TOP STORIES:

FOLLOW US

ಕಿನ್ನಿಗೋಳಿ: ಬುಡಸಹಿತ ಧರೆಗುರುಳಿದ ಅವಳಿ ವೀರರನ್ನು ತೊಟ್ಟಿಲು ಕಟ್ಟಿ ತೂಗಿದ್ದ ತಾಕೊಡೆ ಮರ ಇನ್ನು ನೆನಪು ಮಾತ್ರ


ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ

ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ

ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ

ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ

ಕಿನ್ನಿಗೋಳಿ: ಸಹಸ್ರಮಾನದ ಇತಿಹಾಸದ, ಲಕ್ಷಾಂತರ ಮಂದಿ ನಂಬುವ ಧಾರ್ಮಿಕ ಕ್ಷೇತ್ರದ ಪವಿತ್ರ ಮರ ಬುಡಸಹಿತ ಧರೆಗುರುಳಿದ್ದು ಭಕ್ತ ಮನಸ್ಸಿನ ನೋವುಂಟು ಮಾಡಿದೆ. ಜೀವಂತ ಸಾಕ್ಷಿಯಾಗಿ ಬೃಹತ್ತಾಗಿ ಬೆಳೆದು ನಿಂತಿದ್ದ ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರದ ತಾಕೊಡೆ ಮರ ಶುಕ್ರವಾರ ಬುಡಸಹಿತ ಧರೆಗುರುಳುವುದರೊಂದಿಗೆ ಇತಿಹಾಸದ ಜೀವಂತ ಸಾಕ್ಷಿಯೊಂದು ಅಂತ್ಯ ಕಂಡ0ತಾಗಿದೆ. ಸುಮಾರು 800ರಿಂದ 1,000 ವರ್ಷಗಳ ಹಿನ್ನೆಲೆ ಈ ತಾಕೊಡೆ ಮರಕ್ಕೆ ಇತ್ತು ಅನ್ನುವುದು ಅಧ್ಯಯನಗಳಿಂದಲೂ ದೃಢಪಟ್ಟಿತ್ತು.

ಮೂಲ್ಕಿ ಸಾವಂತ ಅರಸರ ದಳವಾಯಿಗಳಾಗಿ ಕಾಂತಬಾರೆ- ಬೂದಬಾರೆಯರು ಇದ್ದರು ಅನ್ನುವುದು ಐತಿಹಾಸಿಕ ಸಾಕ್ಷಿಯಾದರೆ ಈ ಅವಳಿ ವೀರರು ಹುಟ್ಟಿದ್ದು ಇದೇ ತಾಕೊಡೆ ಮರದಡಿಯಲ್ಲಿ. ಮತ್ತು ಆಗ ತಾನೆ ಹುಟ್ಟಿದ ಅವಳಿ ಮಕ್ಕಳನ್ನು ನೇಲೆ (ಬಟ್ಟೆಯ ತೊಟ್ಟಿಲು)ಯಲ್ಲಿ ಹಾಕಿ ತೂಗಿದ್ದು ಇದೇ ತಾಕೊಡೆ ಮರದ ಪಡ್ಡಾಯಿ (ಪಡುವಣ-ಪಶ್ಚಿಮ) ಗೆಲ್ಲಿಗೆ ಎನ್ನುತ್ತದೆ ಇತಿಹಾಸ. ಈಗ ಕಾಂತಬಾರೆ- ಬೂದಬಾರೆಯರು ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರವೇ ಬುಡ ಸಮೇತ ಉರುಳಿದೆ. ಕ್ಷೇತ್ರಕ್ಕೆ ಬರುವ ಲಕ್ಷಾಂತರ ಮಂದಿಯನ್ನು ಭಕ್ತಿ ಪರವಶರನ್ನಾಗಿ ಮಾಡಿದ್ದ ಮರ ಇನ್ನು ನೆನಪು ಮಾತ್ರವಾಗಿದೆ. ಈ ವಿದ್ಯಾಮಾನ ಭಕ್ತಗಣಕ್ಕೆ ಬೇಸರ ತರಿಸಿರುವುದು ದುರದೃಷ್ಟಕರ. 


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »