TOP STORIES:

FOLLOW US

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣ ಮತ್ತು ಮಂಗಳೂರು ದಸರಾ ರುವಾರಿ ಶ್ರೀ ಬಿ ಜನಾರ್ದನ ಪೂಜಾರಿ


ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣ ಮತ್ತು ಮಂಗಳೂರು ದಸರಾ ರುವಾರಿ ಶ್ರೀ ಬಿ ಜನಾರ್ದನ ಪೂಜಾರಿ

ತೊಂಭತ್ತರ ದಶಕದಿಂದ ಸನ್ಮಾನ್ಯ ಜನಾರ್ದನ ಪೂಜಾರಿಯವರು ತನ್ನ ಅಪೂರ್ವ ಇಚ್ಛಾಶಕ್ತಿಯಿಂದ ಚಿಕ್ಕ ದೇವಸ್ಥಾನವಾಗಿದ್ದ ಶೀಗೋಕರ್ಣನಾಥ ಕ್ಷೇತ್ರವನ್ನು ಅಭೂತಪೂರ್ವವಾಗಿ ನವೀಕರಿಸಿ, ಇಡೀ ವಿಶ್ವದ ಗಮನವನ್ನು ಶ್ರೀಕ್ಷೇತ್ರದತ್ತ ಸೆಳೆಯುವಂತೆ ಅಭಿವೃದ್ಧಿ ಪಡಿಸಿದರು.ಬಿಲ್ಲವ ಸಮಾಜದ ಪ್ರಶ್ನಾತೀತ ನಾಯಕರೂ ರಾಷ್ಟ್ರ ಮಟ್ಟದ ರಾಜಕೀಯ ಮತ್ಸದ್ಧಿಯೂ ಆಗಿರುವ  ಶ್ರೀ ಬಿ ಜನಾರ್ದನ ಪೂಜಾರಿ ಯವರಿಗೆ ಬಹುಶಃ  ಶ್ರೀ ನಾರಾಯಣ ಗುರುಗಳೇ ನೀಡಿದ ಪ್ರೇರಣೆಯೋ ಶ್ರೀ ಗೋಕರ್ಣನಾಥನ ಇಚ್ಛೆಯೋ?  ಅಥವಾ ಹಿಂದುಳಿದ ವರ್ಗದ ಸಮಸ್ತ ಜನತೆಯ ಆಶೋತ್ತರವೋ ಎಂಬಂತೆ ಇಚ್ಛಾಶಕ್ತಿಯೊಂದು ಹೃದಯಾಂತರಾಳದಿಂದ ಮೂಡಿ ಸಾಕಾರ ಗೊಂಡಿತು. ಈ ಕ್ಷೇತ್ರವನ್ನು ಆಧ್ಯಾತ್ಮಿಕ ಪ್ರವಾಸಿ ತಾಣವಾಗಿ ಸಾಮಾಜಿಕ ಸುಧಾರಣಾ ಕೇಂದ್ರವಾಗಿ ಜಾತ್ಯಾತೀತ ಕ್ಷೇತ್ರವಾಗಿ ನವನಿರ್ಮಾಣ ಮಾಡಲು ಪೂಜಾರಿಯವರು ಸಂಕಲ್ಪ ಮಾಡಿದರು.

ಇಂದು ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಸನ್ನಿಧಾನವು ದೇವಲೋಕವೇ ಧರೆಗಿಳಿದಂತೆ ಸೌಂದರ್ಯವನ್ನು ತುಂಬಿಕೊಂಡು, ಭಕ್ತರ ಹೃದಯದಲ್ಲಿ ಭಕ್ತಿಯ ಆಲೆಯನ್ನು ಸೃಷ್ಟಿಸಿ, ಭಕ್ತರು, ಜಿಜ್ಞಾಸುಗಳು ಪ್ರವಾಸಿಗರು ಸೇರಿದಂತೆ ಕೋಟ್ಯಾಂತರ ಮಂದಿಯನ್ನು ಆಕರ್ಷಿಸುತ್ತಿದೆಯೆಂದರೆ, ಅದರ ಹಿಂದಿರುವ ಅಗಾಧ ಸಂಕಲ್ಪ ಶಕ್ತಿ, ಚೇತನ ಶಕ್ತಿ ಸನ್ಮಾನ್ಯ ಜನಾರ್ದನ ಪೂಜಾರಿಯೆಂದರೆ ಅತಿಶಯೋಕ್ತಿಯಲ್ಲ. ಸುಮಾರು 34 ವರ್ಷಗಳ ಹಿಂದೆ ಶ್ರೀಕ್ಷೇತ್ರದ ನವೀಕರಣಕ್ಕೆ ಬೇಕಾದ ಸಂಪನ್ಮೂಲವನ್ನು ಕ್ರೋಢೀಕರಿಸಿ ಕೇವಲ ಅಲ್ಪ ಅವಧಿಯಲ್ಲೇ ನವೀಕರಣದ ಕೆಲಸ ಕಾರ್ಯ ಮುಗಿಯುವಂತೆ ನೋಡಿಕೊಂಡು, 1991 ರಲ್ಲಿ ನವೀಕರಣಗೊಂಡು ಪವಾಡಸದೃಶವಾಗಿ ಶ್ರೀಕ್ಷೇತ್ರ ಕಂಗೊಳಿಸುವಂತೆ ಮಾಡಿದ ಸನ್ಮಾನ್ಯ ಜನಾರ್ದನ ಪೂಜಾರಿಯವರ ಅವಿರತ ಪರಿಶ್ರಮ, ಸಮಗ್ರ ಚಿಂತನೆ, ಅದಕ್ಕೆ ಬೇಕಾದ ಯೋಜನೆಯನ್ನು ರೂಪಿಸಿದ ಪರಿ ಭಕ್ತರನ್ನು ವಿಸ್ಮಯಗೊಳಿಸಿದೆ. ಕ್ಷೇತ್ರ ದಿನಗಳೆದಂತೆ ಭಕ್ತ ಸಮೂಹವನ್ನು ದೇಶ ವಿದೇಶಗಳಿಂದ ತನ್ನೆಡೆಗೆ ಆಕರ್ಷಿಸತೊಡಗಿದ್ದು ಇಂದು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾಗಿದೆ.   ನವರಾತ್ರಿ ಸಂದರ್ಭದ ದಸರಾ ಮಹೋತ್ಸವವು ಇಂದು ಮಂಗಳೂರು ದಸರಾವೆಂದು ಜಗದ್ವಿಖ್ಯಾತವಾಗಿದೆ.

✍️ರಾಜೇಂದ್ರ ಚಿಲಿಂಬಿ


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »