TOP STORIES:

ಮನ್ಸೂನ್​ನಲ್ಲಿ ಕಾಡುತ್ತಿದ್ಯಾ ಕೀಲು ನೋವು; ಇಲ್ಲಿದೆ ಇದಕ್ಕೆ ಪರಿಹಾರ


ಬೆಂಗಳೂರು: ಮಳೆಗಾಲದಲ್ಲಿ ಕೆಲವು ಮಂದಿಗೆ ಕೀಲು ನೋವಿನ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಈ ಅವಧಿಯಲ್ಲಿ ನೋವು ಉಲ್ಬಣಗೊಳ್ಳಲು ನಿಖರವಾದ ಕಾರಣ ತಿಳಿದಿಲ್ಲ.

ಸಂಶೋಧನೆಗಳು ಕೂಡ ಈ ಬಗ್ಗೆ ಹೆಚ್ಚು ಸ್ಪಷ್ಟವಾಗಿ ತಿಳಿಸಿಲ್ಲ. ಮಳೆಗಾಲದಲ್ಲಿ ಈ ನೋವು ಹೆಚ್ಚು ಎಂದು ಕೆಲವು ಅಧ್ಯಯನಗಳು ವಾದಿಸಿದರೆ, ಮತ್ತೆ ಕೆಲವು ಅಧ್ಯಯನಗಳು ಈ ಆರೋಪವನ್ನು ತಳ್ಳಿಹಾಕುತ್ತದೆ. ಆದರೆ, ತಜ್ಞರ ಪ್ರಕಾರ, ಪರಿಸರದಲ್ಲಿನ ಬದಲಾವಣೆಗಳು ಕೀಲು ನೋವಿಗೆ ಪ್ರಮುಖ ಕಾರಣವಾಗಿದೆ.

ಮಳೆಗಾಲದಲ್ಲಿ ಪರಿಸರದಲ್ಲಿನ ವಾಯುವಿನ ಒತ್ತಡ ಕಡಿಮೆಯಾಗುತ್ತದೆ. ದೇಹದಲ್ಲಿನ ಗಾಳಿಯ ಒತ್ತಡವೂ ಈ ಋತುಮಾನದಲ್ಲಿ ಕಡಿಮೆಯಾಗುತ್ತದೆ. ಫಲಿತಾಂಶವಾಗಿ ಕೀಲುಗಳ ಸುತ್ತಲು ಇರುವ ಸ್ನಾಯು, ಅಸ್ಥಿರಜ್ಜು ಮತ್ತು ಇನ್ನಿತರೆ ಟಿಶ್ಯೂಗಳ ಮೇಲೆ ಒತ್ತಡ ಬೀಳುತ್ತದೆ. ಇದು ಕೀಲು ನೋವಿಗೆ ಕಾರಣವಾಗುತ್ತದೆ. ಸಂಧಿವಾತದೊಂದಿಗೆ ಬಳಲುತ್ತಿರುವ ಮಂದಿ ಅಥವಾ ಇತರೆ ದೀರ್ಘ ನೋವಿನ ಅನುಭವ ಹೊಂದಿರುವವರು ಇದರಿಂದ ಕಿರಿಕಿರಿ ಅನುಭವಿಸುತ್ತಾರೆ. ವಾತಾವರಣ ಸರಿ ಹೋದಂತೆ ಗಾಳಿಯ ಒತ್ತಡವೂ ಹೊಂದಾಣಿಕೆಯಾಗುತ್ತದೆ. ಇದರಿಂದ ನೋವು ಕೂಡ ಕಡಿಮೆಯಾಗುತ್ತದೆ. ಕೀಲು ನೋವಿಗೆ ಇದು ಮಾತ್ರವಲ್ಲದೇ, ಇನ್ನಿತರೆ ಕಾರಣಗಳು ಸಹ ಇವೆ.

ಮಳೆ ವಾತಾವರಣದಿಂದ ಮನೆಯಿಂದ ಹೊರ ಹೋಗಲು ಸಾಧ್ಯವಾಗುವುದಿಲ್ಲ. ಇದರಿಂದ ಮನೆಯಲ್ಲಿಯೇ ದೀರ್ಘಕಾಲ ಇರಬೇಕಾಗುತ್ತದೆ. ಮನೆಯಲ್ಲೇ ದೀರ್ಘಕಾಲ ಕುಳಿತಿರುವ ಕಾರಣ ಸ್ನಾಯು ಮತ್ತು ಕೀಲುಗಳು ಜಡತ್ವಗೊಂಡು ನೋವು ಹೆಚ್ಚುತ್ತದೆ.

ಮೋಡ ಕವಿದ ವಾತಾವರಣದಿಂದ ನಿಮ್ಮ ಮನಸ್ಥಿತಿ ಕೂಡ ಬದಲಾಗಬಹುದು. ಇದರಿಂದ ನಿಮ್ಮ ಗಮನ ನೋವಿನಂತಹ ನಕಾರಾತ್ಮಕ ಅಂಶಗಳಿಗೆ ಹೆಚ್ಚು ಹೋಗುತ್ತದೆ. ನೋವಿನ ಬಗ್ಗೆ ಹೆಚ್ಚು ಯೋಚಿಸಿದಂತೆ ಅದು ಮತ್ತಷ್ಟು ಕೆಟ್ಟದಾಗಬಹುದು.

ಅನೇಕ ಮಂದಿಗೆ ಮಳೆ ಬಂದರೆ ನೋವು ಹೆಚ್ಚಿದಂತೆ ಎಂಬ ಅಂಶ ತಲೆಯಲ್ಲಿ ಹೊಕ್ಕಿರುತ್ತದೆ. ಅವರ ಮನಸ್ಥಿತಿ ಅನುಸಾರವಾಗಿ ಕೂಡ ಅನೇಕ ಬಾರಿ ನೋವು ಹೆಚ್ಚುತ್ತದೆ.

ನೋವು ಕಡಿಮೆ ಮಾಡುವುದು ಹೇಗೆ? ಸಂಶೋಧನೆಗಳು ಮಳೆಗಾಲದಲ್ಲಿ ಕೀಲು ನೋವು ಹೆಚ್ಚಿಸುತ್ತದೆ ಎಂಬುದನ್ನು ಸಾಬೀತು ಮಾಡಲಿ, ಬಿಡಲಿ, ನೀವು ಕೆಲವು ಮುನ್ನೆಚ್ಚರಿಕೆಗಳನ್ನು ವಹಿಸುವುದು ಮುಖ್ಯವಾಗುತ್ತದೆ. ಹವಾಮಾನ ಬದಲಾಗುತ್ತಿದ್ದಂತೆ ಈ ಬಗ್ಗೆ ಕ್ರಮವಹಿಸಿ.

ಸ್ನಾಯು ಮತ್ತು ಮೂಳೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ನಿಯಮಿತವಾಗಿ ವ್ಯಾಯಾಮದಂತಹ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು.

ನಡೆದಾಡುವುದಕ್ಕಿಂತ ಒಟ್ಟಿಗೆ ಕುಳಿತುಕೊಳ್ಳುವುದು ಉತ್ತಮ. ನೀವು ಹೊರಗೆ ಹೋಗಲು ಸಾಧ್ಯವಾಗದೇ ಇದ್ದರೆ, ಮನೆಯ ಒಳಗಡೆಯೇ ಓಡಾಡಿ. ಟ್ರೆಡ್​ ಮಿಲ್​ನಲ್ಲಿ ವಾಕಿಂಗ್​ ಮಾಡುವುದು ಉತ್ತಮವಾಗಿರಲಿದೆ.

ತೂಕ ಹೆಚ್ಚಳ ಕೂಡ ಕೀಲು, ಸಂಧಿಗಳ ಮೇಲೆ ಒತ್ತಡ ಹೆಚ್ಚಾಗಿ ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತದೆ. ಈ ಹಿನ್ನೆಲೆ ತೂಕವನ್ನು ಕಡಿಮೆ ಮಾಡಿ. ಸಾಮಾನ್ಯ ತೂಕವನ್ನು ನೀವು ಹೊಂದಿದ್ದರೆ, ಅದನ್ನು ಹೆಚ್ಚಿಸಿ.

ಶಾಖ ಕೂಡ ಅನೇಕ ಬಾರಿ ನೋವಿನ ಉಪಶಮನ ಮಾಡುತ್ತದೆ. ಈ ಹಿನ್ನೆಲೆ ನೋವು ಇರುವ ಪ್ರದೇಶದಲ್ಲಿ ಬಿಸಿ ನೀರನ್ನು ಹಾಕಿಕೊಳ್ಳುವುದು ಉತ್ತಮ ಮಾರ್ಗವಾಗಿರಲಿದೆ. ಅಥವಾ ಆ ಪ್ರದೇಶದಲ್ಲಿ ಬಿಸಿ ನೀರಿನಲ್ಲಿ ಮುಳುಗಿ ಏಳಿಸಿದ ಟವೆಲ್​ ಅನ್ನು ಅನ್ನು ಇಡುವುದು ಆರಾಮದಾಯವಾಗಬಹುದು. ಸಾಧ್ಯವಾದರೆ, ಹೀಟಿಂಗ್​ ಪಾಡ್ಸ್​ ಅನ್ನು ಬಳಸಬಹುದು. ಬಿಸಿ ನೀರಿನಲ್ಲಿ ಸ್ನಾನ ಮಾಡುವುದು ನೋವು ಕಡಿಮೆ ಮಾಡಲಿದೆ.

ಹೊಟ್ಟೆಯಲ್ಲಿ ನೀರಿನ ಪ್ರಮಾಣ ಕಡಿಮೆಯಾದರೆ, ಕೀಲುಗಳು ಸರಿಯಾಗಿ ಚಲಿಸಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆ ಮಳೆಗಾಲದಲ್ಲೂ ಸಾಕಷ್ಟು ಪ್ರಮಾಣದ ನೀರು ಸೇವಿಸುವುದು ಉತ್ತಮ.


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »