TOP STORIES:

FOLLOW US

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣ ಮತ್ತು ಮಂಗಳೂರು ದಸರಾ ರುವಾರಿ ಶ್ರೀ ಬಿ ಜನಾರ್ದನ ಪೂಜಾರಿ


ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣ ಮತ್ತು ಮಂಗಳೂರು ದಸರಾ ರುವಾರಿ ಶ್ರೀ ಬಿ ಜನಾರ್ದನ ಪೂಜಾರಿ

ತೊಂಭತ್ತರ ದಶಕದಿಂದ ಸನ್ಮಾನ್ಯ ಜನಾರ್ದನ ಪೂಜಾರಿಯವರು ತನ್ನ ಅಪೂರ್ವ ಇಚ್ಛಾಶಕ್ತಿಯಿಂದ ಚಿಕ್ಕ ದೇವಸ್ಥಾನವಾಗಿದ್ದ ಶೀಗೋಕರ್ಣನಾಥ ಕ್ಷೇತ್ರವನ್ನು ಅಭೂತಪೂರ್ವವಾಗಿ ನವೀಕರಿಸಿ, ಇಡೀ ವಿಶ್ವದ ಗಮನವನ್ನು ಶ್ರೀಕ್ಷೇತ್ರದತ್ತ ಸೆಳೆಯುವಂತೆ ಅಭಿವೃದ್ಧಿ ಪಡಿಸಿದರು.ಬಿಲ್ಲವ ಸಮಾಜದ ಪ್ರಶ್ನಾತೀತ ನಾಯಕರೂ ರಾಷ್ಟ್ರ ಮಟ್ಟದ ರಾಜಕೀಯ ಮತ್ಸದ್ಧಿಯೂ ಆಗಿರುವ  ಶ್ರೀ ಬಿ ಜನಾರ್ದನ ಪೂಜಾರಿ ಯವರಿಗೆ ಬಹುಶಃ  ಶ್ರೀ ನಾರಾಯಣ ಗುರುಗಳೇ ನೀಡಿದ ಪ್ರೇರಣೆಯೋ ಶ್ರೀ ಗೋಕರ್ಣನಾಥನ ಇಚ್ಛೆಯೋ?  ಅಥವಾ ಹಿಂದುಳಿದ ವರ್ಗದ ಸಮಸ್ತ ಜನತೆಯ ಆಶೋತ್ತರವೋ ಎಂಬಂತೆ ಇಚ್ಛಾಶಕ್ತಿಯೊಂದು ಹೃದಯಾಂತರಾಳದಿಂದ ಮೂಡಿ ಸಾಕಾರ ಗೊಂಡಿತು. ಈ ಕ್ಷೇತ್ರವನ್ನು ಆಧ್ಯಾತ್ಮಿಕ ಪ್ರವಾಸಿ ತಾಣವಾಗಿ ಸಾಮಾಜಿಕ ಸುಧಾರಣಾ ಕೇಂದ್ರವಾಗಿ ಜಾತ್ಯಾತೀತ ಕ್ಷೇತ್ರವಾಗಿ ನವನಿರ್ಮಾಣ ಮಾಡಲು ಪೂಜಾರಿಯವರು ಸಂಕಲ್ಪ ಮಾಡಿದರು.

ಇಂದು ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಸನ್ನಿಧಾನವು ದೇವಲೋಕವೇ ಧರೆಗಿಳಿದಂತೆ ಸೌಂದರ್ಯವನ್ನು ತುಂಬಿಕೊಂಡು, ಭಕ್ತರ ಹೃದಯದಲ್ಲಿ ಭಕ್ತಿಯ ಆಲೆಯನ್ನು ಸೃಷ್ಟಿಸಿ, ಭಕ್ತರು, ಜಿಜ್ಞಾಸುಗಳು ಪ್ರವಾಸಿಗರು ಸೇರಿದಂತೆ ಕೋಟ್ಯಾಂತರ ಮಂದಿಯನ್ನು ಆಕರ್ಷಿಸುತ್ತಿದೆಯೆಂದರೆ, ಅದರ ಹಿಂದಿರುವ ಅಗಾಧ ಸಂಕಲ್ಪ ಶಕ್ತಿ, ಚೇತನ ಶಕ್ತಿ ಸನ್ಮಾನ್ಯ ಜನಾರ್ದನ ಪೂಜಾರಿಯೆಂದರೆ ಅತಿಶಯೋಕ್ತಿಯಲ್ಲ. ಸುಮಾರು 34 ವರ್ಷಗಳ ಹಿಂದೆ ಶ್ರೀಕ್ಷೇತ್ರದ ನವೀಕರಣಕ್ಕೆ ಬೇಕಾದ ಸಂಪನ್ಮೂಲವನ್ನು ಕ್ರೋಢೀಕರಿಸಿ ಕೇವಲ ಅಲ್ಪ ಅವಧಿಯಲ್ಲೇ ನವೀಕರಣದ ಕೆಲಸ ಕಾರ್ಯ ಮುಗಿಯುವಂತೆ ನೋಡಿಕೊಂಡು, 1991 ರಲ್ಲಿ ನವೀಕರಣಗೊಂಡು ಪವಾಡಸದೃಶವಾಗಿ ಶ್ರೀಕ್ಷೇತ್ರ ಕಂಗೊಳಿಸುವಂತೆ ಮಾಡಿದ ಸನ್ಮಾನ್ಯ ಜನಾರ್ದನ ಪೂಜಾರಿಯವರ ಅವಿರತ ಪರಿಶ್ರಮ, ಸಮಗ್ರ ಚಿಂತನೆ, ಅದಕ್ಕೆ ಬೇಕಾದ ಯೋಜನೆಯನ್ನು ರೂಪಿಸಿದ ಪರಿ ಭಕ್ತರನ್ನು ವಿಸ್ಮಯಗೊಳಿಸಿದೆ. ಕ್ಷೇತ್ರ ದಿನಗಳೆದಂತೆ ಭಕ್ತ ಸಮೂಹವನ್ನು ದೇಶ ವಿದೇಶಗಳಿಂದ ತನ್ನೆಡೆಗೆ ಆಕರ್ಷಿಸತೊಡಗಿದ್ದು ಇಂದು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾಗಿದೆ.   ನವರಾತ್ರಿ ಸಂದರ್ಭದ ದಸರಾ ಮಹೋತ್ಸವವು ಇಂದು ಮಂಗಳೂರು ದಸರಾವೆಂದು ಜಗದ್ವಿಖ್ಯಾತವಾಗಿದೆ.

✍️ರಾಜೇಂದ್ರ ಚಿಲಿಂಬಿ


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »