TOP STORIES:

ವಿವಾಹ ಆರತಕ್ಷತೆಯ ವೇದಿಕೆಯಲ್ಲಿ ಮಾನವೀಯ ಮೌಲ್ಯ ಮೆರೆದ ಅರುಣ್ ಉಳ್ಳಾಲ್


ಅರುಣ್ ಉಳ್ಳಾಲ್ ಫೇಸ್ ಬುಕ್ ವಾಲ್ನ್ ನಲ್ಲಿ

ಬೆಂಜನಪದವಿನ ಯಮುನಕ್ಕನಿಗೆ ವಿವಾಹ ಕಾಣಿಕೆ

ನಮ್ಮ ಗೃಹಪ್ರವೇಶ ಡಿಜೆಮುಕ್ತವಾಗಿ ನಡೆದಾಗ ಅದನ್ನು ಮೆಚ್ಚಿಕೊಂಡರ ಮಧ್ಯೆ ಕೆಲವು ಅಮಲುಪ್ರಿಯರಲ್ಲಿ ‘ಆಹಾ ಒಳ್ಳೆಯ ತಂತ್ರ..ಸಂಸ್ಕೃತಿ ಕುಟುಂಬ ಈ ಮೂಲಕ ಸಾಕಷ್ಟು ಹಣ ಉಳಿಸಿತು’ ಎಂಬ ಅಗ್ಗದ ಮಾತುಗಳು ಕೇಳಿಬಂದಿತ್ತಂತೆ.‌ ಹೌದು, ಹಣ ಉಳಿಸಿದ್ದು ಸತ್ಯ. ಯಾರ್ಯಾಯ ಮನೆಮಕ್ಕಳಿಗೆ ಕುಡಿಸಿ ನಮ್ಮ ಹಣ ಸಾರ್ಥಕತೆ ಪಡೆಯಬೇಕೆ?

ದುಂದುವೆಚ್ಚ ಅಂದು ಮಾತ್ರವಲ್ಲ ಇಂದೂ ಇಲ್ಲವೇ ಇಲ್ಲ. ಆದರೆ ಇದು ಹಣ ಉಳಿಸುವ ಉದ್ದೇಶವಲ್ಲ.‌ ಡಿಜೆ ಅಮಲಿನ ದುಷ್ಪರಿಣಾಮ ತಪ್ಪಿಸುವ ಆರೋಗ್ಯಕರ ಆಲೋಚನೆ. ನಮ್ಮ ಮದುವೆಯಲ್ಲೂ ಮದ್ಯವೂ ಇಲ್ಲ, ಸಿಗರೇಟಿನ ಹೊಗೆಯಿಲ್ಲ, ಡಿಜೆಯ ಅಬ್ಬರವಿಲ್ಲ. ಹೋ ಈ ಬಾರಿಯೂ ಸಾಕಷ್ಟು ಹಣ ಉಳಿಸಿದ ಜಿಪುಣರು ಎನ್ನುವವರಿಗೆ ಒಂದು ಉತ್ತರ.‌ ಅಲ್ಲದೆ ನಮ್ಮ ಕುಟುಂಬದ ಬಹುದಿನಗಳ ಆಕಾಂಕ್ಷೆ.

ವಿವಾಹ ಆರತಕ್ಷತೆಯ ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಂಜನಪದವಿನಲ್ಲಿ ಗಂಡನನ್ನು ಕಳೆದುಕೊಂಡು ಮಕ್ಕಳ ಭಾಗ್ಯವಿಲ್ಲದೆ, ಕುಟುಂಬದ ಯಾವೊಂದು ಸಹಕಾರವಿಲ್ಲದೆ ಮೇಲಾಗಿ ಕಾಯಿಲೆಯ ನೋವಿನಲ್ಲಿ ಆರ್ಥಿಕ ಸಂಕಷ್ಟದಲ್ಲಿ ದಿನೇ ದಿನೇ ಬಳಲುತ್ತಿರುವ ಯಮುನಕ್ಕನಿಗೆ ಡಿಜೆವಿರೋಧದ ‘ಜಿಪುಣತನ’ದಲ್ಲಿ ಉಳಿಸಿಕೊಂಡ ಮೊತ್ತವನ್ನು ನೀಡಿ ಆಶೀರ್ವಾದ ಪಡೆದುಕೊಂಡೆವು. ಮನೆಯಿಲ್ಲದೆ ಬೀದಿಪಾಲಾಗಿದ್ದ ಯಮುನಕ್ಕನಿಗೆ ಅಂದದ ಮನೆ ಕಟ್ಟಿಸಿಕೊಟ್ಟ ಪುಣ್ಯಾತ್ಮ Padmaraj Ramaiah  ಅಣ್ಣ ಮತ್ತು ಅವರ ಗುರುಬೆಳದಿಂಗಳು ಟ್ರಸ್ಟ್‌ನ ಔದಾರ್ಯವನ್ನು ಕೊಂಡಾಡಿ ದಣಿಯದು. ಈ ಪ್ರಯತ್ನಕ್ಕೆ ಕೈಜೋಡಿಸಿದ ಪಡೀಲಿನ ಮಡಿಲು ಸೇವಾ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಪ್ರೀತಿಯ ಅಣ್ಣ ಶ್ರೀ ಗಜೇಂದ್ರ ಪೂಜಾರಿ ಮತ್ತು ಸರ್ವಸದಸ್ಯರಿಗೆ ಹೃತ್ಪೂರ್ವಕ ಧನ್ಯವಾದಗಳು.

ಈ ಸಂದರ್ಭದಲ್ಲಿ ಯಮುನಕ್ಕನ ಮುಖದಲ್ಲಿ ಕಂಡ ನಗು, ತುಂಬಿ ಬಂದ ಕಣ್ಣುಗಳು ನಮ್ಮ ದಾಂಪತ್ಯದ ಬಹುದೊಡ್ಡ ಸೌಭಾಗ್ಯ.‌ ಅದು ಅಕ್ಷಯ ಭಗವದನುಗ್ರಹ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »