯಾಂಡ್ ಆಗದೇ ಕೇರಳದ ಕಣ್ಣೂರಿಗೆ ವಾಪಾಸ್ ತೆರಳಿದೆ. ತಾಂತ್ರಿಕ ಸಮಸ್ಯೆ ಸರಿಪಡಿಸುವವರೆಗೆ ಮಂಗಳೂರಿಗೆಬರುವ ಮತ್ತು ಹೋಗುವ ಎಲ್ಲಾ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ವಿದ್ಯುತ್‌ ಪೂರೈಕೆ ಸಮಸ್ಯೆಯನ್ನು ಏರ್‌ಪೋರ್ಟ್ ಸಿಬ್ಬಂದಿಗಳು ಸರಿಪಡಿಸುತ್ತಿದ್ದು, ಬಹರೈನ್‌ಗೆ ತೆರಳಬೇಕಿದ್ದ ಏರ್‌ ಇಂಡಿಯಾಸಂಚಾರದಲ್ಲಿ ವಿಳಂಬವಾಗಿದೆ. ಜೊತೆಗೆ ಚೆನ್ನೈ, ಬೆಂಗಳೂರಿಂದ ಬರಬೇಕಿದ್ದ ವಿಮಾನಗಳ ಲ್ಯಾಂಡಿಂಗ್ ಕೂಡ ವಿಳಂಬವಾಗುತ್ತಿದೆ.

ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಭಾರೀ ದುರಂತ 

ಇತ್ತೀಚೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿಯೊಂದುಡಿಕ್ಕಿ ಹೊಡೆದಿತ್ತು. ಅದೃಷ್ಟವಶಾತ್ ಭಾರೀ ದುರಂತ ತಪ್ಪಿತ್ತು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಸಹಿತ ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿತ್ತು

ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಇಂಡಿಗೋ ವಿಮಾನ ಸಾಗುತ್ತಿತ್ತು. ವೇಳೆ ಏಕಾಏಕಿಯಾಗಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿಹೊಡೆದಿತ್ತು. ತಕ್ಷಣ ಅಪಾಯದ ಸೂಚನೆ ಅರಿತು ಪೈಲಟ್ ಎಟಿಸಿಗೆ ಮಾಹಿತಿ ನೀಡಿದ್ದರು. ಟೇಕಾಫ್ ಕ್ಯಾನ್ಸಲ್ ಮಾಡಿ ರನ್ವೇನಿಂದ ವಿಮಾನವನ್ನು ವಾಪಾಸ್ ತರಲಾಗಿತ್ತು.

ಬಲಿಕ ಪ್ರಯಾಣಿಕರನ್ನ ಇಳಿಸಿ ವಿಮಾನದ ತಪಾಸಣೆ ಮಾಡಲಾಗಿತ್ತು. ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದಮೂಲಕ ಪ್ರಯಾಣಿಕರನ್ನು ದುಬೈಗೆ ಕಳಿಸಲು ವ್ಯವಸ್ಥೆ ಮಾಡಲಾಯಿತು. ಕೆಲ ಕಾಲ ಮಂಗಳೂರು ಏರ್ಪೋರ್ಟ್ ನಲ್ಲಿ ಅವಘಡಆತಂಕಕ್ಕೆ ಕಾರಣವಾಗಿತ್ತು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »