TOP STORIES:

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ


ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು, ಕಳೆದ ಎರಡು ದಶಕಗಳಿಂದ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳ ಉಳಿವಿಗಾಗಿ ಶ್ರಮಿಸುತ್ತಿದೆ.
ಸಂಘವು ಪ್ರತಿ ವರ್ಷ ದತ್ತಿನಿಧಿ ಪ್ರಶಸ್ತಿಯನ್ನು ಪ್ರಧಾನಿಸುತ್ತಿದ್ದು ಈ ಬಾರಿಯ ನ್ಯಾಯವಾದಿ ಮಹಮ್ಮದ್ ಇಬ್ರಾಹಿಂ ಪಾರ ಸ್ವರಣಾರ್ಥ, ನ್ಯಾಯವಾದಿ ಇಬ್ರಾಹಿಂ ಖಲೀಲ್ ಅರಿಮಲ ದುಬೈ ಅವರು ನೀಡುವ ದತ್ತಿನಿಧಿ ಪ್ರಶಸ್ತಿಗೆ ಮುಂಬಯಿಯ ಪ್ರಾಮಾಣಿಕ, ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರಧಾನ ಸಮಾರಂಭ ಜುಲೈ 13ರಂದು ಬೆಳ್ಳಿಗ್ಗೆ, ಕಾಸರಗೋಡು ಜಿಲ್ಲೆಯ ಸೀತಾಂಗೋಳಿ ಲಯನ್ಸ್ ಸಭಾಂಗಣದಲ್ಲಿ ನಡೆಯಲಿದೆ. ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ಯು. ಟಿ. ಖಾದರ್, ಕರ್ನಾಟಕ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ, ಉಪ ಸಭಾಪತಿ ಎಂ. ಕೆ. ಪ್ರಾಣೇಶ್, ಕರ್ನಾಟಕ ಮುಖ್ಯಮಂತ್ರಿಗಳ ಸಲಹೆಗಾರ ಕೆ ವಿ ಪ್ರಭಾಕರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾಸರಗೋಡು ಸಂಸದರಾದ ಮೋಹನ್ ಉಣ್ಣಿತ್ತಾನ್,ಕೇರಳ ಶಾಸಕ ಎನ್ ಎ ನೆಲ್ಲಿಕುನ್ನು ಮೊದಲಾದ ಗಣ್ಯರು ಪ್ರಶಸ್ತಿ ಪ್ರಧಾನಿಸಲಿರುವರು.
ಪ್ರಶಸ್ತಿಯು ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಹೊಂದಿರುತ್ತದೆ.

ನವೀನ್ ಕೆ. ಇನ್ನ, ಪರಿಚಯ ಮತ್ತು ಸಾಧನೆ.

ಕಳೆದ 33 ವರ್ಷಗಳಿಂದ ಮುಂಬಯಿ ಮಹಾನಗರದ ದೈನಿಕ ಕರ್ನಾಟಕ ಮಲ್ಲ ದಲ್ಲಿ ವರದಿಗಾರನಾಗಿ, ಛಾಯಾಚಿತ್ರಗ್ರಾಹಕನಾಗಿ, ಜಾಹಿರಾತು ಪ್ರತಿನಿಧಿಯಾಗಿ, ಕ್ರೀಡಾ ಅಂಕಣ ಕಾರನಾಗಿ ಕಾರ್ಯನಿರ್ವಹಿಸುತ್ತಿರುವ ನವೀನ್ ಕೆ.ಇನ್ನ ಅವರು
ಸಮಾಜಮುಖಿ ಸೇವೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸುವವರು. ಮುಂಬಯಿಯಲ್ಲಿ ಕನ್ನಡವನ್ನು ಗಟ್ಟಿಗೊಳಿಸುವಲ್ಲಿ ಶ್ರಮಿಸುತ್ತಾ ಬಂದವರಲ್ಲಿ ಪ್ರಮುಖ ಸಾಲಲ್ಲಿ ನಿಲ್ಲುವ ಅರ್ಹತೆ ಪಡೆದವರು ನವೀನ್ ಕೆ.ಇನ್ನ. ಪತ್ರಿಕೆ ಮುಖೇನ
ಸಾಮಾಜಿಕ ,ಶೈಕ್ಷಣಿಕ, ವೈದ್ಯಕೀಯ ಸೇವೆ, ಮುಂಬಯಿ ಮಹಾನಗರದ ಹೆಚ್ಚಿನ ವಿವಿಧ ಜಾತೀಯ, ಸಂಘಟನೆ, ಸಾಮಾಜಿಕ ಧಾರ್ಮಿಕ, ಶೈಕ್ಷಣಿಕ,ಕಲಾ ಸಂಸ್ಥೆಗಳೊಂದಿಗೆ ನಿಕಟ ಸಂಬಂಧವನ್ನು ಹೊಂದಿರುವವರು.

ತುಳುನಾಡ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಹ ಲೇಖನಗಳು ಅಲ್ಲದೆ ಮುಂಬಯಿ ಮಹಾನಗರದ ಹಾಗೂ ತುಳುನಾಡಿನ ನೂರಾರು ಧಾರ್ಮಿಕ ಕ್ಷೇತ್ರಗಳ ಪರಿಚಯ ಲೇಖನಗಳು ಕರ್ನಾಟಕ ಮಲ್ಲದಲ್ಲಿ ಪ್ರಸಾರಮಾಡಿದವರು. ‘

ಪತ್ರಕರ್ತನಾಗಿ ಸಾಧನೆಗಳು:


‘ಬೀದಿಯಲ್ಲಿ ಅಣಕು ನಾಟಕವಾಗುತ್ತಿರುವ ಭೂತಾರಾಧನೆ’ ಎಂಬ ಲೇಖನಕ್ಕೆ ಓದುಗರಿಂದ ಪ್ರಶಂಸೆ ಹಾಗೂ ಬೆಂಬಲ ವ್ಯಕ್ತ. ಈ ಲೇಖನದ ಬಗ್ಗೆ ನೂರಕ್ಕೂ ಹೆಚ್ಚು ಮಿಕ್ಕಿ ಪತ್ರಗಳು ಬಂದಿದ್ದು ತುಂಬಾ ಚರ್ಚೆಗೆ ಕಾರಣವಾಯಿತು. ದೈವ ದೇವರುಗಳ ಬಗ್ಗೆ ಅನನ್ಯ ನಂಬಿಕೆ, ಭಕ್ತಿ ವಿಶ್ವಾಸ. ಮುಂಬಯಿ ಮಹಾನಗರದಲ್ಲಿದ್ದು ಮನೆಯಿಂದ ತಪ್ಪಿಸಿಕೊಂಡಿದ್ದ ಮೂವರು ಎಳೆ ಪ್ರಾಯದ ಮಕ್ಕಳನ್ನು ಅವರವರ ಊರಿನ ಮನೆಗೆ ತಲುಪಿಸಿದ ತೃಪ್ತಿ.
ಸನ್ಮಾನ -ಪ್ರಶಸ್ತಿಗಳು- ಪತ್ರಕರ್ತರ ವೇದಿಕೆ(ರಿ) ಬೆಂಗಳೂರು ಉಡುಪಿ ಜಿಲ್ಲಾ ಘಟಕ ನೀಡುವ ರಾಜೇಶ ಶಿಬಾಜೆ ಗೌರವ.
ಇನ್ನ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಆಳ್ವಾಸ್ ನುಡಿಸಿರಿ ವಿರಾಸತ್ ಸನ್ಮಾನ.
ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇವರಿಂದ ಯಕ್ಷ ರಕ್ಷಾ ಕಲಾ ಪ್ರಶಸ್ತಿ,
ಕಲಾಜಗತ್ತು ಮುಂಬಯಿ ಇವರಿಂದ ತೌಳವ ಶ್ರೀ ಪ್ರಶಸ್ತಿ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ 12ನೇಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನ
ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿ ಇವರಿಂದ ಸನ್ಮಾನ
ಮುಂಬಯಿ ಮಹಾನಗರದ ಹಾಗೂ ನಾಡಿನ ಅನೇಕ ಧಾರ್ಮಿಕ ಸಾಮಾಜಿಕ ಸಂಸ್ಥೆಗಳಲ್ಲಿ‌ ಹಲವಾರು ಸನ್ಮಾನ, ಪ್ರಶಸ್ತಿಗಳು ಇವರ ಸಾಧನೆಗೆ ದೊರೆತಿವೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »