TOP STORIES:

ನಾರಾಯಣ ಗುರುಗಳ ಗುಣಗಾನ ಮಾಡಿದ ಪೋಪ್! ವ್ಯಾಟಿಕನ್ ಸಿಟಿಯಲ್ಲಿ ಕ್ರೈಸ್ತ ಪರಮೋಚ್ಛ ಗುರುವಿನಿಂದಲೇ ‘ಬ್ರಹ್ಮಶ್ರೀ’ಗೆ’ನಮನ!


బ్ర ಹ್ಮ ಶ್ರೀ ನಾರಾಯಣ ಗುರುಗಳ (Brahma Shree Narayana Guru) ಪ್ರಸ್ತುತ ಜಗತ್ತಿನಲ್ಲಿ ಬಹಳ ಪ್ರಸ್ತುತವಾಗಿವೆ ಎಂದು ಪೋಪ್‌ ಫ್ರಾನ್ಸಿಸ್ (Pope Francis) ಹೇಳಿದರು. ಪ್ರತಿಯೊಬ್ಬ ಮಾನವರೂ ಒಂದೇ ಕುಟುಂಬ ಎಂದು ಪ್ರತಿಪಾದಿಸಿದ ಸಂತರಲ್ಲಿ ಬ್ರಹ್ಮಶ್ರೀ ನಾರಾಯಣಗುರಗಳು ಅಗ್ರ ಸ್ಥಾನದಲ್ಲಿ ಬರುತ್ತಾರೆ.

ಶ್ರೀ ನಾರಾಯಣ ಗುರುಗಳು ಸಮಾಜದ ಉದ್ಧಾರಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ವ್ಯಕ್ತಿಯಾಗಿದ್ದರು ಎಂದು ಪೋಪ್ ಹೇಳಿದರು.

ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ

ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಸರ್ವಧರ್ಮ ಸಭೆಯಲ್ಲಿ ಪೋಪ್ ಅವರು ತಮ್ಮ ಆಶೀರ್ವಚನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳನ್ನು ಸ್ಮರಿಸಿದರು. ರಾಷ್ಟ್ರಗಳು ಮತ್ತು ವ್ಯಕ್ತಿಗಳ ನಡುವೆ ಅಸಹಿಷ್ಣುತೆ ಮತ್ತು ದ್ವೇಷ ಹೆಚ್ಚುತ್ತಿರುವ ಈ ಕಾಲದಲ್ಲಿ ಗುರುಗಳ ಸಂದೇಶವು ಬಹಳ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ಇಂದು ಬೆಳಗ್ಗೆ (ನವೆಂಬರ್ 30) ವ್ಯಾಟಿಕನ್ ನಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಇಟಲಿ, ಐರ್ಲೆಂಡ್, ಯುಎಇ, ಬಹೇನ್, ಇಂಡೋನೇಷ್ಯಾ, ಇಂಗ್ಲೆಂಡ್, ಅಮೆರಿಕ ಸೇರಿದಂತೆ ಹದಿನೈದಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಯಾರು ಈ ನಾರಾಯಣ ಗುರುಗಳು?

1856 ರಲ್ಲಿ ತಿರುವನಂತಪುರದ ಚೆಂಬಲಾಂತಿ ಎಂಬ ಹಳ್ಳಿಯಲ್ಲಿ ಕೆಳವರ್ಗದ ಮಧ್ಯಮ ಕುಟುಂಬದ ಈಳವ ಜಾತಿಯಲ್ಲಿ, ವಯಲ್ ವರಂ ಮನೆಯ ಮಾದನ್ ಆಶಾನ್ ಮತ್ತು ಕುಟ್ಟಿಯಮ್ಮ ಎಂಬ ದಂಪತಿಗಳ ನಾಲ್ಕನೇ ಮಗನಾಗಿ ಜನಿಸಿದರು. ತಂದೆ ಜ್ಯೋತಿಷ್ಯವನ್ನು ಬಲ್ಲ ಆಯುರ್ವೇದ ಪಂಡಿತರಾಗಿದ್ದರು. ಕೆಲವು ಕಾಲ ಶಾಲೆಯಲ್ಲಿ ಉಪಾಧ್ಯಯರಾಗಿದ್ದರಿಂದ ಅವರನ್ನು ಆಶಾನ್ (ಗುರು) ಎಂದು ಕರೆಯುತಿದ್ದರು.

ಬಾಲ್ಯ ಜೀವನ

ಬಾಲ್ಯದಲ್ಲಿ ನಾರಾಯಣಗುರುಗಳನ್ನು ‘ನಾಣು’ ಎಂದು ಕರೆಯುತ್ತಿದ್ದರು. ಕೃಷ್ಣ ವೈದ್ಯರ್ ಮತ್ತು ರಾಮನ್ ವೈದ್ಯರ್ ರವರ ಮಾರ್ಗದರ್ಶನದಲ್ಲಿ ರಾಮಾಯಣ, ಮಹಾಭಾರತ, ಭಾಗವತ ಗ್ರಂಥಗಳ ಅಧ್ಯಯನ ನಡೆಸಿದರು. ನಾಟಿ ಔಷಧಿ ತಯಾರು ಮಾಡುವುದನ್ನು ಕಲಿತು ವೈದ್ಯಕೀಯ ವೃತ್ತಿಯಲ್ಲಿಯೂ ಪ್ರಾವೀಣ್ಯತೆ ಪಡೆದಿದ್ದರು. ಸಂಸ್ಕೃತ, ತಮಿಳು, ಮಲಯಾಳಂ ಭಾಷಾ ಜ್ಞಾನವನ್ನು ಗಳಿಸಿ ವಾರಣ ಪಳ್ಳಿಯಲ್ಲಿ ರಾಮನ್ ಪಿಳ್ಳೆ ಆಶಾನ್ ರವರ ಶಿಷ್ಯತ್ವ ಸ್ವೀಕರಿಸಿ

ಹೆಚ್ಚಿನ ಪಾಂಡಿತ್ಯವನ್ನು ಗಳಿಸಿದರು. ಅಲ್ಲಿ ಅವರು ವಿದ್ಯಾರ್ಥಿಗಳೆಲ್ಲರ ‘ಚಟ್ಟಂಬಿ’ (ಮುಂದಾಳು)ಯಾಗಿ ಗುರುತಿಸಲ್ಪಟ್ಟರು. ನಂತರ ಅಧ್ಯಾಪಕ ವೃತ್ತಿ ಕೈಗೊಂಡ ನಾರಾಯಣ ಗುರುಗಳು, “ನಾಣು ಆಶಾನ್” ಎಂದು ಚಿರಪರಿಚಿತರಾದರು.

ಆಧ್ಯಾತ್ಮಿಕ ಚಿಂತನೆ

ಅವರ ತಂದೆ ಮತ್ತು ತಾಯಿ ತೀರಿ ಹೋದ ನಂತರ ಅವರು ಹೆಚ್ಚು ಆಧ್ಯಾತ್ಮಿಕ ಚಿಂತನೆ ಕಡೆಗೆ ಹೆಚ್ಚು ಒಲವು ತೋರಿಸಿದ್ದರು. ಅಧ್ಯಾಪಕ ವೃತ್ತಿಯ ಜೊತೆಗೆ ವೇದಾಂತ ಉಪನಿಷತ್ತುಗಳು ಹಾಗೂ ಇತರ ಧರ್ಮಗ್ರಂಥಗಳಾದ ಕುರಾನ್, ಬೈಬಲ್‌ಗಳ ದೀರ್ಘ ಅಧ್ಯಯನ ಮತ್ತು ಚಿಂತನೆ ನಡೆಸಿ ಆ ಮುಖಾಂತರ ಅಂತರ್ಮುಖಿ ಜ್ಞಾನವನ್ನು ಗಳಿಸಲಾರಂಭಿಸಿದರು. ಆಧ್ಯಾತ್ಮಿಕ ದೀಕ್ಷೆಯನ್ನು ಪಡೆದ ನಂತರ ನಾರಾಯಣ ಗುರು ಜನರಿಗೆ ಹೆಚ್ಚು ನಿಕಟವಾಗತೊಡಗಿದರು. ಎಲ್ಲರೊಂದಿಗೂ ಸಮಾನವಾಗಿ ಬೆರೆಯತೊಡಗಿದರು. ತನ್ನ ಪ್ರದೇಶದ ಸುತ್ತಲೂ ಇರುವ ತಳ ಸಮುದಾಯದವರ ಆರೋಗ್ಯ ವಿಚಾರಿಸಲು ಆರಂಭಿಸಿದರು.

ವೈಕಂ ಸತ್ಯಾಗ್ರಹ

ಬ್ರಹ್ಮಶ್ರೀ ನಾರಾಯಣಗುರುಗಳು ಅವರು ಹಲವಾರು ಹೋರಾಟಗಳಿಗೆ ಹೆಜ್ಜೆ ಹಾಕಿದರು. ಕೆಳವರ್ಗದವರು ದಾರಿಯಲ್ಲಿ ಮುಕ್ತವಾಗಿ ನಡೆಯುವ ಹಕ್ಕಿಗಾಗಿ “ವೈಕ್ಕಂ ಸತ್ಯಾಗ್ರಹ” ನಡೆಸಿದರು. ಅದೇ ರೀತಿ ದುಂದುವೆಚ್ಚ, ಕಂದಾಚಾರ, ಪ್ರಾಣಿಬಲಿ, ಮದ್ಯಪಾನ, ಮಹಿಳಾ ಶೋಷಣೆ, ಶಿಕ್ಷಣ, ಇತ್ಯಾದಿ ವಿಷಯಗಳ ಬಗ್ಗೆ ಜನಜಾಗೃತಿ ಮೂಡಿಸಿದ್ದರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »