TOP STORIES:

FOLLOW US

ಮಂಗಳೂರು ಬಜ್ಪೆ ಊರಿನಲ್ಲೊಬ್ಬ ಆಪತ್ಬಾಂಧವ… ದಿನೇಶಣ್ಣ ಬಜಪೆ.


#ಬಜ್ಪೆ_ರಿಕ್ಷ_ದಿನೇಶಣ್ಣೆ…. 😍

ಮಂಗಳೂರು ಬಜ್ಪೆ  ಊರಿನಲ್ಲೊಬ್ಬ ಆಪತ್ಬಾಂಧವ…. ನಮ್ಮ ಆಟೋ ದಿನೇಶಣ್ಣ ಬಜಪೆ.

ಎಲ್ಲೋ ಒಬ್ಬ ಆಟೋ ಚಾಲಕ ಮೀಟರ್  ಡಬಲ್ ಕೇಳಿದರೆ ನಾವು ಅವನಿಗೆ ಬಾಯಿ ತುಂಬಾ ಬೈದು ಮತ್ತೆ ಎಲ್ಲಾ ಆಟೋ ಚಾಲಕರ ಮೇಲೆ ಮುನಿಸಿಕೊಳ್ಳುತ್ತೇವೆ. ಆದರೆ ಅದೆಷ್ಟೋ ಆಟೋ ಚಾಲಕರು ತಮ್ಮ ದುಡಿಮೆಯ ಜೊತೆಗೆ ಸಮಾಜದ ಪ್ರತಿ ಒಂದು ವರ್ಗದ ಜಾತಿ ಧರ್ಮ ಭೇದ ಮರೆತು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತನ್ನ ಸೇವೆಯನ್ನು ನೀಡಿ ತನ್ನ ಜೀವನವನ್ನು ಸಮಾಜಕ್ಕೆ ಮುಡಿಪಾಗಿಟ್ಟ ಎಷ್ಟು ಆಟೋ ಚಾಲಕರು ನಮ್ಮ ಕಣ್ಣ ಮುಂದೆ ಇದ್ದಾರೆ. ಅದರಲ್ಲಿ ನಮ್ಮ ಬಜಪೆಯ ಆಪತ್ಬಾಂಧವ ದಿನೇಶಣ್ಣ ಒಬ್ಬರು…

ಶ್ರೀ ದಿನೇಶ್ ಬಂಗೇರ ಬಜಪೆ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ಬಜಪೆಯಲ್ಲಿ ಆಟೋ ಚಾಲಕರಾಗಿರುವ ಇವರು ಕಳೆದ ಅನೇಕ ವರ್ಷಗಳಿಂದ ದುಡಿಮೆ ಜೊತೆಗೆ ಸಮಾಜಮುಖಿ ಕಾರ್ಯಗಳು, ಸಮಾಜದ ಕಡು ಬಡತನದಲ್ಲಿರುವ ಅಶಕ್ತರ ನೆನಪಿಗೆ ನೆರವಿಗೆ ಧಾವಿಸುವ ಆಪತ್ಬಾಂಧವ. ಕೆಲವು ವರ್ಷಗಳ ಹಿಂದೆ ನಾನು ಬಸ್ಸಿನಲ್ಲಿ ಕೈಕಂಬ ಮಾರ್ಗವಾಗಿ ಪ್ರಯಾಣಿಸುತ್ತಿದ್ದೆ ಆ ಸಂದರ್ಭದಲ್ಲಿ ಕ್ರಿಶ್ಚಿಯನ್ ವ್ಯಕ್ತಿಗೆ ಬಸ್ಸು ತಾಗಿ ಅವರು ನೆಲಕ್ಕೆ ಕುಸಿತರು ಬಸ್ಸಿನವ ಬಿಟ್ಟು ಹೋಗುವವನಿದ್ದ.. ಆ ಸಂದರ್ಭದಲ್ಲಿ ತಕ್ಷಣವೇ ದಿನೇಶಣ್ಣ ತಮ್ಮ ರಿಕ್ಷಾದಿಂದ ಹಾರಿ ಬಸ್ಸನ್ನು ನಿಲ್ಲಿಸಿ ಅಸಹಾಯಕತೆಯಲ್ಲಿ ಇದ್ದ ವ್ಯಕ್ತಿಗೆ ನ್ಯಾಯವನ್ನು ಸ್ಥಳದಲ್ಲಿ ಕೊಡಿಸುವ ಕೆಲಸ ಮಾಡಿದರು. ಇದು ನಾನು ಪ್ರತ್ಯಕ್ಷ ನೋಡಿದ ಘಟನೆ. ಅದೇ ರೀತಿ ಅದೆಷ್ಟೋ ಅಶಕ್ತರಿಗೆ ವೃದ್ಧರಿಗೆ ಸಹಾಯ ಮಾಡಿದ ಘಟನೆಗಳು ನೂರಾರು ಇದೆ.

ಬಿರುವೆರ್ ಕುಡ್ಲ ಬಜಪೆ ಘಟಕ ಎಲ್ಲರಿಗೂ ಗೊತ್ತಿರುವ ವಿಷಯ ಅವರು ಮಾಡುವ ಸೇವಾ ಯೋಜನೆಗಳು ಇಡೀ ಸಮಾಜಕ್ಕೆ ಗೊತ್ತಿರುವಂತಹ ವಿಷಯ, ಬಿರುವೆರ್ ಕುಡ್ಲ ಬಜಪೆ ಘಟಕ ಉಪಾಧ್ಯಕ್ಷರಾಗಿ ಕಳೆದ ನಾಲ್ಕು ವರ್ಷಗಳಿಂದ ಘಟಕದ ಸಮಾಜಕ್ಕೆ ಸೇವೆಗಳು ಯಶಸ್ವಿಯಾಗಿ ನಡೆಯಲು ಇವರು ಕೂಡ ಕಾರಣಿಭೂತರು. ಘಟಕದ ಪ್ರತಿಯೊಂದು ಹೆಜ್ಜೆಲ್ಲೂ   ಮಾರ್ಗದರ್ಶನ ನೀಡುತ್ತಾ, ಘಟಕದ ಸ್ಪಂದನ ತಂಡಕ್ಕೆ ಧನವನ್ನು ಕೂಡಿಕರಿಸುವುದರಲ್ಲಿ ಇವರ ಪರಿಶ್ರಮ ಅಪಾರ. ಕೇಸರಿ ಆಟೋ ಚಾಲಕರ ಸಂಘ ಬಜತಪೆ ಇದರ ಒಂದು ಯಶಸ್ವಿ ಪದಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಹಿರಿಯರಲ್ಲಿ ಹಿರಿಯರಂತೆ…. ಕಿರಿಯದಲ್ಲಿ ಕಿರಿಯರಂತೆ ಅತಿ ಮುಗ್ಧತೆಯಿಂದ ಇರುವ ಇವರ ವ್ಯಕ್ತಿತ್ವ ನಮಗೆಲ್ಲ ಆದರ್ಶವಾಗಿದೆ. ಅನಾರೋಗ್ಯದಲ್ಲಿರುವವರಿಗೆ, ಬಾಣಂತಿಯರಿಗೆ, ಹಿರಿಯರಿಗೆ ಮತ್ತು ಅಪಘಾತವಾದವರಿಗೆ ತಡ ರಾತ್ರಿ ನೋಡದೆ ತಕ್ಷಣವೇ ಸ್ಪಂದಿಸುವ ವ್ಯಕ್ತಿ ನಮ್ಮ ದಿನೇಶಣ್ಣ. ಬ್ರಹ್ಮಶ್ರೀ ನಾರಾಯಣ ಗುರುಗಳ ಅಪ್ಪಟ ಭಕ್ತ ಹಾಗೂ ಅತಿ ಶ್ರದ್ಧೆಯ ಅನುಯಾಯಿಯಾಗಿದ್ದಾರೆ. ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂಬ ಮಾತಿನಂತೆ ನಡೆಯುತ್ತಿರುವ ಇವರು ತನ್ನ ಸಣ್ಣ ಕುಟುಂಬ ಜೊತೆಗೆ ಸುಖಿ ಜೀವನವನ್ನು ನಡೆಸುತ್ತಿದ್ದಾರೆ. ಇವರ ವೃತ್ತಿ ಹಾಗೂ ಇವರ ಸಮಾಜ ಬಗ್ಗೆ ಸೇವೆಗಳಿಗೆ ಆ ಭಗವಂತ ಇನ್ನಷ್ಟು ಆಶೀರ್ವಾದ ನೀಡಲಿ ಎಂದು ನಾವು ಪ್ರಾರ್ಥಿಸುತ್


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »