TOP STORIES:

FOLLOW US

ಅಮೇರಿಕಾದಲ್ಲಿ ಪ್ರಧಾನಿ ಮೋದಿಗೆ ಮತ್ತೆ “ಆನಂದ”ದ ಆತಿಥ್ಯ ಹೋಟೇಲ್ ಉದ್ಯಮಿ ಆನಂದ್‌ ಪೂಜಾರಿ ಅವರದಾಗಿತ್ತು


ಕುಂದಾಪುರ: ಮೂರು ದಿನಗಳ ಕಾಲ ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಸ್ಯಾಹಾರತಯಾರಿಸಿಕೊಡುವ ಜವಾಬ್ದಾರಿ ಕುಂದಾಪುರದ ಆಲೂರು ಮೂಲದ ಅನಿವಾಸಿ ಭಾರತೀಯ ಹೊಟೇಲ್‌ ಉದ್ಯಮಿ ಆನಂದ್‌ಪೂಜಾರಿ ಅವರದಾಗಿತ್ತು.

ಮೋದಿ ಅವರು ವಾಷಿಂಗ್ಟನ್‌ ಡಿ.ಸಿ.ಯಲ್ಲಿ ವಾಸ್ತವ್ಯವಿದ್ದ ಮೂರು ದಿನ ಊಟೋಪಚಾರದ ನೇತೃತ್ವ ವಹಿಸಿದವರು ಆಲೂರುಆನಂದ ಪೂಜಾರಿ. ಮೂಲಕ ಆನಂದ್‌ ಅವರು ಮೋದಿ ಅವರಿಗೆ ಐದನೇ ಬಾರಿಗೆ ಊಟದ ಆತಿಥ್ಯದ ಜವಾಬ್ದಾರಿನೋಡಿಕೊಂಡಂತಾಗಿದೆ.

ವಾಷಿಂಗ್ಟನ್‌ ಡಿಸಿಯಲ್ಲಿ 35 ವರ್ಷಗಳಿಂದ ನೆಲೆಸಿರುವ ಆನಂದ ಪೂಜಾರಿ ಮತ್ತು ಪತ್ನಿ ಸುಮಿತಾ ದಂಪತಿ 25 ವರ್ಷಗಳಿಗೂ ಹೆಚ್ಚುಕಾಲದಿಂದ ವುಡ್‌ಲ್ಯಾಂಡ್ಸ್‌ ಹೊಟೇಲನ್ನು ನಡೆಸುತ್ತಿದ್ದಾರೆ. ಇವರು ಬೈಂದೂರು ತಾಲೂಕಿನ ಆಲೂರು ಗ್ರಾಮದ ಕಲ್ಲಂಗಡಿ ಮನೆಯನಿವಾಸಿ ಬಡಿಯ ಪೂಜಾರಿ ಹಾಗೂ ಗಿರಿಜಾ ದಂಪತಿಯ ಪುತ್ರ.

ವಾಷಿಂಗ್ಟನ್‌ ಡಿಸಿಯಲ್ಲಿಯೇ ಇವರ ಹೊಟೇಲ್‌ ಇರುವುದರಿಂದ ಭಾರತದಿಂದ ಅಮೆರಿಕಕ್ಕೆ ಕೇಂದ್ರ ಸಚಿವರ ಸಹಿತ ಗಣ್ಯರು ಭೇಟಿನೀಡಿದರೆ, ಅವರಿಗೆಲ್ಲ ಆತಿಥ್ಯ ಇವರದೇ ಆಗಿದೆ.2023 ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವಾದ್ದರಿಂದ ಮೊದಲ ದಿನ ರಾತ್ರಿಯೂಟಕ್ಕೆ ಸಿರಿಧಾನ್ಯಗಳದೇ ಬಿಸಿಬೇಳೆ ಬಾತ್‌ಮಾಡಿದ್ದರು. ಉಳಿದಂತೆ ಮೋದಿಯವರು ಗುಜರಾತಿ ಶೈಲಿಯಲ್ಲಿ ಕಿಚಡಿ, ಢೋಕ್ಲಾ, ಹಸಿ ಅಥವಾ ಬೇಯಿಸಿದ ತಾಜಾ ತರಕಾರಿಗಳು, ಹಣ್ಣುಗಳು ಇತ್ಯಾದಿಯನ್ನಷ್ಟೇ ಬಯಸುವುದರಿಂದ ಮತ್ತು . ಭಾರತೀಯ ವಿಶೇಷಗಳಾದ ಇಡ್ಲಿಚಟ್ನಿ, ವಡೆಸಾಂಬಾರ್‌ ಸಹಅವರಿಗೆ ಇಷ್ಟವೇ ಆದ್ದರಿಂದ, ಪುನರಾವರ್ತನೆ ಆಗದಂತೆ ನೋಡಿಕೊಂಡು ಶುದ್ಧ ಸಸ್ಯಹಾರ ಆಹಾರವನ್ನೇ ಒದಗಿಸಿದ್ದಾರೆ. “ತರಕಾರಿಗಳೆಲ್ಲ ಭಾರತದವೇ ಆಗಬೇಕೆಂದು ಎಲ್ಲೆಲ್ಲಿಂದ ಹುಡುಕಿ ತರುವ ಕಷ್ಟ ತಗೋಬೇಡಿ. ಸ್ಥಳೀಯವಾಗಿ ಬೆಳೆದ, ಇದುವರೆಗೆನನಗೆ ಅಪರಿಚಿತ ತರಕಾರಿಗಳಿದ್ದರೆ ದಯವಿಟ್ಟು ಅವುಗಳನ್ನೇ ಬಳಸಿಎಂದು ಮೋದಿಯವರು ಸೂಚನೆ ಕೊಟ್ಟಿದ್ದರು ಎನ್ನಲಾಗಿದೆ.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »