TOP STORIES:

ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ


ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ

ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ

ಮುಂಬೈ ವಿಶ್ವವಿದ್ಯಾಲಯದಲ್ಲಿ ಪಿ ಎಚ್. ಡಿ ಕೋರ್ಸ್ ವರ್ಕ್ ನ ಸಲುವಾಗಿ ಜಯ ಸುವರ್ಣರ ಕುರಿತು ಶೋಧ ಪ್ರಬಂಧವನ್ನು ರಚಿಸಲು ಡಾ ಜಿ ಎನ್. ಉಪಾಧ್ಯ ಅವರು ಹೇಳುವವರೆಗೆ ಸುವರ್ಣರನ್ನು ತಿಳಿಯುವ ಪ್ರಯತ್ನವನ್ನು ನಾನೆಂದೂ ಮಾಡಿರಲಿಲ್ಲ. ನನ್ನದು ಸಾಹಿತ್ಯ ಪ್ರಪಂಚ. ಅಪರೂಪಕ್ಕೆ ಸಾಹಿತ್ಯ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ  ಮಾತ್ರ ಬಿಲ್ಲವ ಭವನಕ್ಕೆ ಭೇಟಿ ನೀಡುತ್ತಿದ್ದೆ. ಭವನದಲ್ಲಿ ಯಾವುದೇ ಕಾರ್ಯಕ್ರಮವಿರಲಿ ಜಯ ಸುವರ್ಣರ ಉಪಸ್ಥಿತಿಯಿರುತ್ತಿತ್ತು. ಪ್ರತಿಯೊಬ್ಬರೂ ಅವರಿಗೆ ತೋರುವ ಪ್ರೀತಿ ಗೌರವಗಳು ಮತ್ತು ಮಾಡುವ ಸನ್ಮಾನಗಳನ್ನು ದೂರದಿಂದಲೇ ಕುತೂಹಲದಿಂದ ನೋಡುತ್ತಿದ್ದೆ. ಎಲ್ಲ ಸಮಾಜ ಬಾಂಧವರೊಂದಿಗೆ ಅವರಿಗಿರುವ ಆಪ್ತತೆ ನನ್ನಲ್ಲಿ ಬೆರಗು ಮೂಡಿಸುತ್ತಿತ್ತು.

2013ರಲ್ಲಿ  ಬಿಲ್ಲವ ಭವನದಲ್ಲಿ ಆಟಿಡೊಂಜಿ ಕೂಟ  ಕಾರ್ಯಕ್ರಮಕ್ಕೆ ನನ್ನನ್ನು ಮುಖ್ಯ ಅತಿಥಿಯಾಗಿ  ಅಹ್ವಾನಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯ ಸುವರ್ಣರು ವಹಿಸಿಕೊಂಡಿದ್ದರು. ಅಂದು 4:30ಕ್ಕೆ ಆರಂಭವಾಗಬೇಕಿದ್ದ ಕಾರ್ಯಕ್ರಮ ಸುವರ್ಣರ ಅನುಪಸ್ಥಿತಿಯಿಂದ ವಿಳಂಭವಾಗಿತ್ತು. ಜಯ ಸುವರ್ಣರು ಬಂದಾಗ ಅಲ್ಲಿ ನೆರೆದವರೆಲ್ಲ  ಕಿಂಚಿತ್ತೂ ಬೇಸರಿಸದೆ ಖುಷಿಯಿಂದ ಬರಮಾಡಿಕೊಂಡ ರೀತಿ … ಎಲ್ಲವನ್ನೂ ಎಲ್ಲರನ್ನೂ  ಕುತೂಹಲದಿಂದ ಗಮನಿಸುತ್ತಿದ್ದೆ. ಜನ ಸಾಮಾನ್ಯರೆಲ್ಲರಿಗೂ ಇವರ ಮೇಲೆ ಯಾಕಿಷ್ಟು ಅಪಾರ ಪ್ರೀತಿ ಭಕ್ತಿ…ಇವೆಲ್ಲವೂ ಕಾಣುತ್ತಿದ್ದ ನನಗೆ ಸೋಜಿಗವೆನಿಸುತ್ತಿತ್ತು.

ಜಯ ಸುವರ್ಣರ ಕುರಿತು ನನ್ನ ಮನಸಲ್ಲಿ  ಸುಪ್ತ ವಾಗಿದ್ದ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದ್ದು ಅವರ  ಕುರಿತು ಆಳವಾದ ಅಧ್ಯಯನವನ್ನು ಕೈಗೊಂಡ ಮೇಲೆಯೇ. ಬಿಲ್ಲವ ಸಮಾಜಕ್ಕೆ ಆಧಾರ ಸ್ತಂಭವಾಗಿ ನಿಂತು, ಹಿರಿಯರು ಕಂಡ ಕನಸಿನ ಗಂಟನ್ನು ಹೆಗಲಲ್ಲಿ ಹೊತ್ತು,  ಸರ್ವ ಸಮಾಜದ ಬಾಂಧವರೊಡನೆ ಸಮಾನವಾಗಿ ಬೆರೆತು, ಸಮಾಜದ ಏಳಿಗೆಗೆ ಅನವರತ ದುಡಿದು  ಸಮಾಜವನ್ನು ಮೇರೆತ್ತರಕ್ಕೆ ಕೊಂಡೊಯ್ದ ಮಹಾನ್ ಚೇತನ ಜಯ ಸುವರ್ಣರು. ಇವರ ಜೀವನ ಸಾಧನೆಯ ಕುರಿತು ದಾಖಲಿಸುವ ಅವಕಾಶ ದೊರಕಿದ್ದು ನನ್ನ ಭಾಗ್ಯ. ಸುವರ್ಣರ ಜೀವಿತಾವಧಿಯವರೆಗೆ ಅವರ  ಜೊತೆಗೆ ಒಡನಾಟದ ಸೌಭಾಗ್ಯವನ್ನು ಪಡೆದ ನೂರಾರು  ಪುಣ್ಯವಂತರನ್ನು ಭೇಟಿ ಮಾಡಿ ಜಯ ಸುವರ್ಣರನ್ನು ಅವರು ಬದುಕಿದ ರೀತಿಯನ್ನು ಅರಿತು ಅರಗಿಸಿಕೊಂಡವಳು ನಾನು.

ಸುವರ್ಣರ ಕುರಿತು ಬರೆಯುವಾಗ ಅವರ ಮಹಾನ್ ವ್ಯಕ್ತಿತ್ವದ ಕತೆಯನ್ನು ಪ್ರತಿದಿನ ನನ್ನ ಮಗಳಿಗೆ ಹೇಳುತ್ತಿದ್ದೆ. ಎಲ್ಲವನ್ನೂ ಹೇಳಿ ಮುಗಿಸಿದ ಮೇಲೆ, ಅವಳು, “ಅಮ್ಮ ಅವರಿರುವಾಗಲೇ ನೀನು ಈ ಕೃತಿಯನ್ನು ಬರೆದಿದ್ದರೆ ಅವರ ತ್ಯಾಗಮಯ ಜೀವನಕ್ಕೆ ಎಷ್ಟು ಧನ್ಯತಾಭಾವ ಸಿಗುತ್ತಿತ್ತು. ಅವರಿಗೆ ಎಷ್ಟೊಂದು ಖುಷಿಯಾಗುತ್ತಿತ್ತು ಅಲ್ಲವೇ” ಎಂದು ಹೇಳಿದಾಗ ನಾನಂದು ಉತ್ತರಿಸಲಾಗದೆ ಭಾವುಕಳಾಗಿದ್ದೆ.

ನಿಜ ಅವರ ತ್ಯಾಗಮಯ ಜೀವನವನ್ನು ನಾವೆಷ್ಟು ಅರ್ಥಮಾಡಿಕೊಂಡಿದ್ದೇವೆ? ಅವರ ಆದರ್ಶಗಳನ್ನು ನಾವೆಷ್ಟು ಪಾಲಿಸುತ್ತಿದ್ದೇವೆ ಅನ್ನುವ ಪ್ರಶ್ನೆಗಳು ನನ್ನನ್ನು ಆಗಾಗ ಕಾಡುತ್ತಿರುತ್ತವೆ.

ಒಬ್ಬ ವ್ಯಕ್ತಿಗೆ ನಾವು ನಿಷ್ಠರಾಗಿದ್ದರೆ ಆ ವ್ಯಕ್ತಿ ಬದುಕಿದ್ದಾಗ ಮಾತ್ರವಲ್ಲ ಅವರು ಗತಿಸಿದ ಮೇಲೂ ಅವರನ್ನು ಗೌರವಿಸಬೇಕು ಅವರ ಸೇವೆಯನ್ನು ನೆನಪಿಟ್ಟುಕೊಂಡು ಮುನ್ನಡೆಯಬೇಕು. ಆಗ ಮಾತ್ರ ಮನುಷ್ಯತ್ವ ಎಂಬ ಪದಕ್ಕೆ ನಿಜವಾದ ಅರ್ಥ ಸಿಗಬಲ್ಲದು.

ಜಯ ಸುವರ್ಣರ ಕುರಿತು ಬರೆದ ಸುವರ್ಣಯುಗ ಕೃತಿಯನ್ನು ಈಗಾಗಲೇ ನೂರಾರು ಮಂದಿ ಹಿರಿಯ ಸಾಹಿತಿಗಳು ವಿಮರ್ಶಕರು ಸಹೃದಯ ಓದುಗರು ಓದಿ ಸಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಈ ಗ್ರಂಥವನ್ನು ಇಂಗ್ಲಿಷ್ ಗೆ ಭಾಷಾಂತರಿಸುತ್ತಿರುವ ಅನುವಾದಕರು, *ಈ ಕೃತಿಯನ್ನು ಪರ್ಸನಾಲಿಟಿ ಡೆವಲಪ್ಮೆಂಟ್ ಟ್ರೈನಿಂಗ್ ಗೆ ಟೆಕ್ಸ್ಟ್ ಮಾಡಬಹುದು. ತುಂಬ  ಉನ್ನತ ಮಟ್ಟದ ಸಾಧನೆ ಅವರದ್ದು. ಅವರ ಸಾಧನೆಗಳು ಈ ಕೃತಿಯಲ್ಲಿ ಎಳೆಎಳೆಯಾಗಿ ಅನಾವರಣಗೊಂಡಿವೆ.  ಇದೊಂದು ಸೃಜನಶೀಲ ಬರವಣಿಗೆ. ಈ ರೀತಿ ಬರೆಯುವುದು ಸುಲಭವಿಲ್ಲವೆಂದು ತಮ್ಮ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ಜಯ ಸುವರ್ಣರ ಮಹಾನ್ ವ್ಯಕ್ತಿತ್ವಕ್ಕೆ ನ್ಯಾಯ ಒದಗಿಸಬೇಕೆನ್ನುವ ನನ್ನ ಪ್ರಯತ್ನ  ಸುವರ್ಣಯುಗ ಕೃತಿಯ ಮೂಲಕ ಫಲನೀಡಿತೆಂಬ ಧನ್ಯತಾಭಾವ ನನಗಿದೆ. ಇಂದು ಅವರ 78ನೆಯ ಜನ್ಮದಿನ. ಮರುಜನ್ಮವೊಂದಿದ್ದರೆ ಅವರು ನಮ್ಮ ಸಮಾಜದಲ್ಲಿಯೇ ಹುಟ್ಟಿ ಬರಲಿ. ಅವರಂಥ ನಾಯಕತ್ವವಿದ್ದರೆ ಖಂಡಿತವಾಗಿಯೂ ಸಮಾಜದ ಸರ್ವತೋಮುಖ ಅಭಿವೃದ್ಧಿಯಾಗಲು ಸಾಧ್ಯ.

ಅನಿತಾ ಪೂಜಾರಿ ತಾಕೊಡೆ


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »