TOP STORIES:

FOLLOW US

ಬಿಲ್ಲವ ಸಮಾಜದ ಜನರ ಭಾವನೆ ಜತೆ ಚೆಲ್ಲಾಟ ಬೇಡ:ಸತ್ಯಜಿತ್ ಸುರತ್ಕಲ್


ಸಮುದಾಯ ಭಾವನೆ ಜತೆ ಚೆಲ್ಲಾಟ ಬೇಡ:ಸತ್ಯಜಿತ್

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು, ಕೋಟಿ ಚೆನ್ನಯರ ಹೆಸರಿನಲ್ಲಿ ಬಿಲ್ಲವ ಸಮಾಜದ ಜನರ ಭಾವನೆಗಳ ಜತೆಗೆ ಚೆಲ್ಲಾಟವಾಡುವ ಪ್ರಯತ್ನ ಮುಂದುವರಿಸಿದರೆ, ಈ ಬಾರಿ ಅದಕ್ಕೆ ತಕ್ಕ ಉತ್ತರವನ್ನು ಸಮಾಜದ ಜನತೆ ನೀಡಲಿದ್ದಾರೆ ಎಂದು ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಲ್ಲವ ಸಮಾಜ ನಂಬಿಕಸ್ತ ಹಾಗೂ ಮುಗ್ಧ ಸಮಾಜ. ಭಾವನಾತ್ಮಕವಾಗಿ ಅವರ ಜತೆ ಚೆಲ್ಲಾಟವಾಡಬಹುದು ಎಂಬುದು ಸ್ಥಳೀಯ ಬಿಜೆಪಿ ನಾಯಕರು ಭಾವಿಸಿದ್ದರೆ, ಅದು ಇನ್ನು ಮುಂದೆ ಸಾಧ್ಯವಿಲ್ಲ.  ಪ್ರಧಾನಿ ಮೋದಿಯವರು  ಮಂಗಳೂರಿಗೆ ಆಗಮಿಸಿ ರೋಡ್ ಶೋ ನಡೆಸುವ ವೇಳೆ ನಾರಾಯಣ ಗುರುಗಳಿಗೆ ಮಾಲಾರ್ಪಣೆ ಮಾಡಲಿರುವುದು ಸ್ವಾಗತಾರ್ಹ. 2022ರ ಗಣರಾಜ್ಯೋತ್ಸವ ಪರೇಡ್‌ಗಾಗಿ ಕೇರಳ ಸರಕಾರವು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿ ರೂಪಿಸಿದ್ದ ನಾರಾಯಣಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಅಂದು ಪ್ರಧಾನಿಯವರು ಅದಕ್ಕೆ ಅವಕಾಶ ನೀಡಿದ್ದರೆ ಅದು ನಾರಾಯಣ ಗುರು ಹಾಗೂ ಅವರನ್ನು ಪೂಜಿಸುವ, ಗೌರವಿಸುವ ಬಿಲ್ಲವ ಸಮುದಾಯಕ್ಕೆ ಮಾಡುವ ದೊಡ್ಡ ಗೌರವ ಆಗಿರುತ್ತಿತ್ತು ಎಂದರು.

ಹಿ0ದಿನ ಬಿಜೆಪಿ ಆಡಳಿತ ಅವಧಿಯಲ್ಲಿ ಪಠ್ಯಪುಸ್ತಕದಿಂದ ನಾರಾಯಣಗುರುಗಳ ಹೆಸರನ್ನು ಕೈಬಿಡಲಾಗಿತ್ತು. ಇದಕ್ಕೂ ಪ್ರತಿಭಟನೆ ನಡೆದು ಸಾಕಷ್ಟು ಸಬೂಬು ನೀಡಿದ್ದ ಬಿಜೆಪಿ ಸರಕಾರ ಸಮಾಜದ ಪ್ರತಿಭಟನೆಯ ಕಾವು ಹೆಚ್ಚಾದಾಗ ಮಣಿದು ಪಠ್ಯವನ್ನು ಅಳವಡಿಸಿತ್ತು. ಆದರೆ ಪಠ್ಯವನ್ನು ಕೈಬಿಡುವಲ್ಲಿ ಪ್ರಮುಖ ಕಾರಣಕರ್ತರಾಗಿದ್ದ ರೋಹಿತ್ ಚಕ್ರತೀರ್ಥರನ್ನು ಬಿಜೆಪಿ ಶಾಸಕರು ವೇಣೂರಿನ ಕಾರ್ಯಕ್ರಮದಲ್ಲಿ ಸನ್ಮಾನಿಸುವ ಮೂಲಕ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಮಾತ್ರವಲ್ಲದೆ, ಅವರಿಗೆ ಅಪಮಾನ ಮಾಡಿದ ವ್ಯಕ್ತಿಗೆ ಸನ್ಮಾನ ಮಾಡಿರುವುದು ಸಮಾಜ ಮರೆತ್ತಿಲ್ಲ ಎಂದರು.

ದ.ಕ., ಶಿವಮೊಗ್ಗ ಹಾಗೂ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಮಾಜದ ಅಭ್ಯರ್ಥಿಗಳ ಗೆಲುವಿಗಾಗಿ ಕೆಲಸ ಕಾರ್ಯ ನಡೆಯುತ್ತಿದೆ. ಸಮಾಜದಲ್ಲಿ ಬದಲಾವಣೆ ಎಷ್ಟರ ಮಟ್ಟಿಗೆ ಆಗಿದೆ ಎಂಬುದು ಚುನಾವಣೆಯ ಫಲಿತಾಂಶದಿAದ ನಿರ್ಧಾರ ಆಗಲಿದೆ. ಸಮಾಜಕ್ಕೆ ಯಶಸ್ಸು ಸಿಗುವ ವಿಶ್ವಾಸ ಇದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ವೇದ ಕುಮಾರ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಗೆಜ್ಜೆಗಿರಿ ಕ್ಷೇತ್ರದ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿ ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »