TOP STORIES:

ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ (ರಿ)ಮಂಜೇಶ್ವರ ತಾಲೂಕು ತಂಡದ ವತಿಯಿಂದ 6 ನೆಯ ಸೇವಾಯೋಜನೆ


ತುಳುನಾಡಿನ ಹಲವಾರು ಬಡಕುಟುಂಬಗಳ ಕಣ್ಣೀರೊರಸಿ ಅವರ ನೇರವಿಗೆ ಕಾರಣವಾದ ಬಲಿಷ್ಠ ಹಾಗೂ ಪ್ರಸಿದ್ದಿ ಪಡೆದ ಸಂಘಟನೆ ಫ್ರೆಂಡ್ಸ್ ಬಲ್ಲಾಳ್ಬಾಗ್  ಬಿರುವೆರ್ ಕುಡ್ಲ ಇದರ ಸ್ಥಾಪಕಾಧ್ಯಕ್ಷರಾದ  ಶ್ರೀಯುತ ಉದಯ ಪೂಜಾರಿಯವರ ವ್ಯಕ್ತಿತ್ವ, ಮನುಷ್ಯತ್ವ ಹಾಗೂ ಸಮಾಜಮುಖಿ ಕೆಲಸಗಳ ಪ್ರೇರಣೆಯಿಂದ ಬಿರುವೆರ್ ಕುಡ್ಲ ಸಂಘಟನೆಯ ಅನೇಕ ಶಾಖೆಗಳು ಈಗ ತುಳುನಾಡಿನಾದ್ಯಾಂತ ಕವಲೊಡೆದು ಅಶಕ್ತರಿಗೆ ನೇರವಾಗುತ್ತಾ ಬರುತ್ತಿವೆ. ಇಂತಹ ಶಾಖೆಗಳಲ್ಲಿ ಒಂದು ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ ಮಂಜೇಶ್ವರ ತಾಲೂಕು ತಂಡ.

ಕನಿಷ್ಠ ಪ್ರಮಾಣದ ಉತ್ಸಾಹಿ ಸದಸ್ಯರನ್ನು ಒಳಗೊಂಡ ತಂಡ ಆರಂಭವಾಗಿ 10 ತಿಂಗಳುಗಳಾಗುತ್ತಾ ಬಂದಿದೆ. ಕಳೆದ 10 ತಿಂಗಳಿನಲ್ಲಿ ಸಮಾಜಮುಖಿ ಕೆಲಸಕಾರ್ಯಗಳಲ್ಲಿ 6 ಸೇವಾಯೋಜನೆಯನ್ನು ಮಾಡುವುದರ ಮೂಲಕ ಮುಂದಕ್ಕೆ ಹೆಜ್ಜೆ ಇಡುತ್ತಿದೆ.

ನಮ್ಮ ತಂಡದ 6 ನೆಯ ಸೇವಾಯೋಜನೆಯನ್ನು ಮೀಂಜ ಪಂಚಾಯತಿನ ಕಲ್ಲಗದ್ದೆ ಸುಂದರ ಪೂಜಾರಿಯವರಿಗೆ ನೀಡಲಾಯಿತು.ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಇವರು ಬೈಕಿನಿಂದ ಬಿದ್ದು ಬೆನ್ನೆಲುಬು ಮುರಿದು ಕೆಲಸಮಾಡಲು ಸಾಧ್ಯವಾಗದ ಸ್ಥಿತಿಯಲ್ಲಿ ಇದ್ದಾರೆ.ಇವರಿಗೆ 1 ಗಂಡು ಹಾಗೂ 10 ವರ್ಷ ಪ್ರಾಯದ ತ್ರಿವಳಿ ಹೆಣ್ಣುಮಕ್ಕಳಿದ್ದಾರೆ.ಇವರ ಮನೆಯ ಶೋಚನೀಯ ಅವಸ್ಥೆಯನ್ನು ಮನಗಂಡ ನಮ್ಮ ತಂಡ ರೂ.25000 /-ಮೊತ್ತವನ್ನು ಅವರಿಗೆ ನಿನ್ನೆ ಹಸ್ತಾಂತರಿಸಲಾಯಿತು*. ಸಂಘಟನೆಯ ಗೌರವಾಧ್ಯಕ್ಷರಾದ ಶೀನಪ್ಪ ಪೂಜಾರಿ ಅಲಾರು,ಕಾರ್ಯದರ್ಶಿ ಅನಿಲ್ ಪ್ರತಾಪ್ ನಗರ,ಸದಸ್ಯರಾದ ಐತಪ್ಪ ಪೂಜಾರಿ ಅರಿಯಾಲ ಮುಂತಾದ ಸದಸ್ಯರು ಭಾಗವಹಿಸಿದ್ದರು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »