TOP STORIES:

ಸೆ.24 ರಂದು ಮಂಗಳೂರಿನ’ಕುಂಜತ್ತಬೈಲಿನಲ್ಲಿ ಬಿಲ್ಲವ ಹಾಸ್ಟೆಲ್’ ಉದ್ಘಾಟನೆ


ಮಂಗಳೂರು: “ಬ್ರಹ್ಮಶ್ರೀ ನಾರಾಯಣಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ,

ಸಂಘಟನೆಯಿಂದ ಬಲಯುತರಾಗಿರಿ ಎಂಬ ಧೈಯೋದ್ದೇಶದೊಂದಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್‌ ನಿಂದ

ಕುಂಜತ್ತಬೈಲಿನಲ್ಲಿ ದಿ.ದಾಮೋದರ ಆರ್. ಸುವರ್ಣ ಸ್ಮಾರಕಬಿಲ್ಲವ ಹಾಸ್ಟೆಲ್ ನಿರ್ಮಿಸಲಾಗಿದ್ದು ಸೆ.24 ರಂದುಲೋಕಾರ್ಪಣೆಗೊಳ್ಳಲಿದೆಎಂದು ಅಖಿಲ ಭಾರತ ಬಿಲ್ಲವರ ಯುನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನಗರದ ಪುರಭವನದಲ್ಲಿ ಲೋಕಾರ್ಪಣಾ ಸಮಾರಂಭ

ನಡೆಯಲಿದ್ದು ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ದೀಪ ಪ್ರಜ್ವಲನೆಯನ್ನು ಮಾಜಿಕೇಂದ್ರ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿಯವರು ನಡೆಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರಡಿ. ಸುವರ್ಣ ವಹಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಬಿಡುಗಡೆಗೊಳಿಸಲಿದ್ದಾರೆ.

ಮುಖ್ಯ ಅಥಿತಿಗಳಾಗಿ ಮಾಜಿ ಸಂಸದ ಡಿ.ವಿ. ಸದಾನಂದ ಗೌಡ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಆರೋಗ್ಯ ಮತ್ತುಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವಿ. ಸುನೀಲ್ ಕುಮಾರ್, ಉಮಾನಾಥ್ ಕೋಟ್ಯಾನ್, ವೇದವ್ಯಾಸ್‌ ಕಾಮತ್‌, ಡಾ.ವೈ. ಭರತ್ ಶೆಟ್ಟಿ, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಮೇಯರ್ ಜಯಾನಂದ ಅಂಚನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಮುಖ್ಯ ಸಚೇತಕ ಕೆ. ವಸಂತ ಬಂಗೇರ, ಮಾಜಿ ಶಾಸಕ ಗೋಪಾಲ ಪೂಜಾರಿ ಉಪಸ್ಥಿತರಿರಲಿದ್ದಾರೆ. ಗೌರವ ಉಪಸ್ಥಿತಿಯಲ್ಲಿ ಉದ್ಯಮಿ ಜಯರಾಮ ಬನಾನ್, ಬನಾನ್, ಸಣ್ಣ ಕೈಗಾರಿಕಾ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಉದಯಚಂದ್ರ ಡಿ. ಸುವರ್ಣ, ಆರ್ಯ ಈಡಿಗ ಸಂಘದ ಅಧ್ಯಕ್ಷ ತಿಮ್ಮೇಗೌಡ ,ಉದ್ಯಮಿ ಜೆ.ಪಿ. ಸುಧಾಕರ್‌, ಬಿಲ್ಲವ ಚೇಂಬರ್ಆಫ್ ಕಾಮರ್ಸ್ ಅಧ್ಯಕ್ಷ ಎನ್.ಟಿ. ಪೂಜಾರಿ, ಮುಂಬಯಿ ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ಹರೀಶ್ ಜೆ. ಅಮೀನ್, ಬೆಂಗಳೂರು ಬಿಲ್ಲವಅಸೋಸಿಯೇಶನ್ ಅಧ್ಯಕ್ಷ ವೇದಕುಮಾರ್, ಅಖಿಲ ಭಾರತ ಬಿಲ್ಲವರ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ದುಬಾಯಿ ಬಿಲ್ಲವ ಬಳಗಮಹಿಳಾ ವಿಭಾಗದ ಅಧ್ಯಕ್ಷೆ ಗೀತಾ ಸುವರ್ಣ, ಕಾರ್ಪೊರೇಟರ್  ಶರತ್ ಕುಮಾರ್ ಕುಮಾರ್ ಉಪಸ್ಥಿತರಿರಲಿದ್ದಾರೆ. ಇದೇ ಸಂದರ್ಭದಲ್ಲಿ ಉದ್ಯಮಿ  ಸುಶೀರ್ ಕುಮಾರ್, ಇಂಜಿನಿಯರ್ ಬಾಬ ಅಲಂಕಾರ್ಅವರನ್ನು ಸನ್ಮಾನಿಸಲಾಗುವುದುಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಬಿಲ್ಲವರ ಯುನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ, ಅಖಿಲ ಭಾರತ ಬಿಲ್ಲವರಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ಸುಖಲಾಕ್ಷಿ ಸುವರ್ಣ, ಕೋಶಾಧಿಕಾರಿ ಕಾಶೀನಾಥ್, ಜೊತೆ ಕಾರ್ಯದರ್ಶಿಯೋಗೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. 5.25 ಕೋಟಿ ರೂ. ವೆಚ್ಚದ ಕಟ್ಟಡ!

ಮಂಗಳೂರು ನಗರದಿ೦ದ 6 ಕಿ.ಮೀ. ದೂರದ ಕುಂಜತ್ತಬೈಲ್‌ನ ಪ್ರಶಾಂತ ವಾತಾವರಣದಲ್ಲಿ ಸುಮಾರು 1 ಎಕರೆ ವ್ಯಾಪ್ತಿಯಲ್ಲಿ 5.25 ಕೋಟಿ ರೂ. ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಿಸಲಾಗಿದ್ದು ಬಿಲ್ಲವ ಹಾಗೂ ಹಿಂದುಳಿದ ಸಮುದಾಯದಲ್ಲಿ ಉನ್ನತ ವೃತ್ತಿ ಶಿಕ್ಷಣ ಬಯಸುವ ವಿದ್ಯಾರ್ಥಿಗಳ ಅನುಕೂಲತೆಗಾಗಿ ಹಾಸ್ಟೆಲ್ ನಿರ್ಮಿಸಲಾಗಿದೆ. ಸುಮಾರು 5 ಮಹಡಿಯ ಕಟ್ಟಡ ಇದಾಗಿದ್ದು ಒಟ್ಟು 19,500 ಚದರ ಅಡಿ ವಿಸ್ತೀರ್ಣ ಹೊಂದಿದೆ. ನೆಲ ಅಂತಸ್ತಿನಲ್ಲಿ ಆಡಳಿತ ಕಚೇರಿ, ಗ್ರಂಥಾಲಯ ಹಾಗೂ ವಸತಿ

ಕೊಠಡಿಗಳು, 1ನೇ ಹಾಗೂ 3ನೇ ಮಹಡಿಯಲ್ಲಿ ವಸತಿ ಕೊಠಡಿ ಮತ್ತು 2ನೇ ಮಹಡಿಯಲ್ಲಿ ಸಭಾಂಗಣ ಒಳಗೊಂಡಿದೆ. ತಳಮಹಡಿಯಲ್ಲಿ ಅಡುಗೆ ಕೋಣೆ, ಉಗ್ರಾಣ ಕೋಣೆಗಳಿವೆ. ಸುಮಾರು 100 ಮಂದಿ ವಿದ್ಯಾರ್ಥಿಗಳಿಗೆ ವ್ಯವಸ್ಥಿತವಾದ ವಸತಿ ಸೌಲಭ್ಯವಿದ್ದು ವೃತ್ತಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆಯಾಗಿದೆ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »