TOP STORIES:

ಸಹಸ್ರಾರು ಮಂದಿಯ ಹೃದಯ ದೇವತೆ ಲೀಲಾವತಿ ಜಯ ಸುವರ್ಣ


ಸ್ವಂತ ಮಕ್ಕಳನ್ನು ಹೆತ್ತು ತಾಯಿಯಾಗುವುದಕ್ಕಿಂತ, ಸಾಮಾಜಿಕವಾಗಿ ತಾಯಿಯಾದವರು ಎಲ್ಲ ತಾಯಿಯಂದಿರಿಗಿಂತ ಉನ್ನತ ಸ್ಥಾನದಲ್ಲಿ ನಿಲ್ಲುತ್ತಾರೆ. ಅಂಥ ವಿಶಾಲ ಹೃದಯಿ ಲೀಲಾವತಿ ಜಯ ಸುವರ್ಣರು. ಜಗತ್ತಿನ ಬಹುತೇಕ ಸಾಧಕರ ಸಾಧನೆಯಲ್ಲಿ ಅದೆಷ್ಟೋ ಮಹಿಳೆಯರ ತ್ಯಾಗವಿದೆ, ಸಹನೆಯಿದೆ, ಸಮರ್ಪಣೆಯಿದೆ, ಪ್ರೀತಿ ಪ್ರೋತ್ಸಾಹಗಳಿವೆ. ಬಿಲ್ಲವ ಸಮಾಜದ ಅಭಿವೃದ್ಧಿಯ ರೂವಾರಿ ಸನ್ಮಾನ್ಯ ಜಯ ಸಿ. ಸುವರ್ಣರ ಸಮಾಜಪರ ಕೆಲಸ ಕಾರ್ಯಗಳಿಗೆ ಶಕ್ತಿಯಾಗಿ ನಿಂತವರು ಲೀಲಾವತಿಯವರು. ಈ ದಂಪತಿ ಸಮಾಜ ಸೇವೆಯನ್ನು ದೇವರ ಸೇವೆಯೆಂದು ಭಾವಿಸಿ ಅನುಸರಿಸಿದವರು. ಪರರ ಒಳಿತಿನಲ್ಲಿಯೇ ಖುಷಿಯನ್ನು ಕಂಡವರು. ಭಾರತೀಯ ಪರಂಪರೆಯ “ಅತಿಥಿ ದೇವೋ ಭವ” ಎಂಬ ಘೋಷ ವಾಕ್ಯಕ್ಕೆ ತಕ್ಕಂತೆ ಅರ್ಥಪೂರ್ಣವಾಗಿ ಬಾಳಿದವರು. ಸಾಮಾಜಿಕ ಜವಾಬ್ದಾರಿಯನ್ನು ಜೀವನದುದ್ದಕ್ಕೂ ಸಮರ್ಥವಾಗಿ ನಿರ್ವಹಿಸಿದವರು. ಜಯ ಸುವರ್ಣರ ಜೀವನದಲ್ಲಿ ಲೀಲಾವತಿಯವರು ವರವಾಗಿಯೇ ಬಂದಿದ್ದಾರೆ ಎಂದರೆ ತಪ್ಪಾಗಲಾರದು.

ಲೀಲಾವತಿ ಜಯ ಸುವರ್ಣರು 1948ರಲ್ಲಿ ಜನಿಸಿದರು. ಪಡುಬಿದ್ರಿ ಪಡುಹಿತ್ಲು ದಿ.ಜಲಜ ಮತ್ತು ಗೋಪಾಲ ಸುವರ್ಣರ ಏಳು ಮಂದಿ ಮಕ್ಕಳಲ್ಲಿ ಇವರು ಮೂರನೆಯವರು. ಇವರು ಜಯ ಸುವರ್ಣರಿಗೆ ಅನುರೂಪದ ಬಾಳಸಂಗಾತಿ. ಪತಿಯನ್ನೇ ದೇವರು ಎಂದುಕೊಂಡು, ಅವರಿಗಿಂತ ಮಿಗಿಲಾದುದು ತನಗೇನು ಇಲ್ಲ! ಎಂಬಷ್ಟು ತಮ್ಮನ್ನು ಅರ್ಪಿಸಿಕೊಂಡಿದ್ದರು. ಸುವರ್ಣರ ಬಾಳಿನಲ್ಲಿ ಹೊಸದೊಂದು ಬದಲಾವಣೆಯನ್ನೂ ತಂದವರು. ತಮ್ಮ ಮನೆಗೆ ಬಂದು ಹೋಗುತ್ತಿದ್ದವರನ್ನೆಲ್ಲ ನಗುಮುಖದಿಂದ  ಸ್ವಾಗತಿಸುತ್ತಿದ್ದ ಇವರು ಸಹಸ್ರಾರು ಮಂದಿಗೆ ತಾಯಿಯಾದವರು. ಜಯ ಸುವರ್ಣರ ಕುಟುಂಬಕ್ಕೆ ಆಪ್ತರಾಗಿದ್ದವರು, ‘ಜಯ ಸುವರ್ಣರು ಹೇಗಿದ್ದರೋ ಅವರ ಪತ್ನಿ ಲೀಲಕ್ಕ ಕೂಡಾ ಹಾಗೆಯೇ. ನಮ್ಮನ್ನು ನಗುನಗುತ್ತ ಮಾತಾಡಿಸಿ ಪ್ರೀತಿಯಿಂದ ಉಪಚರಿಸುತ್ತಿದ್ದರು. ಮನೆಯಲ್ಲಿ ರೊಟ್ಟಿ, ಕಡುಬು, ಇಡ್ಲಿ ಅಥವಾ ಬೇರೇನೇ ತಿಂಡಿತಿನಿಸುಗಳಿರಲಿ, ಮನೆಗೆ ಬಂದವರಿಗೆಲ್ಲ ಪ್ರೀತಿಯಿಂದ ನೀಡುತ್ತಿದ್ದರು. ಹಾಗಾಗಿ ಆ ಮನೆಯು ನಮ್ಮದೇ ಮನೆ ಎಂಬಷ್ಟು ಆಪ್ತವಾಗುತ್ತಿತ್ತು. ಪರಕೀಯ ಭಾವವೆಂದೂ ಮೂಡಿದ್ದಿಲ್ಲ. ಅವರಲ್ಲೂ ಹಾಗೆಯೇ, ಯಾರೋ ಹೊರಗಿನವರು ಬಂದಿದ್ದಾರೆ ಅನ್ನುವ ಭಾವವೇ ಇರುತ್ತಿರಲಿಲ್ಲ’ ಎನ್ನುತ್ತಾರೆ. ಹೀಗೆ ಅದೆಷ್ಟೋ ವರ್ಷಗಳಿಂದ ಅನೇಕರ ಹೊಟ್ಟೆಯ ಹಸಿವನ್ನು ನೀಗಿಸುತ್ತಿದ್ದ ಮಹಾತಾಯಿ ಅವರಾಗಿದ್ದರು.

ಶ್ರೀಮಂತಿಕೆ ಇದ್ದರೂ ಮನೆಯಲ್ಲಿ ಯಾವಾಗಲೂ ಲೀಲಾವತಿಯವರದ್ದೇ ಕೈಯಡುಗೆ ಇರುತ್ತಿತ್ತು. ಕುಟುಂಬದ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುತ್ತ ಪತಿಯ ಕಾರ್ಯಗಳಿಗೆ ನೈತಿಕ ಪ್ರೋತ್ಸಾಹವನ್ನು ನೀಡಿದವರು. ತಮ್ಮ ಸುಖಮಯವಾದ ಜೀವನವು ಆ ದೇವರದೇ ಕೃಪೆ ಎನ್ನುತ್ತಿದ್ದರು. ಕೂಡು ಕುಟುಂಬದಲ್ಲಿ ಹುಟ್ಟಿ ಬೆಳೆದ ಮಹಿಳೆಯೊಬ್ಬಳು ಮುಂಬ¬ಯಂಥ ಆಧುನಿಕ ನಗರದಲ್ಲೂ ಅದಕ್ಕಿಂತ ಹೆಚ್ಚಿನ ಜವಾಬ್ದಾರಿಗಳನ್ನು ನಿಷ್ಠೆಯಿಂದ ನಿಭಾಯಿಸಿದ್ದನ್ನು ಗಮನಿಸುವಾಗ ಆ ಮಾತೆಯ ಬಗೆಗೆ ಗೌರವಾಭಿಮಾನಗಳು ಮೂಡುತ್ತವೆ.

ಜಯ ಸುವರ್ಣರು ‘ಬಿಲ್ಲವರ ಎಸೋಸಿಯೇಶನ್ ಮುಂಬಯಿ ’ ಇದರಲ್ಲಿ ಸಕ್ರಿಯರಾದ ಬಳಿಕ ತಮ್ಮ ಸಂಪೂರ್ಣ ಸಮಯವನ್ನು ಸಮಾಜಕ್ಕಾಗಿಯೇ ವಿನಿಯೋಗಿಸುತ್ತಿದ್ದರು. ಅವರು ಪ್ರತಿನಿತ್ಯ ಒಪ್ಪಿಕೊಂಡ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಎಷ್ಟು ತಡವಾಗಿ ಮನೆಗೆ ಬಂದರೂ ಲೀಲಾವತಿಯವರು ಮುನಿಸಿಕೊಂಡವರಲ್ಲ. ಬಿಲ್ಲವ ಸಮಾಜದ ಏಳಿಗೆಯ ಜೊತೆಗೆ ಜಾತಿ ಮತ ಭೇದವಿಲ್ಲದೆ ಅಶಕ್ತರನ್ನು ಪೋಷಿಸುವ ಸುವರ್ಣರ ನಿಲುವನ್ನು ತಾವೂ ಮೆಚ್ಚಿಕೊಂಡು ಜೊತೆಯಾದವರು. ಪತಿಯನ್ನೇ ಸರ್ವಸ್ವವೆಂದುಕೊಂಡು, ‘ಅವರಿಗಿಂತ ಮಿಗಿಲಾದುದು ತನಗೇನು ಇಲ್ಲ’ ಎಂಬಷ್ಟು ತಮ್ಮನ್ನು ಅರ್ಪಿಸಿಕೊಂಡಿದ್ದರು.  ಅವರಲ್ಲಿರುವ ಮುಗ್ಧತೆ, ಪ್ರಾಮಾಣಿಕತೆ ಹಾಗೂ ಅತಿಥಿಗಳನ್ನು ಸತ್ಕರಿಸುವ ಸದ್ಗುಣವನ್ನು ತಮ್ಮ ಜೀವಿತಾವಧಿಯವರೆಗೂ ಉಳಿಸಿಕೊಂಡಿದ್ದರು. ಮದುವೆಯಾದ ಮೇಲೆ ಒಂದು ದಿನವೂ ಸುವರ್ಣರನ್ನು ಬಿಟ್ಟಿದ್ದು ಅಭ್ಯಾಸವಿರದ ಲೀಲಾವತಿಯವರಿಗೆ ಪತಿಯ ಅಗಲಿಕೆ ತೀರ ನೋವು ತಂದಿತ್ತು. ಇವರು 2023ರ ಜುಲೈ ಒಂದರಂದು ಅಲ್ಪಕಾಲದ ಅನಾರೋಗ್ಯದಿಂದ ತೀರಿಕೊಂಡರು. ‘ಅವರು ತಾಯಿ ಸಮಾನರು. ಅವರ ಕೈತುತ್ತು ತಿಂದವರು ನಾವು’ ಎಂದು ಲೀಲಾವತಿಯವರನ್ನು ಅದೆಷ್ಟೋ ಮಂದಿ ಇಂದಿಗೂ ಸ್ಮರಿಸಿಕೊಳ್ಳುತ್ತಾರೆ.

ಲೀಲಕ್ಕ ಹಳ್ಳಿಯ ಸಂಪ್ರದಾಯಸ್ಥ ಕುಟುಂಬದಿಂದ ಬಂದವರಾದುದರಿಂದ ನಗರದಲ್ಲಿಯೂ ಅದೇ ಸಂಸ್ಕಾರಯುತ ಜೀವನವನ್ನೇ ಆದರಿಸಿದರು. ಕುಟುಂಬವೇ ತನ್ನ ಪ್ರಪಂಚವೆಂದು ಭಾವಿಸಿ, ಅದರ ಖುಷಿಯಲ್ಲಿಯೇ ತನ್ನ ಆನಂದವನ್ನು ಕಾಣುತ್ತ ಜೀವಿಸಿದರು. ಹೊಟೇಲು ಉದ್ಯಮದ ಕೆಲಸಗಾರರನ್ನೂ ತಮ್ಮ ಮನೆಮಂದಿಯಂತೆಯೇ ಉಪಚರಿಸುವ ಉದಾರ ಮನೋಭಾವ ಲೀಲಾವತಿವರದ್ದಾಗಿತ್ತು. ಓರ್ವ ಆದರ್ಶ ಗ್ರಹಿಣಿಯಾಗಿ, ಹಳ್ಳಿಯ ಸಂಸ್ಕಾರವನ್ನೇ ಅನುಸರಿಸಿಕೊಂಡು ಬದುಕಿದ್ದು ಅವರ ಹಿರಿತನ. ಹಿರಿಯರಿಂದ ನಮಗೆ ಬಂದಿರುವುದನ್ನು ನಮ್ಮ ಮುಂದಿನ ಪೀಳಿಗೆಗೆ ದಾಟಿಸಿದಲ್ಲಿ ಮಾತ್ರ ಅದೇ ಸಂಸ್ಕಾರ ಮುಂದುವರಿಯಲು ಸಾಧ್ಯವಾಗುತ್ತದೆ. ಮಕ್ಕಳಾದ ಸೂರ್ಯಕಾಂತ್, ಸುಭಾಶ್ ದಿನೇಶ್, ಯೋಗೇಶ್ ಹೀಗೆ ನಾಲ್ಕು ಮಂದಿ ಗಂಡು ಮಕ್ಕಳಿಗೂ ಒಳ್ಳೆಯ ಸಂಸ್ಕಾರವನ್ನು ನೀಡಿ ಬೆಳೆಸಿದ್ದಾರೆ. ಈ ಮೂಲಕ ಇಡೀ ಮಾತೃ ವರ್ಗಕ್ಕೆ ಲೀಲಾವತಿಯವರು ಆದರ್ಶ ಮಾತೆಯಾಗಿದ್ದಾರೆ. ಸಹಸ್ರಾರು ಮಂದಿಯ ಹೃದಯದೇವತೆಯಾಗಿದ್ದಾರೆ.

✍🏻 ಅನಿತಾ ಪಿ.ತಾಕೊಡೆ


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »