TOP STORIES:

FOLLOW US

ಮನ್ಸೂನ್​ನಲ್ಲಿ ಕಾಡುತ್ತಿದ್ಯಾ ಕೀಲು ನೋವು; ಇಲ್ಲಿದೆ ಇದಕ್ಕೆ ಪರಿಹಾರ


ಬೆಂಗಳೂರು: ಮಳೆಗಾಲದಲ್ಲಿ ಕೆಲವು ಮಂದಿಗೆ ಕೀಲು ನೋವಿನ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಈ ಅವಧಿಯಲ್ಲಿ ನೋವು ಉಲ್ಬಣಗೊಳ್ಳಲು ನಿಖರವಾದ ಕಾರಣ ತಿಳಿದಿಲ್ಲ.

ಸಂಶೋಧನೆಗಳು ಕೂಡ ಈ ಬಗ್ಗೆ ಹೆಚ್ಚು ಸ್ಪಷ್ಟವಾಗಿ ತಿಳಿಸಿಲ್ಲ. ಮಳೆಗಾಲದಲ್ಲಿ ಈ ನೋವು ಹೆಚ್ಚು ಎಂದು ಕೆಲವು ಅಧ್ಯಯನಗಳು ವಾದಿಸಿದರೆ, ಮತ್ತೆ ಕೆಲವು ಅಧ್ಯಯನಗಳು ಈ ಆರೋಪವನ್ನು ತಳ್ಳಿಹಾಕುತ್ತದೆ. ಆದರೆ, ತಜ್ಞರ ಪ್ರಕಾರ, ಪರಿಸರದಲ್ಲಿನ ಬದಲಾವಣೆಗಳು ಕೀಲು ನೋವಿಗೆ ಪ್ರಮುಖ ಕಾರಣವಾಗಿದೆ.

ಮಳೆಗಾಲದಲ್ಲಿ ಪರಿಸರದಲ್ಲಿನ ವಾಯುವಿನ ಒತ್ತಡ ಕಡಿಮೆಯಾಗುತ್ತದೆ. ದೇಹದಲ್ಲಿನ ಗಾಳಿಯ ಒತ್ತಡವೂ ಈ ಋತುಮಾನದಲ್ಲಿ ಕಡಿಮೆಯಾಗುತ್ತದೆ. ಫಲಿತಾಂಶವಾಗಿ ಕೀಲುಗಳ ಸುತ್ತಲು ಇರುವ ಸ್ನಾಯು, ಅಸ್ಥಿರಜ್ಜು ಮತ್ತು ಇನ್ನಿತರೆ ಟಿಶ್ಯೂಗಳ ಮೇಲೆ ಒತ್ತಡ ಬೀಳುತ್ತದೆ. ಇದು ಕೀಲು ನೋವಿಗೆ ಕಾರಣವಾಗುತ್ತದೆ. ಸಂಧಿವಾತದೊಂದಿಗೆ ಬಳಲುತ್ತಿರುವ ಮಂದಿ ಅಥವಾ ಇತರೆ ದೀರ್ಘ ನೋವಿನ ಅನುಭವ ಹೊಂದಿರುವವರು ಇದರಿಂದ ಕಿರಿಕಿರಿ ಅನುಭವಿಸುತ್ತಾರೆ. ವಾತಾವರಣ ಸರಿ ಹೋದಂತೆ ಗಾಳಿಯ ಒತ್ತಡವೂ ಹೊಂದಾಣಿಕೆಯಾಗುತ್ತದೆ. ಇದರಿಂದ ನೋವು ಕೂಡ ಕಡಿಮೆಯಾಗುತ್ತದೆ. ಕೀಲು ನೋವಿಗೆ ಇದು ಮಾತ್ರವಲ್ಲದೇ, ಇನ್ನಿತರೆ ಕಾರಣಗಳು ಸಹ ಇವೆ.

ಮಳೆ ವಾತಾವರಣದಿಂದ ಮನೆಯಿಂದ ಹೊರ ಹೋಗಲು ಸಾಧ್ಯವಾಗುವುದಿಲ್ಲ. ಇದರಿಂದ ಮನೆಯಲ್ಲಿಯೇ ದೀರ್ಘಕಾಲ ಇರಬೇಕಾಗುತ್ತದೆ. ಮನೆಯಲ್ಲೇ ದೀರ್ಘಕಾಲ ಕುಳಿತಿರುವ ಕಾರಣ ಸ್ನಾಯು ಮತ್ತು ಕೀಲುಗಳು ಜಡತ್ವಗೊಂಡು ನೋವು ಹೆಚ್ಚುತ್ತದೆ.

ಮೋಡ ಕವಿದ ವಾತಾವರಣದಿಂದ ನಿಮ್ಮ ಮನಸ್ಥಿತಿ ಕೂಡ ಬದಲಾಗಬಹುದು. ಇದರಿಂದ ನಿಮ್ಮ ಗಮನ ನೋವಿನಂತಹ ನಕಾರಾತ್ಮಕ ಅಂಶಗಳಿಗೆ ಹೆಚ್ಚು ಹೋಗುತ್ತದೆ. ನೋವಿನ ಬಗ್ಗೆ ಹೆಚ್ಚು ಯೋಚಿಸಿದಂತೆ ಅದು ಮತ್ತಷ್ಟು ಕೆಟ್ಟದಾಗಬಹುದು.

ಅನೇಕ ಮಂದಿಗೆ ಮಳೆ ಬಂದರೆ ನೋವು ಹೆಚ್ಚಿದಂತೆ ಎಂಬ ಅಂಶ ತಲೆಯಲ್ಲಿ ಹೊಕ್ಕಿರುತ್ತದೆ. ಅವರ ಮನಸ್ಥಿತಿ ಅನುಸಾರವಾಗಿ ಕೂಡ ಅನೇಕ ಬಾರಿ ನೋವು ಹೆಚ್ಚುತ್ತದೆ.

ನೋವು ಕಡಿಮೆ ಮಾಡುವುದು ಹೇಗೆ? ಸಂಶೋಧನೆಗಳು ಮಳೆಗಾಲದಲ್ಲಿ ಕೀಲು ನೋವು ಹೆಚ್ಚಿಸುತ್ತದೆ ಎಂಬುದನ್ನು ಸಾಬೀತು ಮಾಡಲಿ, ಬಿಡಲಿ, ನೀವು ಕೆಲವು ಮುನ್ನೆಚ್ಚರಿಕೆಗಳನ್ನು ವಹಿಸುವುದು ಮುಖ್ಯವಾಗುತ್ತದೆ. ಹವಾಮಾನ ಬದಲಾಗುತ್ತಿದ್ದಂತೆ ಈ ಬಗ್ಗೆ ಕ್ರಮವಹಿಸಿ.

ಸ್ನಾಯು ಮತ್ತು ಮೂಳೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ನಿಯಮಿತವಾಗಿ ವ್ಯಾಯಾಮದಂತಹ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು.

ನಡೆದಾಡುವುದಕ್ಕಿಂತ ಒಟ್ಟಿಗೆ ಕುಳಿತುಕೊಳ್ಳುವುದು ಉತ್ತಮ. ನೀವು ಹೊರಗೆ ಹೋಗಲು ಸಾಧ್ಯವಾಗದೇ ಇದ್ದರೆ, ಮನೆಯ ಒಳಗಡೆಯೇ ಓಡಾಡಿ. ಟ್ರೆಡ್​ ಮಿಲ್​ನಲ್ಲಿ ವಾಕಿಂಗ್​ ಮಾಡುವುದು ಉತ್ತಮವಾಗಿರಲಿದೆ.

ತೂಕ ಹೆಚ್ಚಳ ಕೂಡ ಕೀಲು, ಸಂಧಿಗಳ ಮೇಲೆ ಒತ್ತಡ ಹೆಚ್ಚಾಗಿ ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತದೆ. ಈ ಹಿನ್ನೆಲೆ ತೂಕವನ್ನು ಕಡಿಮೆ ಮಾಡಿ. ಸಾಮಾನ್ಯ ತೂಕವನ್ನು ನೀವು ಹೊಂದಿದ್ದರೆ, ಅದನ್ನು ಹೆಚ್ಚಿಸಿ.

ಶಾಖ ಕೂಡ ಅನೇಕ ಬಾರಿ ನೋವಿನ ಉಪಶಮನ ಮಾಡುತ್ತದೆ. ಈ ಹಿನ್ನೆಲೆ ನೋವು ಇರುವ ಪ್ರದೇಶದಲ್ಲಿ ಬಿಸಿ ನೀರನ್ನು ಹಾಕಿಕೊಳ್ಳುವುದು ಉತ್ತಮ ಮಾರ್ಗವಾಗಿರಲಿದೆ. ಅಥವಾ ಆ ಪ್ರದೇಶದಲ್ಲಿ ಬಿಸಿ ನೀರಿನಲ್ಲಿ ಮುಳುಗಿ ಏಳಿಸಿದ ಟವೆಲ್​ ಅನ್ನು ಅನ್ನು ಇಡುವುದು ಆರಾಮದಾಯವಾಗಬಹುದು. ಸಾಧ್ಯವಾದರೆ, ಹೀಟಿಂಗ್​ ಪಾಡ್ಸ್​ ಅನ್ನು ಬಳಸಬಹುದು. ಬಿಸಿ ನೀರಿನಲ್ಲಿ ಸ್ನಾನ ಮಾಡುವುದು ನೋವು ಕಡಿಮೆ ಮಾಡಲಿದೆ.

ಹೊಟ್ಟೆಯಲ್ಲಿ ನೀರಿನ ಪ್ರಮಾಣ ಕಡಿಮೆಯಾದರೆ, ಕೀಲುಗಳು ಸರಿಯಾಗಿ ಚಲಿಸಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆ ಮಳೆಗಾಲದಲ್ಲೂ ಸಾಕಷ್ಟು ಪ್ರಮಾಣದ ನೀರು ಸೇವಿಸುವುದು ಉತ್ತಮ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »