TOP STORIES:

ಗೆಜ್ಜೆಗಿರಿ ನಂದನ ಬಿತ್ತಿಲಿನ ಆನುವಂಶಿಕ ಮೊಕ್ತೇಸರರಾದ, ಹಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ ಅವರಿಗೆ ಕರ್ನಾಟಕ ಜಾನಪದ ಪ್ರಶಸ್ತಿ..


ಪುತ್ತೂರು, ನ. 4 : ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯ, ದೇಯಿಬೈದೇತಿ ಮೂಲಸ್ಥಾನ ಗೆಜ್ಜೆಗಿರಿ ನಂದನಬಿತ್ತಿಲು ನಿವಾಸಿ ನಾಟಿವೈದ್ಯೆ ಲೀಲಾವತಿ ಬೈದೇತಿ (77) ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪಡುಮಲೆಯಲ್ಲಿನ ಪ್ರತಿ ಮರ-ಗಿಡ-ಬಳ್ಳಿಗಳಲ್ಲಿ ಸಂಜೀವಿನಿಯಂತಹ ಔಷಧೀಯ ದೃವ್ಯಗುಣಗಳಿವೆ ಎಂಬ ನಂಬಿಕೆ ಇದೆ. ಈ ಪರಿಸರದ ಲೀಲಾವತಿ ನಾಟಿ ವೈದ್ಯರಾಗಿ ಚಿರಪರಿಚಿತರು.

ಸಾವಿರಾರು ಮಂದಿಯ ಬದುಕಿನಲ್ಲಿ ಅಶಾ ಕಿರಣ ಮೂಡಿಸಿರುವುದರೊಂದಿಗೆ ನಾಟಿ

ವೈದ್ಯವನ್ನು ಸೇವಾ ಯಜ್ಞದಂತೆ ನಡೆಸಿಕೊಂಡು ಬರುತ್ತಿದ್ದಾರೆ. ಮುಖ್ಯವಾಗಿ ಸರ್ಪಸುತ್ತು, ಕೆಂಪು, ದೃಷ್ಟಿ, ಬೆಸುರುಪು, ಸೊರಿಯಾಸಿಸ್-ಚರ್ಮ ರೋಗವನ್ನೂ ಪರಿಹರಿಸುವ ಚಿಕಿತ್ಸೆ ನೀಡುವಲ್ಲಿ ಪ್ರಖ್ಯಾತರು.

ಮಕ್ಕಳ ಚಿಕಿತ್ಸೆ, ಸಂಧಿವಾತ, ನೋವಿನ ತೈಲ ಅಲ್ಲದೆ ಇವರು ತಯಾರಿಸಿ ಕೊಡುವ ದೇಸೀ ಔಷಧಗಳಿಗೆ ಮತ್ತು ಕೇಶಕಾಂತಿ ತೈಲ, ದೇಯಿ-ಬೈದ್ಯೆತಿ ತೈಲಕ್ಕೆ ಹಲವಾರು ರಾಜ್ಯದಿಂದ ಬೇಡಿಕೆಗಳಿವೆ.

2016 ರಲ್ಲಿ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆದ ಮಹಿಳಾ ಸಮಾಗಮ ಸಂದರ್ಭದಲಿ ಸಮ್ಮಾನ ಪುರಸ್ಕಾರ ಸಂದಿದೆ. ಕೋಟಿ-ಚೆನ್ನಯ, ದೇಯಿ ಬೈದೇತಿ ಮೂಲಸ್ಥಾನ ಗೆಜ್ಜೆಗಿರಿಯಯ ನಂದನಬಿತ್ತಿಲಿನಲ್ಲಿ ನಾಟಿ ವೈದ್ಯ ಪದ್ಧತಿಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

ಕುಟುಂಬದ ಹೆಸರಿನಲ್ಲಿ ‘ವೈದ್ಯೆ’ ಎನ್ನುವ ವಿಶೇಷಣವನ್ನು ಪಡುಮಲೆಯ ಬಲ್ಲಾಳರಿಂದ ಪಡೆದ ಸಾರ್ಥಕತೆಯ ಗೌರವ. ದೇಯಿಬೈದ್ಯೆದಿ ಬಳಸುವ ಮದ್ದಿನಗಿಂಡಿಯಲ್ಲಿ ಔಷಧ ನೀಡುವ ಇಂದಿಗೂ ಸರ್ಪರೊಗಗಳಿಗೆ ಮದ್ದನ್ನು ಮಾಡುವ ಇವರ ಕೈಗುಣದ ಬಗ್ಗೆ ಜನರಿಗೆ ಅಪಾರ ಭಕ್ತಿ, ಶ್ರದ್ಧೆ ಮತು ಗೌರವದ ವಿಶ್ವಾಸ. ಸಾವಿರಾರು ಮಂದಿಯ ಬದುಕಿನ ಸಂಕಟವನ್ನು ದೂರಮಾಡುತ್ತಿರುವ ಸಂಜೀವಿನಿ ಸಸ್ಯೌಷಧ ಜ್ಞಾನ ಪರಂಪರೆಯಿಂದ ಸಂರಕ್ಷಿಸಿಕೊಂಡು ಬಂದಿರುವ ಇವರ ಮನೆತನ ಮತು ಇವರು ನೀಡುವ ಪ್ರತಿ ಔಷಧಿಯಲ್ಲಿ ಅಮೃತಸಿದ್ಧಿ ನೀಡುವ ದೇಯಿಬೈದ್ಯೆದಿ ಶ್ರೀ ರಕ್ಷೆ ಆಶೀರ್ವಾದ ಇರಲಿದೆ ಎಂಬುದು ಜನರ ವಿಶ್ವಾಸವಾಗಿದೆ.


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »