TOP STORIES:

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣ ಮತ್ತು ಮಂಗಳೂರು ದಸರಾ ರುವಾರಿ ಶ್ರೀ ಬಿ ಜನಾರ್ದನ ಪೂಜಾರಿ


ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣ ಮತ್ತು ಮಂಗಳೂರು ದಸರಾ ರುವಾರಿ ಶ್ರೀ ಬಿ ಜನಾರ್ದನ ಪೂಜಾರಿ

ತೊಂಭತ್ತರ ದಶಕದಿಂದ ಸನ್ಮಾನ್ಯ ಜನಾರ್ದನ ಪೂಜಾರಿಯವರು ತನ್ನ ಅಪೂರ್ವ ಇಚ್ಛಾಶಕ್ತಿಯಿಂದ ಚಿಕ್ಕ ದೇವಸ್ಥಾನವಾಗಿದ್ದ ಶೀಗೋಕರ್ಣನಾಥ ಕ್ಷೇತ್ರವನ್ನು ಅಭೂತಪೂರ್ವವಾಗಿ ನವೀಕರಿಸಿ, ಇಡೀ ವಿಶ್ವದ ಗಮನವನ್ನು ಶ್ರೀಕ್ಷೇತ್ರದತ್ತ ಸೆಳೆಯುವಂತೆ ಅಭಿವೃದ್ಧಿ ಪಡಿಸಿದರು.ಬಿಲ್ಲವ ಸಮಾಜದ ಪ್ರಶ್ನಾತೀತ ನಾಯಕರೂ ರಾಷ್ಟ್ರ ಮಟ್ಟದ ರಾಜಕೀಯ ಮತ್ಸದ್ಧಿಯೂ ಆಗಿರುವ  ಶ್ರೀ ಬಿ ಜನಾರ್ದನ ಪೂಜಾರಿ ಯವರಿಗೆ ಬಹುಶಃ  ಶ್ರೀ ನಾರಾಯಣ ಗುರುಗಳೇ ನೀಡಿದ ಪ್ರೇರಣೆಯೋ ಶ್ರೀ ಗೋಕರ್ಣನಾಥನ ಇಚ್ಛೆಯೋ?  ಅಥವಾ ಹಿಂದುಳಿದ ವರ್ಗದ ಸಮಸ್ತ ಜನತೆಯ ಆಶೋತ್ತರವೋ ಎಂಬಂತೆ ಇಚ್ಛಾಶಕ್ತಿಯೊಂದು ಹೃದಯಾಂತರಾಳದಿಂದ ಮೂಡಿ ಸಾಕಾರ ಗೊಂಡಿತು. ಈ ಕ್ಷೇತ್ರವನ್ನು ಆಧ್ಯಾತ್ಮಿಕ ಪ್ರವಾಸಿ ತಾಣವಾಗಿ ಸಾಮಾಜಿಕ ಸುಧಾರಣಾ ಕೇಂದ್ರವಾಗಿ ಜಾತ್ಯಾತೀತ ಕ್ಷೇತ್ರವಾಗಿ ನವನಿರ್ಮಾಣ ಮಾಡಲು ಪೂಜಾರಿಯವರು ಸಂಕಲ್ಪ ಮಾಡಿದರು.

ಇಂದು ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಸನ್ನಿಧಾನವು ದೇವಲೋಕವೇ ಧರೆಗಿಳಿದಂತೆ ಸೌಂದರ್ಯವನ್ನು ತುಂಬಿಕೊಂಡು, ಭಕ್ತರ ಹೃದಯದಲ್ಲಿ ಭಕ್ತಿಯ ಆಲೆಯನ್ನು ಸೃಷ್ಟಿಸಿ, ಭಕ್ತರು, ಜಿಜ್ಞಾಸುಗಳು ಪ್ರವಾಸಿಗರು ಸೇರಿದಂತೆ ಕೋಟ್ಯಾಂತರ ಮಂದಿಯನ್ನು ಆಕರ್ಷಿಸುತ್ತಿದೆಯೆಂದರೆ, ಅದರ ಹಿಂದಿರುವ ಅಗಾಧ ಸಂಕಲ್ಪ ಶಕ್ತಿ, ಚೇತನ ಶಕ್ತಿ ಸನ್ಮಾನ್ಯ ಜನಾರ್ದನ ಪೂಜಾರಿಯೆಂದರೆ ಅತಿಶಯೋಕ್ತಿಯಲ್ಲ. ಸುಮಾರು 34 ವರ್ಷಗಳ ಹಿಂದೆ ಶ್ರೀಕ್ಷೇತ್ರದ ನವೀಕರಣಕ್ಕೆ ಬೇಕಾದ ಸಂಪನ್ಮೂಲವನ್ನು ಕ್ರೋಢೀಕರಿಸಿ ಕೇವಲ ಅಲ್ಪ ಅವಧಿಯಲ್ಲೇ ನವೀಕರಣದ ಕೆಲಸ ಕಾರ್ಯ ಮುಗಿಯುವಂತೆ ನೋಡಿಕೊಂಡು, 1991 ರಲ್ಲಿ ನವೀಕರಣಗೊಂಡು ಪವಾಡಸದೃಶವಾಗಿ ಶ್ರೀಕ್ಷೇತ್ರ ಕಂಗೊಳಿಸುವಂತೆ ಮಾಡಿದ ಸನ್ಮಾನ್ಯ ಜನಾರ್ದನ ಪೂಜಾರಿಯವರ ಅವಿರತ ಪರಿಶ್ರಮ, ಸಮಗ್ರ ಚಿಂತನೆ, ಅದಕ್ಕೆ ಬೇಕಾದ ಯೋಜನೆಯನ್ನು ರೂಪಿಸಿದ ಪರಿ ಭಕ್ತರನ್ನು ವಿಸ್ಮಯಗೊಳಿಸಿದೆ. ಕ್ಷೇತ್ರ ದಿನಗಳೆದಂತೆ ಭಕ್ತ ಸಮೂಹವನ್ನು ದೇಶ ವಿದೇಶಗಳಿಂದ ತನ್ನೆಡೆಗೆ ಆಕರ್ಷಿಸತೊಡಗಿದ್ದು ಇಂದು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾಗಿದೆ.   ನವರಾತ್ರಿ ಸಂದರ್ಭದ ದಸರಾ ಮಹೋತ್ಸವವು ಇಂದು ಮಂಗಳೂರು ದಸರಾವೆಂದು ಜಗದ್ವಿಖ್ಯಾತವಾಗಿದೆ.

✍️ರಾಜೇಂದ್ರ ಚಿಲಿಂಬಿ


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »