TOP STORIES:

ಯುವವಾಹಿನಿ ರಿ ಕೊಲ್ಯ ಘಟಕದ ವತಿಯಿಂದ ಮನೆಮನ ಬೆಳಗಿಸಿದ ಗುರುಭಜನೆ , ಗುರುಸ್ಮರಣೆ


ಯುವವಾಹಿನಿ ರಿ ಕೊಲ್ಯ ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಪರಿಪಾಲನೆ ಮಾಡುವ ಕಾರ್ಯಗಳಿಗೆ ಪೂರಕವಾಗಿ ನಮ್ಮ ಘಟಕದ ನಾರಾಯಣ ಗುರು ತತ್ವಾದರ್ಶಗಳ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕಿ ಶ್ರೀಮತಿ ರಶ್ಮಿ ಸನಿಲ್ ರವರ ತರವಾಡು ಮನೆ ಕಣೀರುತೋಟದಲ್ಲಿ ದಿನಾಂಕ 05-10-2023 ನೇ ಗುರುವಾರದಂದು ಸಂಜೆ ಗುರುಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮವು ಬಹಳ ಅರ್ಥಪೂರ್ಣವಾಗಿ ಜರುಗಿತು.

ಭಗವಂತನೊಂದಿಗೆ ನೇರವಾಗಿ ಸಂವಾದಿಸುವ ಸಾಧನವೆಂದರೆ ಅದು ಭಜನೆ. ಭಜನೆ ಇದ್ದಲ್ಲಿ ಎಂದಿಗೂ ವಿಭಜನೆ ಇರುವುದಿಲ್ಲ. ದೇವರ ನಾಮವನ್ನು, ಮಹಿಮೆಯನ್ನು ಹಾಡಿ ಭಜಿಸುವ ಮೂಲಕ ಭಗವಂತನೊಂದಿಗೆ ಲೀನವಾಗುವಂತಹ ಆ ಒಂದು ಅನುಭವವನ್ನು ವರ್ಣಿಸಲು ಅಸಾಧ್ಯ. ಹಿರಿಯರ ಕಾಲದಿಂದಲೂ ನಡೆದುಕೊಂಡು ಬಂದಿರುವ ಈ ಸಂಪ್ರದಾಯವನ್ನು ಮರೀಚಿಕೆ ಆಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿರುತ್ತದೆ ಎಂದು ಮನವಿ ಮಾಡಿ, ಈ ಸಂದರ್ಭದಲ್ಲಿ ಬಿಲ್ಲವ ಸೇವಾ ಸಮಾಜ ರಿ ಕೊಲ್ಯ ಇದರ ಹಿರಿಯ ಭಜನಾ ಸಂಚಾಲಕರು, ಯುವವಾಹಿನಿ ರಿ ಕೊಲ್ಯ ಘಟಕದ ಆರೋಗ್ಯ ನಿರ್ದೇಶಕರೂ ಆಗಿರುವ ಶಶಿಕಾಂತ್ ಪರ್ಯತ್ತೂರು ಭಜನೆಯ ಮಹತ್ವದ ಕುರಿತು ವ್ಯಾಖ್ಯಾನ ನೀಡಿದರು.

ಯುವವಾಹಿನಿ ರಿ ಕೊಲ್ಯ ಘಟಕದ ನಾರಾಯಣ ಗುರು ತತ್ವಾದರ್ಶಗಳ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕಿ ಶ್ರೀಮತಿ ರಶ್ಮಿ ಸನಿಲ್ ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜೀವನ ಚರಿತ್ರೆಯನ್ನು ಆಧರಿಸಿದ ಚಿತ್ರಣವನ್ನು ಕಥನಕವನದ ಮೂಲಕ ಪ್ರಸ್ತುತ ಪಡಿಸಿದರು. ಬ್ರಹ್ಮಶ್ರೀ ನಾರಾಯಣಗುರುಗಳು ನಡೆದು ಬಂದ ದಾರಿ, ಅವರ ಬದುಕು, ತತ್ವಾದರ್ಶಗಳು, ಸಮಾಜದ ಅಭ್ಯುದಯಕ್ಕೆ ನೀಡಿರುವ ಸಂದೇಶಗಳ ಕುರಿತು ಅರ್ಥಪೂರ್ಣವಾಗಿ ಮಂಡಿಸಿ ಕಿರು ಉಪನ್ಯಾಸ ನೀಡಿದರು.

ಯುವವಾಹಿನಿ ರಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ರಾಜೇಶ್ ಬಿ. ಈ ಸಂದರ್ಭದಲ್ಲಿ ಹಾಜರಿದ್ದು ಸರ್ವರಿಗೂ ಮಾದರಿಯಾಗಿರುವ ಅರ್ಥಪೂರ್ಣ ಕಾರ್ಯಕ್ರಮದ ಆಯೋಜನೆಗೆ ಅಭಿನಂದನೆ ಸಲ್ಲಿಸಿದರು.‌ ಯುವವಾಹಿನಿ ರಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಅದೇ ರೀತಿ ಯುವವಾಹಿನಿ ರಿ ಕೊಲ್ಯ ಘಟಕದ ಮಾಜಿ ಅಧ್ಯಕ್ಷರೂ ಆಗಿರುವ ಶ್ರೀ ಕುಸುಮಾಕರ ಕುಂಪಲರವರು ಸರ್ವರನ್ನು ಒಟ್ಟುಗೂಡಿಸುವ ಭಜನಾ ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಮಣ್ಣಿನ ಸಂಸ್ಕಾರ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಇಂದಿನ ಕಾಲಘಟ್ಟದಲ್ಲಿ ಈ ರೀತಿಯ ಭಜನಾ ಸಂಕೀರ್ತನೆಗಳು ಬಹಳ ಅರ್ಥಪೂರ್ಣ, ಪ್ರತಿಯೊಬ್ಬರ ಮನೆಮನದಿಂದಲೇ ಈ ಕುರಿತು ಜಾಗೃತಿ ಮೂಡಬೇಕು ಎಂದು ಯುವವಾಹಿನಿ ರಿ ಕೊಲ್ಯ ಘಟಕದ ಅಧ್ಯಕ್ಷರಾದ ಶ್ರೀ ಲತೀಶ್ ಎಂ ಸಂಕೋಳಿಗೆಯವರು ಅಭಿಪ್ರಾಯ ವ್ಯಕ್ತಪಡಿಸಿದರು.

 

ಬಿಲ್ಲವ ಸೇವಾ ಸಮಾಜ ಟ್ರಸ್ಟ್ ರಿ ಇದರ ಅಧ್ಯಕ್ಷರಾದ ಶ್ರೀ ವೇಣುಗೋಪಾಲ ಕೊಲ್ಯ ಉಪಸ್ಥಿತರಿದ್ದರು. ಯುವವಾಹಿನಿ ರಿ ಕೊಲ್ಯ ಘಟಕದ ಸ್ಥಾಪಕಾಧ್ಯಕ್ಷರಾದ ಶ್ರೀ ಸುರೇಶ್ ಬಿಲ್ಲವ, ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಸುಂದರ್ ಸುವರ್ಣ, ಪ್ರಥಮ ಉಪಾಧ್ಯಕ್ಷರು ಶ್ರೀಮತಿ ಸುಧಾ ಸುರೇಶ್, ದ್ವಿತೀಯ ಉಪಾಧ್ಯಕ್ಷರು ಶ್ರೀ ನಿತಿನ್ ಕರ್ಕೇರ ಹಾಗೂ ಮಾಜಿ ಅಧ್ಯಕ್ಷರುಗಳು ಈ ಸಂದರ್ಭದಲ್ಲಿ ಹಾಜರಿದ್ದರು. ಯುವವಾಹಿನಿ ರಿ ಕೊಲ್ಯ ಘಟಕದ ಪದಾಧಿಕಾರಿಗಳು, ಸದಸ್ಯರು ಮತ್ತು ಬಂಧುಗಳು, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಮಂಡಳಿಯ ಸದಸ್ಯರು ಹಾಗೂ ಬಿಲ್ಲವ ಸೇವಾ ಸಮಾಜ ರಿ ಕೊಲ್ಯದ ಸದಸ್ಯರು, ರಶ್ಮಿ ಸನಿಲ್ ಕುಟುಂಬಸ್ಥರು ಭಜನಾ ಸಂಕೀರ್ತನೆಯಲ್ಲಿ ಭಾಗವಹಿಸಿದ್ದರು. ಭಜನೆಯ ನಂತರ ಗುರುಪೂಜೆ ಮತ್ತು ಪ್ರಸಾದ ವಿತರಣೆ ಹಾಗೂ ಸರ್ವರಿಗೂ ಅನ್ನ ಸಂತರ್ಪಣೆಯನ್ನು ನೀಡಲಾಯಿತು.

ಯುವವಾಹಿನಿ ರಿ ಕೊಲ್ಯ ಘಟಕದ ಕಾರ್ಯದರ್ಶಿ ಶ್ರೀ ಜೀವನ್ ಕೊಲ್ಯ ಕಾರ್ಯಕ್ರಮವನ್ನು ನಿರೂಪಿಸಿದರು.‌


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »