TOP STORIES:

ಬೆಮ್ಮೆರ್ – ಬ್ರಹ್ಮ


Author Venkatesh Karkera

Team Prajnaanambrahmah

ತುಳುನಾಡ ದೈವಗಳಲ್ಲಿ ಅತಿಪ್ರಮುಖ ಶಕ್ತಿ ಎಂದರೆ ಬೆಮ್ಮೆರ್ ಯಾ ಬೆರ್ಮೆರ್. ಆಲಡೆಗಳಲ್ಲಿ, ನಾಗಮೂಲಸ್ಥಾನಗಳಲ್ಲಿ, ಗರಡಿಗಳಲ್ಲಿ, ದೈವಸ್ಥಾನಗಳಲ್ಲಿ ಹೀಗೆ ಹೆಚ್ಚುಕಡಿಮೆ ತುಳುನಾಡ ಉದ್ದಗಲಕ್ಕೂ ಬೇರೆ ಬೇರೆ ಹೆಸರಿನಿಂದ ಆರಾಧಿಸಲ್ಪಡುತ್ತಿದೆ. ಕೆಲವೆಡೆ ಬೆಮ್ಮೆರ್ ಕೋಲನೇಮ ಪಡೆದುಕೊಂಡು ದೈವಗಳಂತೆ ಆರಾಧನೆ ಪಡೆದರೆ ಇತರೆಡೆ ದೇವರಂತೆ ಪೂಜಿಸಲ್ಪಡುತ್ತಾರೆ.
ಕೆಲ‌ ಸ್ಥಳಗಳಲ್ಲಿ ಬೆಮ್ಮೆರ್ ಪುನರ್ನಾಮಕಗೊಂಡು ಬ್ರಹ್ಮಲಿಂಗೇಶ್ವರ / ಮಹಾಲಿಂಗೇಶ್ವರ/ ಖಡ್ಗೇಶ್ವರಿ ಹೀಗೆಲ್ಲಾ ಹೊಸ ಹೆಸರಿನೊಂದಿಗೆ ಪೂಜಿಸಲ್ಪಡುತ್ತಿದ್ದಾರೆ. ಈ ರೀತಿಯ ಪುನರ್ನಾಮಕರಣ ಸರಿಯೋ ತಪ್ಪೋ‌ ಎಂಬುದು ಖಂಡಿತವಾಗಿಯೂ ವಿಚಾರಾರ್ಹ. ಆದರೆ ಈಗೀಗ ಈ ವಿಚಾರ ಜಾತಿಯ‌ ಬಣ್ಣ ಪಡೆದುಕೊಳ್ಳುತ್ತಿರುವುದು ವಿಷಾದನೀಯ. ಈ ರೀತಿಯ ನಾಮಾಂತರಕ್ಕೆಲ್ಲಾ ವೈದಿಕರೇ ಕಾರಣ, ನಮ್ಮ ದೈವಗಳ ವೈದಿಕೀಕರಣ ಎಂದೆಲ್ಲ ವೈದಿಕ ಸಮುದಾಯವನ್ನು ದೂರುವುದು ಅಲ್ಲಲ್ಲಿ ಕಂಡುಬರುತ್ತಿದೆ. © https://prajnaanambrahmah.wordpress.com

‘ಬೆಮ್ಮೆರ್’ ಎಂಬ ಶಬ್ದ ‘ಪೆರಿಯಮ್ಮೆರ್’ ಎಂಬ ಪದದಿಂದ ಹುಟ್ಟಿದೆಯೇ ಹೊರತು ‘ಬ್ರಹ್ಮ’ ಎಂಬ ಪದದಿಂದ ಅಲ್ಲ, ಈ ‘ಬೆಮ್ಮೆರ್’ ಎಂಬಾತ ತುಳುನಾಡಿನ ಮೂಲನಿವಾಸಿಗಳ ಹಿರಿಯನೋ ಅಥವಾ ರಾಜನೋ ಆಗಿರಬೇಕು ಎಂಬುದು ವೈದಿಕೀಕರಣ ವಿರೋಧಿಗಳ ಅಭಿಪ್ರಾಯ. ಅಂತೂ ಇಂತೂ ಬೆಮ್ಮೆರ್ ಬ್ರಹ್ಮನಲ್ಲ ಎಂಬುದು ಅವರ ವಾದ. ಬೆಮ್ಮೆರ್ ಬ್ರಹ್ಮನೋ ಅಲ್ಲವೋ ಹೇಳುವುದು ಕಷ್ಟಸಾಧ್ಯ. ಆದರೆ ‘ಬ್ರಹ್ಮ’ ಅಂದ ಕೂಡಲೆ ತಥಾಕಥಿತ ‘ವೈದಿಕರ ಚತುರ್ಮುಖ ಬ್ರಹ್ಮ’ ಎಂದು ಅರ್ಥೈಸಿಕೊಳ್ಳುವುದು ತಥಾಕಥಿತ ಬುದ್ದಿಜೀವಿಗಳ ಮೊದಲ ಲಕ್ಷಣ. ನಮಗೆ ಅದು ಏನು ಎಂಬುದನ್ನು ಸಾಧಿಸುವುದಕ್ಕಿಂತ ಅದು ಏನು ಅಲ್ಲ ಎಂಬುದನ್ನು ಸಾಧಿಸುವುದೇ ಮುಖ್ಯವಾದಾಗ ಆಗುವ ಗೊಂದಲವಿದು. ಕತ್ತಲೆ ಕೋಣೆಯಲ್ಲಿ ನಡೆಯುವಾಗ ಕಣ್ಣನ್ನು ಸಾಧ್ಯವಿದ್ದಷ್ಟು ತೆರೆದಿಟ್ಟುಕೊಳ್ಳುವುದು ಜಾಣತನ. ಅದರ ಬದಲಿಗೆ ಮೊದಲೇ ಒಂದು ಕಣ್ಣುಪಟ್ಟಿ ಕಟ್ಟಿಕೊಂಡು ನಡೆವವರನ್ನು ಹಿಡಿಯಲು ಪ್ರಯತ್ನಿಸುವುದು ವ್ಯರ್ಥ.
ವೈದಿಕ ಸಾಹಿತ್ಯದಲ್ಲಿ ಬ್ರಹ್ಮ ಅಂದರೆ ಚತುರ್ಮುಖ ಬ್ರಹ್ಮ ಒಬ್ಬನೇ ಅಲ್ಲ. ಚತುರ್ಮುಖ ಬ್ರಹ್ಮನ ಸ್ಥಾನದಲ್ಲಿ ಈಗಾಗಲೆ ಹಲವಾರು ಬ್ರಹ್ಮರು ಆಗಿಹೋಗಿದ್ದಾರೆ. ಮುಂದೆಯೂ ಹಲವಾರು ಬ್ರಹ್ಮರು ಬರಲಿದ್ದಾರೆ. ತ್ರಿಮೂರ್ತಿಗಳು ಮತ್ತು ಇತರೆಲ್ಲಾ ದೇವತೆಗಳಿಗೂ ಸೃಷ್ಟಿಕರ್ತನಾದ ವಿಶ್ವನಿಯಾಮಕ ಶಕ್ತಿಯನ್ನು ವೇದಾಂತದಲ್ಲಿ ‘ಬ್ರಹ್ಮನ್’, ‘ಪರಬ್ರಹ್ಮ’, ‘ಆತ್ಮ’, ‘ಪರಮಾತ್ಮ’ ಇತ್ಯಾದಿಯಾಗಿ ಕರೆಯಲಾಗುತ್ತದೆ. ವೈಷ್ಣವರು ಅದನ್ನೇ ‘ಮಹಾವಿಷ್ಣು’ ಎಂದು, ಶೈವರು ‘ಪರಶಿವ’ ಎಂದು, ಶಾಕ್ತೇಯರು ‘ಆದಿಶಕ್ತಿ/ ಪರಾಶಕ್ತಿ’ ಎಂದು, ಗಾಣಪತ್ಯರು ‘ಮಹಾಗಣಪತಿ’ ಎನ್ನುವುದು. ನಮ್ಮಲ್ಲಿ ಕಂಡುಬರುವ ಪ್ರಾಚೀನ ದೇವಾಲಯಗಳಲ್ಲೆಲ್ಲಾ ‘ಮಹಾಗಣಪತಿ/ ಮಹಾಲಿಂಗೇಶ್ವರ/ ಮಹತೋಬಾರ ಎಂದೆಲ್ಲಾ ಈ ಮಹತ್ ತತ್ವಕ್ಕೇ ಮಣೆ ಹಾಕಿದ್ದನ್ನು ಗಮನಿಸಿ. ಹಾಗಾಗಿ ಬೆಮ್ಮೆರ್ ಚತುರ್ಮುಖ ಬ್ರಹ್ಮನೇ ಆಗಬೇಕಿಲ್ಲ, ಪರಬ್ರಹ್ಮನೂ ಆಗಬಹುದು, ಯಾಕೆ ಆಗಿರಬಾರದು?
ಬ್ರಹ್ಮ ಎಂಬುದಕ್ಕೆ ಬೃಹತ್ ಮಾತ್ರವಲ್ಲದೆ ಹಿರಿಯ ಎಂಬ ಅರ್ಥವೂ ಸಂಸ್ಕೃತದಲ್ಲಿ ಇದೆ. ಈ ಹಿರಿಯ ಮತ್ತು ಪೆರಿಯಮ್ಮೆರ್ ಎಂಬ ತುಳು ಮೂಲಗಳನ್ನು ಹೋಲಿಸಿ‌‌ ನೋಡಿ. ಬೆಮ್ಮೆರ್ ಮತ್ತು‌ ಬ್ರಹ್ಮ ಶಬ್ದಗಳಲ್ಲಿ ಅರ್ಥವ್ಯತ್ಯಾಸ ಏನಾದರೂ ಇದೆಯೆ?
ಬೆಮ್ಮೆರ್ ಬಗ್ಗೆ ಹೇಳುವುದು ಮುಂದಕ್ಕೂ ಇದ್ದೇ ಇದೆ. ಅಲ್ಲಿಯವರೆಗೆ ನಿಮ್ಮ ಅಂತರಂಗದಲ್ಲಿ ಬೆಮ್ಮೆರ್‌ರ ಬಗ್ಗೆ ಚಿಂತನೆ ನಡೆಸಲು ಹೇಳುತ್ತಾ ಇಂದಿನ ಬರವಣಿಗೆಗೆ ವಿಶ್ರಾಂತಿ‌ ನೀಡುತ್ತೇನೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »