TOP STORIES:

FOLLOW US

ಶ್ರೀಮತಿ ಶಾರದಾ ಅಂಚನ್ ಅವರಿಗೆ “ಪ್ರೊ| ನಳಿನಿ ವಿಶ್ವನಾಥ್ ಕಾರ್ನಾಡ್  ಸಂಸ್ಮರಣಾ ಪ್ರಶಸ್ತಿ”


ಶ್ರೀಮತಿ ಶಾರದಾ ಅಂಚನ್ ಅವರಿಗೆ “ಪ್ರೊ| ನಳಿನಿ ವಿಶ್ವನಾಥ್ ಕಾರ್ನಾಡ್  ಸಂಸ್ಮರಣಾ ಪ್ರಶಸ್ತಿ”

ಗೋರೆಗಾಂವ್ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಮಾ. 8ರಂದು ಅಪರಾಹ್ನ 4ರಿಂದ ಸಂಘದ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಗೋರೆಗಾಂವ್‌ನ ಕೇಶವಗೋರೆ ಸ್ಮಾರಕ ಟ್ರಸ್ಟ್‌ನಲ್ಲಿ ನಡೆಯಲಿದೆ. 

ಸುಜಾತಾ ವಿ. ಕೋಟ್ಯಾನ್ ಮತ್ತು ಶೈಲಜಾ ಆರ್. ಅಂಚನ್ ಸಂಸ್ಮರಣೆಯಲ್ಲಿ ಸ್ಥಾಪಿಸಿದ ದತ್ತಿ ನಿಧಿ ಕಾಠ್ಯಕ್ರಮ ಜರಗಲಿದೆ. ಪ್ರೊ| ನಳಿನಿ ವಿಶ್ವನಾಥ್ ಕಾರ್ನಾಡ್ ಅವರ ಸಂಸ್ಮರಣೆಯಲ್ಲಿ ಡಾ| ವಿಶ್ವನಾಥ್ ಕಾರ್ನಾಡ್ ಅವರು ಪ್ರತಿ ವರ್ಷ ಮುಂಬಯಿಯ ಓರ್ವ ಮಹಿಳಾ ಸಾಹಿತಿಗೆ ಪ್ರಶಸ್ತಿ ನೀಡುತಿದ್ದು, ಈ ವರ್ಷದ ಪುರಸ್ಕಾರವು ಲೇಖಕಿ ಶಾರದಾ ಎ. ಅಂಚನ್ ಅವರಿಗೆ ಪ್ರದಾನ ಮಾಡಲಾಗುವುದು.

ಮುಖ್ಯ ಅತಿಥಿಯಾಗಿ ಸಮಾಜ ಸೇವಕಿ, ಮುಂಬಯಿ ಕನ್ನಡ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಜನಿ ವಿನಾಯಕ ಪೈ ಭಾಗವಹಿಸಲಿ ದ್ದಾರೆ. ಮಹಿಳೆ ಯರಲ್ಲಿ ತಲೆಮಾ ದಿನ ಅಂತರ ಎಂಬ ವಿಷಯದಲ್ಲಿ ಶ್ರೀಮತಿ ಕುಮಾರೇಶ್‌ ಆಚಾರ್ಯ ಉಪನ್ಯಾಸ ನೀಡಲಿದ್ದಾರೆ. 

ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸರಿತಾ ಸುರೇಶ್‌ ನಾಯಕ್, ಮಹಿಳಾ ವಿಭಾ ಗದ ಕಾರ್ಯಾಧ್ಯಕ್ಷೆ ಸಾವಿತ್ರಿ ಎಂ. ಶೆಟ್ಟಿ, ಸಂಚಾಲಕಿ ಸವಿತಾ ಭಟ್ ಹಾಗೂ ಚಂದ್ರಾವತಿ ಬಿ. ಶೆಟ್ಟಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಲೇಖಕಿ, ಸಾಹಿತಿ ಶ್ರೀಮತಿ ಶಾರದಾ ಎ.ಅಂಚನ್  ಅವರ ಕಿರು ಪರಿಚಯ

ಮುಂಬಯಿ  ಲೇಖಕಿ, ಸಾಹಿತಿ ಶ್ರೀಮತಿ ಶಾರದಾ ಎ.ಅಂಚನ್ ಇವರು ಇದುವರೆಗೆ ಸುಮಾರು ಹದಿನೇಳು ಕೃತಿಗಳನ್ನು ಪ್ರಕಟಿಸಿದ್ದು ಇವರ  “ಪಾಡ್ದನ” ತುಳು ಕವನ ಸಂಕಲನಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, “ರಕ್ತವೇ ಜೀವನದಿ “ವೈದ್ಯಕೀಯ ಕೃತಿಗೆ ವಿಶ್ವೇಶ್ವರಯ್ಯ ಇಂಜೀನೀಯರಿಂಗ್  ಪ್ರತಿಷ್ಠಾನದ  ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ,ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ  ದಿ//ಡಾ.ಎಚ್.ನರಸಿಂಹಯ್ಯ ದತ್ತಿ ಪ್ರಶಸ್ತಿ ಹಾಗೆಯೇಇವರ ಇನ್ನೊಂದು   ವೈದ್ಯಕೀಯ ಕೃತಿ “ರಕ್ತಶುದ್ಧಿ- ಆರೋಗ್ಯವೃದ್ಧಿ” ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ  “ಬಿಸಲೇರಿ ಜಯಣ್ಣ ಮತ್ತು ಬಿಸಲೇರಿ ಬ್ರದರ್ಸ್ ದತ್ತಿ ಪ್ರಶಸ್ತಿ ” ಹಾಗೂ “ನಡೆ ನೀ ಮುಂದೆ” ಕವನ ಸಂಕಲನಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘ ಕೊಡಮಾಡುವ “ಶ್ರೀ ಕ್ಷೇತ್ರ ಧರ್ಮಸ್ಥಳ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ”  ಲಭ್ಯವಾಗಿದೆ.   

   ಡಾ.ಕೆ.ಶಿವರಾಮ ಕಾರಂತ  ಕಥಾ ಪುರಸ್ಕಾರ,PROF.H.S.K ಸಾಹಿತ್ಯ ಪ್ರಶಸ್ತಿ,ಚೈತನ್ಯಶ್ರೀ ಪ್ರಶಸ್ತಿ,ಕಾವ್ಯಸಿರಿ ಪ್ರಶಸ್ತಿ,ಬಸವ ಶ್ರೀ ಹಾಗೂ ಕಾವ್ಯಶ್ರೀ ಪ್ರಶಸ್ತಿ, ಕನ್ನಡ ಸಾಹಿತ್ಯ ಸಿರಿ ಪ್ರಶಸ್ತಿ,ಪ್ರೇಮಕವಿ ಪ್ರಶಸ್ತಿ,ಕರ್ನಾಟಕ ಯುವ ರತ್ನ ಪ್ರಶಸ್ತಿ,ತ್ಹೌಳವ  ಸಿರಿ ಪ್ರಶಸ್ತಿ, ಪಂಚಕಥಾ ಪ್ರಶಸ್ತಿ,ಹುಬ್ಬಳ್ಳಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ,ವೀರರಾಣಿ  ಕಿತ್ತೂರು ಚೆನ್ನಮ್ಮ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ,ದಸರಾ ಕಾವ್ಯ ಪುರಸ್ಕಾರ,ಗಡಿನಾಡ ಧ್ವನಿ ಕಾವ್ಯಭೂಷಣ ಪ್ರಶಸ್ತಿ.ಎಂ.ಬಿ. ಕುಕ್ಯಾನ್     ರೈಟರ್ ಆಫ್ ದಿ ಇಯರ್  ಪ್ರಶಸ್ತಿ ಹೀಗೆ ಹತ್ತು ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಶಾರದಾ ಅಂಚನ್ ಇವರು ಔದ್ಯೋಗಿಕವಾಗಿ ರಕ್ತನಿಧಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ತನ್ನ ಕಾರ್ಯ ಕ್ಷೇತ್ರದಲ್ಲಿ  ಇದುವರೆಗೆ ಸುಮಾರು 1000ಕ್ಕೂ ಹೆಚ್ಚು ರಕ್ತದಾನ ಶಿಭಿರಗಲ್ಲಿ ಭಾಗವಹಿಸಿದ್ದಾರೆ.ಸಂಗೀತದಲ್ಲೂ ಆಸಕ್ತಿ ಇರುವ ಇವರು ಗಾಯಕಿಯಾಗಿಯೂ ಪರಿಚಿತರಾಗಿದ್ದಾರೆ.


Share:

More Posts

Category

Send Us A Message

Related Posts

ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ


Share       ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ ಮುಂಬೈ ವಿಶ್ವವಿದ್ಯಾಲಯದಲ್ಲಿ ಪಿ ಎಚ್. ಡಿ ಕೋರ್ಸ್ ವರ್ಕ್ ನ ಸಲುವಾಗಿ ಜಯ ಸುವರ್ಣರ ಕುರಿತು ಶೋಧ ಪ್ರಬಂಧವನ್ನು


Read More »

ಬೆಳ್ತಂಗಡಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರರ ಹೆಸರಿಡಲು ಮನವಿ


Share       ಬೆಳ್ತಂಗಡಿ: 5 ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ, ಕಳೆದ 50 ವರ್ಷದಲ್ಲಿ ಕ್ಷೇತ್ರದ ಬಡ ಜನತೆಯ ಧ್ವನಿಯಾಗಿ ಕೆಲಸ ಮಾಡಿ ಇಹಲೋಕ ತ್ಯಜಿಸಿದ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸ್ಥಾಪನೆಗೆ ಕಾರಣಕರ್ತರು ಹಾಗೂ


Read More »

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ


Share       ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ ನೇರ ನಡೆನುಡಿಯ, ದಿಟ್ಟ ಹೋರಾಟಗಾರ, ಭ್ರಷ್ಟಾಚಾರಿಗಳಿಗೆ ದುಃಸ್ವಪ್ನರಾಗಿದ್ದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು


Read More »

ಬಿಲ್ಲವ ಸಮಾಜದ ಭರವಸೆಯ ಸೂರ್ಯ ಜನ್ಮದಿನದ ಸಲುವಾಗಿ ನುಡಿ ಬರಹ


Share       ಎರಡು ವರ್ಷಗಳ ಹಿಂದೆ ಜಯ ಸುವರ್ಣರ ಕುರಿತು ಮಾಹಿತಿಯನ್ನು ಸಂಗ್ರಹಿಸುವ ಸಲುವಾಗಿ ಅವರ ಮಗ ಸೂರ್ಯಕಾಂತ್ ಸುವರ್ಣರನ್ನು ಸಂದರ್ಶನ ಮಾಡಲು ಗೊರೆಗಾವ್‍ನಲ್ಲಿರುವ ಜಯ ಸುವರ್ಣರ ಕಚೇರಿಗೆ ಮೊದಲ ಬಾರಿ ಭೇಟಿ ನೀಡಿದ್ದೆ. ಜಯ ಸುವರ್ಣರನ್ನೇ


Read More »

ಕಿನ್ನಿಗೋಳಿ: ಬುಡಸಹಿತ ಧರೆಗುರುಳಿದ ಅವಳಿ ವೀರರನ್ನು ತೊಟ್ಟಿಲು ಕಟ್ಟಿ ತೂಗಿದ್ದ ತಾಕೊಡೆ ಮರ ಇನ್ನು ನೆನಪು ಮಾತ್ರ


Share       ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ


Read More »

ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ‘ಅಡ್ಡಣ ಪೆಟ್ಟು’: ಬಲು ವಿಶಿಷ್ಠ ಮಂಡೆಕೋಲಿನ ಈ ಅಡ್ಡಣಪೆಟ್ಟು ಆಚರಣೆ..!


Share       ಸುಳ್ಯ: ದೈವವೇ ಬಂದು ಜಗಳ ಬಿಡಿಸಿ ಸೌಹಾರ್ದತೆಯಿಂದ ಬಾಳಿ ಎಂಬ ಗತ ಕಾಲದ ದೈವ ಸಂದೇಶವನ್ನು ಇಂದಿಗೂ ಜನ ಮಾನಸಕ್ಕೆ ಮುಟ್ಟಿಸುವ ವಿಶಿಷ್ಟ ಆಚರಣೆ ಅಡ್ಡಣಪೆಟ್ಟು ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಪ್ರತಿ ವರ್ಷವೂ ನಡೆಯುತಿದೆ.


Read More »