TOP STORIES:

FOLLOW US

19 ಕ್ರಿಕೆಟಿಗೆ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಉಡುಪಿ ಜಿಲ್ಲೆಯ ಕಟಪಾಡಿಯ ತೇಜಸ್ವಿನಿ


ಅಂಡರ್ – 19 ಕ್ರಿಕೆಟಿಗೆ ಕಟಪಾಡಿಯ ತೇಜಸ್ವಿನಿ

ಕಟಪಾಡಿ, ಅ, 21: ಬಿಸಿಸಿಐ ನಡೆಸುವ ಅಂಡರ್-19 ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಉಡುಪಿ ಜಿಲ್ಲೆಯ ಕಟಪಾಡಿಯ ಕೆಆರ್ ಎಸ್ ಕ್ರಿಕೆಟ್ ಅಕಾಡೆಮಿಯ ತೇಜಸ್ವಿನಿ ಉದಯ್ ಆಯ್ಕೆಯಾಗಿದ್ದಾರೆ.ಇವರು ಆರಂಭಿಕ ಆಟಗಾರ್ತಿ ಮತ್ತು ಮಧ್ಯಮ ವೇಗಿ ಆಗಿದ್ದು,ಭರವಸೆಯ ಬ್ಯಾಟಿಂಗ್ ಮೂಲಕ ರಾಜ್ಯ ತಂಡಕ್ಕೆ ಪ್ರವೇಶ ಮಾಡಿದ್ದಾರೆ.

5ನೇ ವಯಸ್ಸಿನಲ್ಲಿ ಬಿಳಿ ಜೆರ್ಸಿ ತೊಟ್ಟು ಕ್ರಿಕೆಟ್ ಆಡಬೇಕೆಂದು ಹಠಹಿಡಿದ ತೇಜಸ್ವಿನಿಗೆ ಬ್ಯಾಟ್ ಹಿಡಿಯಲು ಹೇಳಿಕೊಟ್ಟು ಶುಭ ಹಾರೈಸಿದ್ದು ಭಾರತದ ಮಾಜಿ ಆಟಗಾರ ಸೈಯದ್ ಕಿರ್ಮಾನಿ ಎಂಬುದು ವಿಶೇಷ.

ಎಂಜಿಎಂ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ,ಕಳೆದ ವರ್ಷ ರಾಜ್ಯ ಸಂಭಾವ್ಯ ತಂಡದಲ್ಲಿದ್ದರು.ಆದರೆ ಪ್ರಧಾನ ತಂಡಕ್ಕೆ ಆಯ್ಕೆಯಾಗಿರಲಿಲ್ಲ. ಈ ವರ್ಷ ಲಭಿಸಿದ ಅವಕಾಶಗಳನ್ನೆಲ್ಲ ಸದುಪಯೋಗಪಡಿಸಿಕೊಂಡರು. ತಂದೆ ಉದಯ್ ಕುಮಾರ್ ಅವರ ಶಿಸ್ತಿನ ತರಬೇತಿ ಕೂಡ ಆಕೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿತು.

ತೇಜಸ್ವಿನಿ ಇತ್ತೀಚೆಗೆ ಶೈನ್ ಅಕಾಡೆಮಿಯಲ್ಲಿ ನಡೆದ ಪಂದ್ಯದಲ್ಲಿ 90 ಎಸೆತಗಳಿಂದ ಶತಕ ಬಾರಿಸಿದ್ದರು. ಇದರಲ್ಲಿ 20 ಬೌಂಡರಿ ಸೇರಿತ್ತು. ವಿವಿಧ ಪಂದ್ಯಗಳಲ್ಲಿ 350ಕ್ಕೂ ಹೆಚ್ಚು ರನ್ ಗಳಿಸಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.

ತೇಜಸ್ವಿನಿಯ ಆಯ್ಕೆ ಕರಾವಳಿಯ ಯುವ ಮಹಿಳಾ ಕ್ರಿಕೆಟಿಗರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ಸಾಮಾನ್ಯವಾಗಿ ರಾಜ್ಯ ತಂಡಕ್ಕೆ ಬೆಂಗಳೂರು ವಲಯದ ಆಟಗಾರರು ಆಯ್ಕೆಯಾಗುವುದೇ ಹೆಚ್ಚು ಉಡುಪಿ ಜಿಲ್ಲೆಯಿಂದ ಮಹಿಳಾ ಕ್ರಿಕೆಟಿಗರೊಬ್ಬರು ರಾಜ್ಯವನ್ನು ಪ್ರತಿನಿಧಿಸುತ್ತಿರುವುದು ಹೆಮ್ಮೆಯ ಸಂಗತಿ.

ಇವರು ಕಟಪಾಡಿಯ ಶ್ರೀಶೈಲ ಹಾಗೂ ಉದಯ್ ಕುಮಾರ್ ದಂಪತಿ ಪುತ್ರಿ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »