TOP STORIES:

ಬಿರುವೆರ್ ಕುಡ್ಲ ಬಜಪೆ ಘಟಕ ದ ಮಹಾಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತ ಮನೆ ನಿರ್ಮಾಣದ ಉದ್ಘಾಟನೆ ಹಾಗೂ ಹಸ್ತಾಂತರ ಕಾರ್ಯಕ್ರಮ


ಬಿರುವೆರ್ ಕುಡ್ಲ ಬಜಪೆ ಘಟಕ ಮಹಾಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತ ಮನೆ ನಿರ್ಮಾಣದ ಉದ್ಘಾಟನೆ ಹಾಗೂಹಸ್ತಾಂತರ ಕಾರ್ಯಕ್ರಮ ದಿನಾಂಕ 25.6.2023ನೇ ಭಾನುವಾರ ಬೆಳಿಗ್ಗೆ 10 ಗಂಟೆಗೆ ನೆರವೇರಿತು.
  ಬಜಪೆ ಸಮೀಪದ ಮುಂಡಬೆಟ್ಟು, ಮೂಡುಪೆರಾರ ನಿವಾಸಿ ದಯಾನಂದ ಬಂಗೇರ ಮತ್ತು ಅವರ ಮೂರು ಮಕ್ಕಳು, ಒಂದುಗಂಡು ಮತ್ತು ಎರಡು ಹೆಣ್ಣು ಮಕ್ಕಳು. ಇವರ ಕುಟುಂಬವು ಕಡು ಬಡತನದಲ್ಲಿ ಜೀವನ ಸಾಗುತ್ತಿದ್ದರು. ಇವರಿಗೆ ವಾಸಿಸಲುಯೋಗ್ಯವಾದ ಮನೆ ಇರಲಿಲ್ಲ ಒಂದು ಗುಡಿಸಿಲಿನಲ್ಲಿ ವಾಸಿಸುತ್ತಿದ್ದು, ತನ್ನ ಕಷ್ಟವನ್ನು ತಾಳಲಾರದೆ ಇವರು ಬಿರುವೆರ್ ಕುಡ್ಲ ಬಜಪೆಘಟಕಕ್ಕೆ ಮನವಿಯನ್ನು ನೀಡಿರುತ್ತಾರೆ. ಇದನ್ನು ಗಮನಿಸಿದ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇವರಿಗೆ ಮನೆನಿರ್ಮಿಸಿ ಕೊಡುವ ಭರವಸೆಯನ್ನು ನೀಡಿ ತಕ್ಷಣವೇ ಮನೆ ನಿರ್ಮಾಣದ ಕೆಲಸವನ್ನು ಆರಂಭಿಸಿ ಕೆಲವೇ ದಿನಗಳಲ್ಲಿ ಬಿರುವೆರ್ ಕುಡ್ಲಬಜಪೆ ಘಟಕದ ಮಹಾ ಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತವಾದ ಸುಮರು 12 ಲಕ್ಷ ವೆಚ್ಚದ ಮನೆಯನ್ನು ನಿರ್ಮಿಸಿಕೊಟ್ಟಿದೆ. ಇದು ಅನೇಕ ದಾನಿಗಳ ಸಹಕಾರದಿಂದ ಮನೆ ನಿರ್ಮಾಣದ ಮಹಾ ಸೇವಾ ಯೋಜನೆ ಅತಿ ಯಶಸ್ವಿಯಾಗಿ ನೆರವೇರಿದೆಎಂದು ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ಕೆಂಜಾರು ಕಾನ ಹೇಳಿದ್ದಾರೆ.

  ಮನೆಯ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಕುದ್ರೋಳಿಯ ಅಧ್ಯಕ್ಷರಾದ ಶ್ರೀ ಸಾಯಿ ರಾಮ್ ರವರು ನೆರವೇರಿಸಿದ್ದು,  ಮನೆಯಹಸ್ತಾಂತರವನ್ನು ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯದ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸದರು ಶ್ರೀ ನಳಿನ್ಕುಮಾರ್ ಕಟೀಲು ರವರು ದಯಾನಂದ ಬಂಗೇರರವರ ಕುಟುಂಬಕ್ಕೆ ಮನೆಯನ್ನು ಹಸ್ತಾಂತರಿಸಿದರು. ಗುರುಪುರದ ವಜ್ರದೇಹಿಮಠದ ಶ್ರೀ ಶ್ರೀ ಶ್ರೀ ರಾಜಶೇಖರನಂದ ಸ್ವಾಮೀಜಿಗಳು ಬಿರುವೆರ್ ಕುಡ್ಲ ಸಂಘಟನೆಯ ಸಾಧನೆಯನ್ನು ಹಾಗೂ ಶ್ರದ್ಧೆಯನ್ನು ಮೆಚ್ಚಿ , ಕೊಂಡಾಡಿ ಘಟಕದ ಎಲ್ಲಾ ಸದಸ್ಯರನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ಸಂಸದರಾದ ನಳಿನ್ ಕುಮಾರ್ ಕಟೀಲು ಮಾತನಾಡಿಬಿರುವೆರ್ ಕುಡ್ಲ ಸಂಘಟನೆಯ ಬಗ್ಗೆ ಸಮಾಜಮುಖಿ ಸೇವೆ ನಾನು ಕಳೆದ ಆರು ವರ್ಷಗಳಿಂದ ನೋಡುತ್ತಾ ಬಂದಿದ್ದೇನೆ. ನನ್ನಆತ್ಮೀಯ ಮಿತ್ರರಾದ ಉದಯ ಪೂಜಾರಿ ರವರ ನೇತೃತ್ವದಲ್ಲಿ ಅತಿ ಯಶಸ್ವಿಯಾಗಿ ಸಂಘಟನೆ ಸಮಾಜದ ಕಾಳಜಿ, ಅಶಕ್ತರ ಪಾಲಿಗೆದಾರಿದೀಪವಾಗಿ ಸಮಾಜದ ಜೊತೆ ಸಾಗುತ್ತಿದೆ ಎಂದರು. ಶ್ರೀ ಕ್ಷೇತ್ರ ಕುದ್ರೋಳಿಯ ಅಧ್ಯಕ್ಷರಾದ ಸಾಯಿ ರಾಮ್ ರವರು ಘಟಕಕ್ಕೆಶುಭ ಕೋರಿದರು.  ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ವೈ ಭರತ್ ಶೆಟ್ಟಿಯವರು ಬಿರುವೆರ್ ಕುಡ್ಲ  ಸಂಘಟನೆ ಮತ್ತು ತಮ್ಮಆತ್ಮೀಯತೆಯನ್ನು ಬಣ್ಣಿಸಿದರು. ಹಾಗೂ ಸಂಘಟನೆಯ ಕಾರ್ಯವೈಕರಿಗೆ ಶುಭ ಹಾರೈಸಿದರು. ಮಂಗಳೂರು ದಕ್ಷಿಣ ಕ್ಷೇತ್ರದಶಾಸಕರಾದ ಶ್ರೀ ವೇದವ್ಯಾಸ ಕಾಮತ್ ರವರು ಮಾತನಾಡಿ ಬಿರುವೆರ್ ಕುಡ್ಲ ಬಜಪೆ ಘಟಕವು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಆಧಾರಿತವಾಗಿ ಸಮಾಜದ ಎಲ್ಲಾ ವರ್ಗದ ಜನರನ್ನು ಒಟ್ಟಿಗೆ ಸೇರಿಸಿಕೊಂಡು ಸಮಾಜಮುಖಿ ಸೇವೆಗಳನ್ನು ಮಾಡುತ್ತಾ ಸಮಾಜದದಾರಿದೀಪವಾಗಿದೆ ಎಂದರು.

ಸಂದರ್ಭದಲ್ಲಿ ಮನೆ ನಿರ್ಮಾಣದ ಕಾರ್ಯಕ್ಕೆ ಸಹಕರಿಸಿದ ಎಲ್ಲರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಮುಲ್ಕಿಮೂಡಬಿದ್ರೆ ಕ್ಷೇತ್ರದ ಶಾಸಕರಾದ ಶ್ರೀ ಉಮನಾಥ ಕೋಟ್ಯಾನ್, ಶ್ರೀ ಕ್ಷೇತ್ರ ಕುದ್ರೋಳಿ ಇದರ ಉಪಾಧ್ಯಕ್ಷರಾದ ಶ್ರೀ ಊರ್ಮಿಳರಮೇಶ್ ಕುಮಾರ್, ಶ್ರೀ ಕಟೀಲ್ ಕನ್ಸ್ಟ್ರಕ್ಷನ್ ಶ್ರೀ ಶಿವರಾಮ ಕೋಟ್ಯಾನ್, ಸಂಘಟನೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯಪೂಜಾರಿ ಬಳ್ಳಾಲ್ ಬಾಗ್, ಉದ್ಯಮಿ ಶ್ರೀ ವಿವೇಕ್ ರಾಜ್ ಪೂಜಾರಿ, ಶ್ರೀ ಚಂದ್ರಶೇಖರ್ ಎಂ ಅಮಿನ್ ವಕೀಲರು , ಘಟಕದಅಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ಕೆಂಜಾರು ಕಾನ, ಪಡುಪೆರಾರ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅಮಿತಾಶೆಟ್ಟಿ ಹಾಗೂಆನೇಕ ಗಣ್ಯಾಧಿಗಣ್ಯರು ಉಪಸ್ಥಿತರಿದ್ದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »