TOP STORIES:

ಆಷಾಢ ಮಾಸಕ್ಕೆ ಗಂಡ ಹೆಂಡತಿ ಒಟ್ಟಿಗೆ ಇರುವಂತಿಲ್ಲ ಯಾಕೆ?


ಆಷಾಢ ಮಾಸವನ್ನು ಅಶುಭವೆಂದೇ ಪರಿಗಣಿಸಲಾಗುತ್ತದೆ. ಹೀಗಾಗಿ ಈ ಮಾಸದಲ್ಲಿ ಶುಭ ಕಾರ್ಯಗಳು ನಡೆಯುವುದಿಲ್ಲ. ಅದಲ್ಲದೇ, ಹೊಸದಾಗಿ ಮದುವೆಯಾದ ದಂಪತಿಗಳಿಬ್ಬರೂ ಪರಸ್ಪರ ದೂರವಿರಬೇಕಾದ ಕಾರಣ ಹೆಣ್ಣು ಮಕ್ಕಳು ಗಂಡನ ಮನೆಯಿಂದ ತವರು ಮನೆಗೆ ತೆರಳುತ್ತಾರೆ. ಹಾಗಾದ್ರೆ ಈ ಆಚರಣೆಯ ಹಿಂದಿರುವ ಕಾರಣವೇನು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಿಂದೂ ಧರ್ಮದ ಚಾಂದ್ರಮಾನ ಪಂಚಾಂಗದ ನಾಲ್ಕನೇ ಮಾಸ ಈ ‘ಆಷಾಢ’. ದಕ್ಷಿಣಾಯಣದ ಪರ್ವ ಕಾಲದಲ್ಲಿ ಜೇಷ್ಠ ಮಾಸದ ಅಮವಾಸ್ಯೆಯ ಮರುದಿನವಾದ ಪಾಡ್ಯ ತಿಥಿಯಿಂದ ಆಷಾಢ ಮಾಸ ಆರಂಭವಾಗುತ್ತದೆ. ಈ ವರ್ಷ ಆಷಾಢ ಮಾಸವು ಜುಲೈ 6 ರಂದು ಪ್ರಾರಂಭವಾಗಿ ಆಗಸ್ಟ್ 4 ರಂದು ಕೊನೆಗೊಳ್ಳುತ್ತದೆ. ಈ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. ಆಂಧ್ರ ಪ್ರದೇಶದಲ್ಲಿ ಆಷಾಢ ಮಾಸದಲ್ಲಿ ಅತ್ತೆ-ಸೊಸೆ ಕೂಡ ಜೊತೆಯಾಗಿರಬಾರದು ಎನ್ನಲಾಗುತ್ತದೆ

ಆಷಾಢ ಮಾಸದಲ್ಲಿ ನವವಿವಾಹಿತರು ದೂರವಿರಬೇಕು ಎನ್ನುವ ಕಾರಣ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. ಈ ಸಮಯದಲ್ಲಿ ಗಂಡ ಹೆಂಡತಿ ಸೇರಿ ಹೆಣ್ಣು ಗರ್ಭವತಿಯಾದರೆ, ಚೈತ್ರ ಮಾಸದಲ್ಲಿ ಮಗುವಿಗೆ ಜನ್ಮ ನೀಡಬಹುದು. ಈ ಏಪ್ರಿಲ್ ತಿಂಗಳಿನಲ್ಲಿ ಉಷ್ಣಾಂಶ ಹೆಚ್ಚಾಗಿರುತ್ತದೆ. ಇದರಿಂದ ತಾಯಿ ಹಾಗೂ ಮಗುವಿಗೆ ಆರೋಗ್ಯ ಸಮಸ್ಯೆಗಳು ಕಾಡಬಹುದು ಎನ್ನುವ ವೈಜ್ಞಾನಿಕ ಕಾರಣವು ಇದೆ.

ಅಷ್ಟೇ ಅಲ್ಲದೇ ಈ ಆಷಾಢ ತಿಂಗಳಿನಲ್ಲಿ ರೈತಾಪಿ ವರ್ಗಕ್ಕೆ ಕೆಲಸಗಳು ಸ್ವಲ್ಪ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ಹೊಸದಾಗಿ ಮದುವೆಯಾದ ಜೋಡಿಗಳು ಜೊತೆಗಿದ್ದರೆ, ಪತಿಯು ಪತ್ನಿಯ ಜೊತೆಗೆ ಸಮಯ ಕಳೆಯಬಹುದು. ಹೀಗಾದಾಗ ಕೃಷಿ ಕೆಲಸಗಳು ಪೂರ್ಣಗೊಳ್ಳದೇ ಇರಬಹುದು. ಆತನು ಸಂಪೂರ್ಣವಾಗಿ ಕೆಲಸದಲ್ಲಿ ತೊಡಗಿಕೊಳ್ಳಲಿ ಎನ್ನುವ ಕಾರಣಕ್ಕೆ ಆಷಾಢದಲ್ಲಿ ತವರಿಗೆ ಹೆಣ್ಣು ಮಕ್ಕಳನ್ನು ಕಳುಹಿಸಿಕೊಡುತ್ತಾರೆ.

ದೂರವಿರುವ ಅತ್ತೆ ಸೊಸೆ ನಡುವೆ ಪ್ರೀತಿ ಹೆಚ್ಚುತ್ತೆ

ಇನ್ನೊಂದು ನಂಬಿಕೆಯ ಪ್ರಕಾರ ಆಷಾಢ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ತನ್ನ ಅತ್ತೆಯೊಂದಿಗಿದ್ದರೆ ಜಗಳಗಳು ಉಂಟಾಗುತ್ತದೆ. ಹೀಗಾಗಿ ಸೊಸೆಯನ್ನು ಒಂದು ತಿಂಗಳ ಕಾಲ ತವರು ಮನೆಗೆ ಕಳುಹಿಸಲಾಗುತ್ತದೆ. ಇಬ್ಬರೂ ದೂರವಿದ್ದರೆ ಅತ್ತೆ ಸೊಸೆಯ ನಡುವೆ ಪ್ರೀತಿ ಕಾಳಜಿಯು ಹೆಚ್ಚುತ್ತದೆ. ಅದಲ್ಲದೇ ತಾಯಿ ಮಗಳು ಸಂಬಂಧವು ಗಟ್ಟಿಯಾಗುತ್ತದೆ ಎನ್ನಲಾಗಿದೆ.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »