TOP STORIES:

ಅಮೇರಿಕಾದಲ್ಲಿ ಪ್ರಧಾನಿ ಮೋದಿಗೆ ಮತ್ತೆ “ಆನಂದ”ದ ಆತಿಥ್ಯ ಹೋಟೇಲ್ ಉದ್ಯಮಿ ಆನಂದ್‌ ಪೂಜಾರಿ ಅವರದಾಗಿತ್ತು


ಕುಂದಾಪುರ: ಮೂರು ದಿನಗಳ ಕಾಲ ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಸ್ಯಾಹಾರತಯಾರಿಸಿಕೊಡುವ ಜವಾಬ್ದಾರಿ ಕುಂದಾಪುರದ ಆಲೂರು ಮೂಲದ ಅನಿವಾಸಿ ಭಾರತೀಯ ಹೊಟೇಲ್‌ ಉದ್ಯಮಿ ಆನಂದ್‌ಪೂಜಾರಿ ಅವರದಾಗಿತ್ತು.

ಮೋದಿ ಅವರು ವಾಷಿಂಗ್ಟನ್‌ ಡಿ.ಸಿ.ಯಲ್ಲಿ ವಾಸ್ತವ್ಯವಿದ್ದ ಮೂರು ದಿನ ಊಟೋಪಚಾರದ ನೇತೃತ್ವ ವಹಿಸಿದವರು ಆಲೂರುಆನಂದ ಪೂಜಾರಿ. ಮೂಲಕ ಆನಂದ್‌ ಅವರು ಮೋದಿ ಅವರಿಗೆ ಐದನೇ ಬಾರಿಗೆ ಊಟದ ಆತಿಥ್ಯದ ಜವಾಬ್ದಾರಿನೋಡಿಕೊಂಡಂತಾಗಿದೆ.

ವಾಷಿಂಗ್ಟನ್‌ ಡಿಸಿಯಲ್ಲಿ 35 ವರ್ಷಗಳಿಂದ ನೆಲೆಸಿರುವ ಆನಂದ ಪೂಜಾರಿ ಮತ್ತು ಪತ್ನಿ ಸುಮಿತಾ ದಂಪತಿ 25 ವರ್ಷಗಳಿಗೂ ಹೆಚ್ಚುಕಾಲದಿಂದ ವುಡ್‌ಲ್ಯಾಂಡ್ಸ್‌ ಹೊಟೇಲನ್ನು ನಡೆಸುತ್ತಿದ್ದಾರೆ. ಇವರು ಬೈಂದೂರು ತಾಲೂಕಿನ ಆಲೂರು ಗ್ರಾಮದ ಕಲ್ಲಂಗಡಿ ಮನೆಯನಿವಾಸಿ ಬಡಿಯ ಪೂಜಾರಿ ಹಾಗೂ ಗಿರಿಜಾ ದಂಪತಿಯ ಪುತ್ರ.

ವಾಷಿಂಗ್ಟನ್‌ ಡಿಸಿಯಲ್ಲಿಯೇ ಇವರ ಹೊಟೇಲ್‌ ಇರುವುದರಿಂದ ಭಾರತದಿಂದ ಅಮೆರಿಕಕ್ಕೆ ಕೇಂದ್ರ ಸಚಿವರ ಸಹಿತ ಗಣ್ಯರು ಭೇಟಿನೀಡಿದರೆ, ಅವರಿಗೆಲ್ಲ ಆತಿಥ್ಯ ಇವರದೇ ಆಗಿದೆ.2023 ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವಾದ್ದರಿಂದ ಮೊದಲ ದಿನ ರಾತ್ರಿಯೂಟಕ್ಕೆ ಸಿರಿಧಾನ್ಯಗಳದೇ ಬಿಸಿಬೇಳೆ ಬಾತ್‌ಮಾಡಿದ್ದರು. ಉಳಿದಂತೆ ಮೋದಿಯವರು ಗುಜರಾತಿ ಶೈಲಿಯಲ್ಲಿ ಕಿಚಡಿ, ಢೋಕ್ಲಾ, ಹಸಿ ಅಥವಾ ಬೇಯಿಸಿದ ತಾಜಾ ತರಕಾರಿಗಳು, ಹಣ್ಣುಗಳು ಇತ್ಯಾದಿಯನ್ನಷ್ಟೇ ಬಯಸುವುದರಿಂದ ಮತ್ತು . ಭಾರತೀಯ ವಿಶೇಷಗಳಾದ ಇಡ್ಲಿಚಟ್ನಿ, ವಡೆಸಾಂಬಾರ್‌ ಸಹಅವರಿಗೆ ಇಷ್ಟವೇ ಆದ್ದರಿಂದ, ಪುನರಾವರ್ತನೆ ಆಗದಂತೆ ನೋಡಿಕೊಂಡು ಶುದ್ಧ ಸಸ್ಯಹಾರ ಆಹಾರವನ್ನೇ ಒದಗಿಸಿದ್ದಾರೆ. “ತರಕಾರಿಗಳೆಲ್ಲ ಭಾರತದವೇ ಆಗಬೇಕೆಂದು ಎಲ್ಲೆಲ್ಲಿಂದ ಹುಡುಕಿ ತರುವ ಕಷ್ಟ ತಗೋಬೇಡಿ. ಸ್ಥಳೀಯವಾಗಿ ಬೆಳೆದ, ಇದುವರೆಗೆನನಗೆ ಅಪರಿಚಿತ ತರಕಾರಿಗಳಿದ್ದರೆ ದಯವಿಟ್ಟು ಅವುಗಳನ್ನೇ ಬಳಸಿಎಂದು ಮೋದಿಯವರು ಸೂಚನೆ ಕೊಟ್ಟಿದ್ದರು ಎನ್ನಲಾಗಿದೆ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »