TOP STORIES:

ಕಿನ್ನಿಗೋಳಿ: ಬುಡಸಹಿತ ಧರೆಗುರುಳಿದ ಅವಳಿ ವೀರರನ್ನು ತೊಟ್ಟಿಲು ಕಟ್ಟಿ ತೂಗಿದ್ದ ತಾಕೊಡೆ ಮರ ಇನ್ನು ನೆನಪು ಮಾತ್ರ


ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ

ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ

ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ

ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ

ಕಿನ್ನಿಗೋಳಿ: ಸಹಸ್ರಮಾನದ ಇತಿಹಾಸದ, ಲಕ್ಷಾಂತರ ಮಂದಿ ನಂಬುವ ಧಾರ್ಮಿಕ ಕ್ಷೇತ್ರದ ಪವಿತ್ರ ಮರ ಬುಡಸಹಿತ ಧರೆಗುರುಳಿದ್ದು ಭಕ್ತ ಮನಸ್ಸಿನ ನೋವುಂಟು ಮಾಡಿದೆ. ಜೀವಂತ ಸಾಕ್ಷಿಯಾಗಿ ಬೃಹತ್ತಾಗಿ ಬೆಳೆದು ನಿಂತಿದ್ದ ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರದ ತಾಕೊಡೆ ಮರ ಶುಕ್ರವಾರ ಬುಡಸಹಿತ ಧರೆಗುರುಳುವುದರೊಂದಿಗೆ ಇತಿಹಾಸದ ಜೀವಂತ ಸಾಕ್ಷಿಯೊಂದು ಅಂತ್ಯ ಕಂಡ0ತಾಗಿದೆ. ಸುಮಾರು 800ರಿಂದ 1,000 ವರ್ಷಗಳ ಹಿನ್ನೆಲೆ ಈ ತಾಕೊಡೆ ಮರಕ್ಕೆ ಇತ್ತು ಅನ್ನುವುದು ಅಧ್ಯಯನಗಳಿಂದಲೂ ದೃಢಪಟ್ಟಿತ್ತು.

ಮೂಲ್ಕಿ ಸಾವಂತ ಅರಸರ ದಳವಾಯಿಗಳಾಗಿ ಕಾಂತಬಾರೆ- ಬೂದಬಾರೆಯರು ಇದ್ದರು ಅನ್ನುವುದು ಐತಿಹಾಸಿಕ ಸಾಕ್ಷಿಯಾದರೆ ಈ ಅವಳಿ ವೀರರು ಹುಟ್ಟಿದ್ದು ಇದೇ ತಾಕೊಡೆ ಮರದಡಿಯಲ್ಲಿ. ಮತ್ತು ಆಗ ತಾನೆ ಹುಟ್ಟಿದ ಅವಳಿ ಮಕ್ಕಳನ್ನು ನೇಲೆ (ಬಟ್ಟೆಯ ತೊಟ್ಟಿಲು)ಯಲ್ಲಿ ಹಾಕಿ ತೂಗಿದ್ದು ಇದೇ ತಾಕೊಡೆ ಮರದ ಪಡ್ಡಾಯಿ (ಪಡುವಣ-ಪಶ್ಚಿಮ) ಗೆಲ್ಲಿಗೆ ಎನ್ನುತ್ತದೆ ಇತಿಹಾಸ. ಈಗ ಕಾಂತಬಾರೆ- ಬೂದಬಾರೆಯರು ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರವೇ ಬುಡ ಸಮೇತ ಉರುಳಿದೆ. ಕ್ಷೇತ್ರಕ್ಕೆ ಬರುವ ಲಕ್ಷಾಂತರ ಮಂದಿಯನ್ನು ಭಕ್ತಿ ಪರವಶರನ್ನಾಗಿ ಮಾಡಿದ್ದ ಮರ ಇನ್ನು ನೆನಪು ಮಾತ್ರವಾಗಿದೆ. ಈ ವಿದ್ಯಾಮಾನ ಭಕ್ತಗಣಕ್ಕೆ ಬೇಸರ ತರಿಸಿರುವುದು ದುರದೃಷ್ಟಕರ. 


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »