TOP STORIES:

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು.

ಅಂದು ನಾಡು ನುಡಿ ಕಲೆ ಮತ್ತು. ಸಂಸ್ಕ್ರತಿಗಳ ನವಿರುತನಕ್ಕೆ ಹಾಗು ಸಂಘಟನ ಕ್ಷೇತ್ರಕ್ಕೆ ಸಲ್ಲಿಸಿದ ಅನುಪಮ ಕೊಡುಗೆಯನ್ನು ಪರಿಗಣಿಸಿ “ನವ ಕರ್ನಾಟಕ ರತ್ನ “ ಪ್ರಶಸ್ತಿ ಗೌರವ ಪುರಸ್ಕಾರವನ್ನು ಸತೀಶ್ ಕುಮಾರ್ ಬಜಾಲ್ ಗೆ ಪ್ರಾಧಾನ ಮಾಡಲಿದ್ದಾರೆ.

ಸೌದಿ ಅರೇಬಿಯಾದ ದಮ್ಮಮ್ ನಲ್ಲಿ 24*7 ಲಭ್ಯವಾಗುವ , ಆಶಕ್ತರ ಪಾಲಿಗೆ ಆಸರೆಯಾಗುವ ಏಕೈಕ ವ್ಯಕ್ತಿ -ಸದಾ ಸಮಾಜ ಸೇವೆಗೆ ತನ್ನನ್ನು ತಾನು ತೊಡಗಿಸಿಕೊಂಡಿರುವವರು. ಅರಬ್ ರಾಷ್ಟ್ರ ಗಳಲ್ಲಿ ತೊಂದರೆಗೆ ಸಿಲುಕಿದ ಅನಿವಾಸಿ ಭಾರತೀಯರಿಗೆ ಮಿಡಿಯುವ ಹೃದಯ , ಅನಾರೋಗ್ಯ ಪೀಡಿತ ಅಸಹಾಕರಿಗೆ ಚಿಕಿತ್ಸೆ ಗೆ ಸ್ಪಂದಿಸುವ , ಪ್ರತಿಭಾನ್ವಿತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹಿಸಿ ಜಾತಿ ಮತ ಭೇದವಿಲ್ಲದೆ ಸ್ಪಂದಿಸುವ ಮೂಲಕ ಜನಮನ ಗೆದ್ದಿದಾರೆ .

ಇತ್ತೀಚೆಗೆ ಯುವಕ ಮಂಡಲದ ಮೂಲಕ ತನ್ನ ಹುಟ್ಟೂರಿಗೆ ಉಚಿತವಾಗಿ ಅಂಬುಲೆನ್ಸ್ ವ್ಯವಸ್ಥೆಯನ್ನು ಮಾಡುವಲ್ಲಿ ಮಹತ್ತರ ಪಾತ್ರವನ್ನು ವಹಿಸಿರುತ್ತೀರಿ.

ಸೌದಿ ಅರೇಬಿಯಾ ದಮ್ಮಾಮ್ ನಲ್ಲಿ ಇತಿಹಾಸ ಸ್ರಷ್ಠಿಸಿದ 17 ನೇ ವಿಶ್ವ ಕನ್ನಡ ಸಮ್ಮೇಳನ ವನ್ನು ಆಯೋಜಿಸಿ ನಮ್ಮ ಜಿಲ್ಲೆ ಹಾಗೂ ರಾಜ್ಯದ ಸಂಸ್ಕತಿಯನ್ನು , ಕಲೆಯನ್ನು ಪಸರಿಸಿದ ಹಾಗೂ ಅದರ ಸ್ವಾಗತ ಸಮಿತಿ ಅದ್ಯಕ್ಷರಾಗಿ ಯಶಸ್ವಿಗೊಳಿಸಿದ ಕೀರ್ತಿ ಅವರದ್ದು. ಅಂದು ಕಾರ್ಯಕ್ರಮದಲ್ಲಿ ಅವರನ್ನು “ವಿಶ್ವ ಮಾನ್ಯ” ಪ್ರಶಸ್ತಿ 2024 (Global Man 2024 Award ). ಪುರಸ್ಕಾರ ನೀಡಿ ವಿಶ್ವ ಕನ್ನಡ ಸಂಸ್ಕತಿ ಸಂಸ್ಥೆ ಯು , ಸಮ್ಮೇಳನದಲ್ಲಿ ಗೌರವಿಸಲಾಯಿತು .ಸೌದಿ ಅರೇಬಿಯಾದ ಇತಿಹಾಸದಲ್ಲಿ ಪ್ರಥಮ ಭಾರಿಗೆ ತುಳು ಚಲನಚಿತ್ರ ಬಿಡುಗಡೆ ಮತ್ತು ಪ್ರೀಮಿಯರ್ ಶೋ. ಮಾಡಿ ಚರಿತ್ರೆ ನಿರ್ಮಿಸಿದ್ದೀರಿ. ಸೌದಿ ಹವ್ಯಾಸಿ ಕಲಾವಿದರನ್ನು ಒಟ್ಟುಸೆೇರಿಸಿ ಬಹರೇನಲ್ಲಿ ಕನ್ನಡ ಸಂಘ ಬಹರೇನ್ ಇದರ ಸಹಕಾರದೋಂದಿಗೆ ಸಂಪೂರ್ಣ ದೇವಿ ಮಹಾತ್ಮೆ ,/ಅಸುರ ವಧೆ ಯಕ್ಷಗಾನ ಪ್ರದರ್ಶನ ಮಾಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದಲ್ಲದೆ ತಾನೂ ಕೈಟಪ ಪಾತ್ರ ಮಾಡಿ ಎಲ್ಲರ ಮೆಚ್ಚುಗೆ ಗಳಿಸಿದ್ದಿರಿ. ಸೌದಿ ಅರೇಬಿಯಾದಲ್ಲಿ ಕನ್ನಡ, ತುಳು ಸಂಸ್ಕೃತಿಯನ್ನು ಉತ್ತೇಜಿಸುವುದರ ಮೂಲಕ ಜನಮನ ಗೆದ್ದಿರುತ್ತೀರಿ.

ಸಮಾಜ ಸೇವೆ ಹಾಗೂ ಸಾಂಸ್ಕೃತಿಕ ರಂಗಕ್ಕೆನಿೇಡಿದ ಸೇವೆಯನ್ನು ಗುರುತಿಸಿ 2024 ರ ಸಾಲಿನ 49 ನೇಯ ವಾರ್ಷಿಕ ‘ಆರ್ಯಭಟ ಅಂತರ್ ರಾಷ್ಟ್ರೀಯ ಪುರಸ್ಕಾರವನ್ನು ನೀಡಿ ಗೌರವಿಸಿದರು.

ಮಂಗಳೂರು ಅಸೋಸಿಯೇಶನ್ ಸೌದಿ ಅರೇಬಿಯಾ ( MASA) ಮಾಜಿ ಅಧ್ಯಕ್ಷರು. Kudla Adventure Cultural Foundation Dammam (KAD)- ಪ್ರದಾನ ಸ್ಥಾಪಕರು. ಅಧ್ಯಕ್ಷರು : ಕರಾವಳಿ ಮಾಣಿಕ್ಯ ಸೇವ ಸಂಸ್ಥೆ (Regd.) ಮಂಗಳೂರು. ಮಾಜಿ ಪ್ರಧಾನ ಕಾರ್ಯದರ್ಶಿ : ಹವ್ಯಾಸಿ ಕಲಾವಿದರು , ದಮ್ಮಾಮ್. ಹಾಗು ಹಲವು ಸಂಘ ಸಂಸ್ಥೆಗಳ ಮಾರ್ಗದರ್ಶಕರು.

ಸಮಾಜ ಸೇವೆ ಮತ್ತು ಕೋರೋನ ಸಮಯದಲ್ಲಿ ಮಾಡಿದ ಸೇವೆಗೆ ಬಿಲ್ಲವ ಅಸೋಸಿಯೇಷನ್ Saudi Arabia Riyad – ‘ಅಪದ್ಬಾಂದವ ‘ ಬಿರುದನ್ನು 2021 ರಂದು ನೀಡಿ ಗೌರವಿಸಿದೆ.

‘MASA MAN OF THE YEAR’ ( ವರ್ಷದ ವ್ಯಕ್ತಿ- 2019 ) ಪ್ರಶಸ್ತಿ, , Corona Warrior: (ಕೋರೊನ ವಾರಿಯರ್)2021 & 22 . ಪ್ರಶಸ್ತಿಯನ್ನು – ಮಂಗಳೂರು ಅಸೋಸಿಯೇಶನ್ ಸೌದಿ ಅರೇಬಿಯಾ. Regd. ದಮ್ಮಾಮ್ ನಿೇಡಿ ಗೌರವಿಸಿದೆ.

ಸತೀಶ್ ಅಂಚನ್ ಅವರು ಅಸಂಖ್ಯಾತ ಆರ್ಥಿಕ ಬಡ ಕುಟುಂಬಗಳಿಗೆ ಸಹಾಯ ಹಸ್ತ ನೀಡಿದವರು. ಚಂದ್ರಶೇಖರ ಕುಂದರ್ ಕೊಡಿಯಾಲ್ ಬೈಲ್ ಮತ್ತು ಶಾರದ ಅಂಚನ್ ದಂಪತಿಗಳ ಪುತ್ರನಾದ ಸತೀಶ್ ಅಂಚನ್ ಅವರು ಮೂಲತಃ ಪಕ್ಕಲಡ್ಕ ಬಜಾಲ್ ನ ಕಂಕನಾಡಿಯವರು. ಚಂದ್ರಶೇಖರ ಕುಂದರ್ ದಂಪತಿಗಳ ಮೂವರು ಗಂಡು ಮಕ್ಕಳಲ್ಲಿ ಸತೀಶ್  ಕುಮಾರ್ ಅಂಚನ್ ಕಿರಿಯಾವರಾಗಿದ್ದು ಕೇವಲ ಮೂರು ವರ್ಷದವರಾಗಿದ್ದಾಗ ತಮ್ಮ ತಾಯಿಯನ್ನು ಕಳೆದುಕೊಂಡರು. ನಂತರ ಸತೀಶ್ ಅವರು ಅಜ್ಜಿ ಮತ್ತು ಚಿಕ್ಕಪ್ಪ ರಾಘವ ಅಂಚನ್ ಅವರ ಆರೈಕೆಯಲ್ಲಿ ಬೆಳೆದರು.

ಸತೀಶ್ ಅಂಚನ್ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಬಜಾಲ್‌ನ ಸೈಂಟ್ ಜೋಸೆಫ್ ಹೈಯರ್ ಪ್ರೈಮರಿ ಶಾಲೆಯಲ್ಲಿ ಪೂರ್ಣಗೊಳಿಸಿ ಮಾಧ್ಯಮಿಕ ಶಿಕ್ಷಣವನ್ನು ರೊಸಾರಿಯೊ ಹೈಸ್ಕೂಲ್‌ ನಲ್ಲಿ ಮಾಡಿದರು. ಬಳಿಕ ಪಿಯುಸಿ ಶಿಕ್ಷಣವನ್ನು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಮತ್ತು ಪದವಿಯನ್ನು ಸೈಂಟ್ ಅಲೋಶಿಯಸ್ ಈವಿನಿಂಗ್ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದಾರೆ.


Related Posts

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »