TOP STORIES:

ಮಾನ್ಯ ಸಂಸದರು ಶಾಸಕರುಗಳಿಗೆ. ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು” ಎಂಬ ಹೆಸರಿನಿಂದ ನಾಮಕರಣ ಮಾಡುವ ಕುರಿತು ಮನವಿ :


ಮಾನ್ಯ ಸಂಸದರು ಶಾಸಕರುಗಳಿಗೆ.!

ಮಂಗಳೂರು ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ “ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು” ಎಂಬ ಹೆಸರಿನಿಂದ ನಾಮಕರಣ ಮಾಡುವ ಕುರಿತು ಮನವಿ.

✒️ ಪ್ರಶಾಂತ್ ಪೂಜಾರಿ ಮಸ್ಕತ್, ಪಜೀರ್

ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ನಿವೇದಿಸಿಕೊಳ್ಳುವುದೇನೆಂದರೆ ಸುಮಾರು ಐದು ಶತಮಾನಗಳ ಹಿಂದೆ ತುಳುನಾಡ ಮಣ್ಣಲ್ಲಿ ಅವತಾರ ತಾಳಿ ತಮ್ಮ ಜೀವಿತಾವಧಿಯ ಕಾಲದಲ್ಲಿಯೇ 66 ಗರಡಿ ಮತ್ತು 33 ತಾವು ಗಳನ್ನು ನಿರ್ಮಿಸಿ ಸತ್ಯ, ಧರ್ಮಕ್ಕಾಗಿ ಹೋರಾಡಿ ಅಮರರಾದ ಕಾಯ ಬಿಟ್ಟು ಮಹಾ ಶಕ್ತಿಗಳಾಗಿ ಬ್ರಹ್ಮೈಖ್ಯರಾದ ಕೋಟಿ ಚೆನ್ನಯರನ್ನು ಇಂದಿಗೂ ಕರ್ನಾಟಕದ ಕರಾವಳಿ ಭಾಗ, ಮಡಿಕೇರಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ನೆರೆಯ ರಾಜ್ಯವಾದ ಮಹರಾಷ್ಟ್ರದ ಮುಂಬೈ, ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಸೇರಿದಂತೆ ವಿವಿಧ ಧರ್ಮದವರು ಸುಮಾರು 260 ಕ್ಕೂ ಹೆಚ್ಚು ಗರಡಿಗಳನ್ನು ನಿರ್ಮಿಸಿ ಕೋಟಿ ಚೆನ್ನಯರನ್ನು ಆರಾಧಿಸುತ್ತಿದ್ದು, ಸದರಿ ಗರಡಿಗಳಿಗೆ ಜಾತಿ ಭೇದ ಮರೆತು ಜಾತ್ರಮಹೋತ್ಸವ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ. ನಾಡಿನಾದ್ಯಂತ ದೇಶ, ವಿದೇಶಗಳಲ್ಲಿ ಕೋಟ್ಯಾಂತರ ಭಕ್ತರಿರುತ್ತಾರೆ. ಮಂಗಳೂರು ನಗರದ ಹೃದಯ ಭಾಗದಲ್ಲಿರುವ ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರೋಡಿ ಕ್ಷೇತ್ರದ ವರ್ಷಂಪ್ರತಿ ಜಾತ್ರೆಗೆ ಜಾತಿ ಭೇದ ಮರೆತು ಲಕ್ಷಾಂತರ ಭಕ್ತರು ದೇಶ ವಿದೇಶಗಳಿಂದ ಆಗಮಿಸುವ ಭಕ್ತಜನ ಸಮೂಹವೇ ಇದಕ್ಕೆ ಸಾಕ್ಷಿಯಾಗಿರುತ್ತದೆ.

           ಪ್ರಸ್ತುತ ಕೋಟಿ ಚೆನ್ನಯರು ಹುಟ್ಟಿ ಬೆಳೆದ ಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡುಮಲೆಯ ಗೆಜ್ಜೆಗಿರಿ ನಂದನ ಬಿತ್ತ್’ಲ್ ಎಂಬಲ್ಲಿ ಮೂಲಸ್ಥಾನ ಗರಡಿ 2020 ರ ಫೆಬ್ರುವರಿ 28 ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವದೊಂದಿಗೆ ಲೋಕಾರ್ಪಣೆಗೊಂಡಿದೆ. ಈ ಕಾರ್ಯಕ್ರಮದಲ್ಲಿ 15 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದು ಇದು ತುಳುನಾಡಿನ ಇತಿಹಾಸ ಪುಟದಲ್ಲಿ ಚರಿತ್ರೆ ನಿರ್ಮಾಣ ಆಗಿತ್ತು. ಈ ಸಂದರ್ಭದಲ್ಲಿ ಅವರುಗಳ ಭಕ್ತಾದಿಗಳೆಲ್ಲರ ಅಭಿಲಾಷೆಯಂತೆ, ಸರ್ವ ಧರ್ಮೀಯರು ಆರಾಧಿಸುವ ಆರಾಧ್ಯ ಪುರುಷರು, ಅವಳಿ ವೀರರೆಂದು ವಿರಾಜಮಾನರಾಗಿರುವ ಕೋಟಿ ಚೆನ್ನಯರ ಹೆಸರು ವಿಶ್ವ ಮಟ್ಟದಲ್ಲಿ ಬೆಳಗುವಂತೆ ಮಾಡಲು ಮಂಗಳೂರು ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ *”ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು”*  ಎಂಬ ಹೆಸರಿನಲ್ಲಿ ನಾಮಕರಣಗೊಳಿಸಿ ಆದೇಶ ಹೊರಡಿಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸುವಂತೆ ವಿನಯ ಪೂರ್ವಕವಾಗಿ ವಿನಂತಿಸುತ್ತೇವೆ.

ನಾಲ್ಕು ವರ್ಷಗಳ ಹಿಂದೆ…

ಗಮನಕ್ಕೆ :-1, ಬಜಪೆ ವಿಮಾನ ನಿಲ್ದಾಣದ ಸ್ಥಳೀಯ ಮಳವೂರು ಗ್ರಾಮ ಪಂಚಾಯತ್ ನ ನಿರ್ಣಯ ಪ್ರತಿಯನ್ನು ಲಗತ್ತಿಸಲಾಗಿದೆ.

2, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ನೇತೃತ್ವದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಲು ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಂಡು ಪ್ರಸ್ತಾವಣೆಯು ರಾಜ್ಯ ಸರಕಾರಕ್ಕೆ ಸಲ್ಲಿಕೆಯಾಗಿದೆ..

ಆದುದರಿಂದ ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಿಗೆ ತಾವುಗಳು ಶ್ರೀ ಕೋಟಿ ಚೆನ್ನಯರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವಂತೆ ಇದೇ ಬರುವ ವಿಧಾನ ಮಂಡಲದ ಅಧಿವೇಶನದಲ್ಲಿ ಶಿಫಾರಸು ಮಾಡುವ ನಿರ್ಧಾರವನ್ನು ಕೈಗೊಳ್ಳುವಂತೆ ಮನವಿ..


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »