TOP STORIES:

ನಾರಾಯಣ ಗುರುಗಳ ಗುಣಗಾನ ಮಾಡಿದ ಪೋಪ್! ವ್ಯಾಟಿಕನ್ ಸಿಟಿಯಲ್ಲಿ ಕ್ರೈಸ್ತ ಪರಮೋಚ್ಛ ಗುರುವಿನಿಂದಲೇ ‘ಬ್ರಹ್ಮಶ್ರೀ’ಗೆ’ನಮನ!


బ్ర ಹ್ಮ ಶ್ರೀ ನಾರಾಯಣ ಗುರುಗಳ (Brahma Shree Narayana Guru) ಪ್ರಸ್ತುತ ಜಗತ್ತಿನಲ್ಲಿ ಬಹಳ ಪ್ರಸ್ತುತವಾಗಿವೆ ಎಂದು ಪೋಪ್‌ ಫ್ರಾನ್ಸಿಸ್ (Pope Francis) ಹೇಳಿದರು. ಪ್ರತಿಯೊಬ್ಬ ಮಾನವರೂ ಒಂದೇ ಕುಟುಂಬ ಎಂದು ಪ್ರತಿಪಾದಿಸಿದ ಸಂತರಲ್ಲಿ ಬ್ರಹ್ಮಶ್ರೀ ನಾರಾಯಣಗುರಗಳು ಅಗ್ರ ಸ್ಥಾನದಲ್ಲಿ ಬರುತ್ತಾರೆ.

ಶ್ರೀ ನಾರಾಯಣ ಗುರುಗಳು ಸಮಾಜದ ಉದ್ಧಾರಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ವ್ಯಕ್ತಿಯಾಗಿದ್ದರು ಎಂದು ಪೋಪ್ ಹೇಳಿದರು.

ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ

ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಸರ್ವಧರ್ಮ ಸಭೆಯಲ್ಲಿ ಪೋಪ್ ಅವರು ತಮ್ಮ ಆಶೀರ್ವಚನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳನ್ನು ಸ್ಮರಿಸಿದರು. ರಾಷ್ಟ್ರಗಳು ಮತ್ತು ವ್ಯಕ್ತಿಗಳ ನಡುವೆ ಅಸಹಿಷ್ಣುತೆ ಮತ್ತು ದ್ವೇಷ ಹೆಚ್ಚುತ್ತಿರುವ ಈ ಕಾಲದಲ್ಲಿ ಗುರುಗಳ ಸಂದೇಶವು ಬಹಳ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ಇಂದು ಬೆಳಗ್ಗೆ (ನವೆಂಬರ್ 30) ವ್ಯಾಟಿಕನ್ ನಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಇಟಲಿ, ಐರ್ಲೆಂಡ್, ಯುಎಇ, ಬಹೇನ್, ಇಂಡೋನೇಷ್ಯಾ, ಇಂಗ್ಲೆಂಡ್, ಅಮೆರಿಕ ಸೇರಿದಂತೆ ಹದಿನೈದಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಯಾರು ಈ ನಾರಾಯಣ ಗುರುಗಳು?

1856 ರಲ್ಲಿ ತಿರುವನಂತಪುರದ ಚೆಂಬಲಾಂತಿ ಎಂಬ ಹಳ್ಳಿಯಲ್ಲಿ ಕೆಳವರ್ಗದ ಮಧ್ಯಮ ಕುಟುಂಬದ ಈಳವ ಜಾತಿಯಲ್ಲಿ, ವಯಲ್ ವರಂ ಮನೆಯ ಮಾದನ್ ಆಶಾನ್ ಮತ್ತು ಕುಟ್ಟಿಯಮ್ಮ ಎಂಬ ದಂಪತಿಗಳ ನಾಲ್ಕನೇ ಮಗನಾಗಿ ಜನಿಸಿದರು. ತಂದೆ ಜ್ಯೋತಿಷ್ಯವನ್ನು ಬಲ್ಲ ಆಯುರ್ವೇದ ಪಂಡಿತರಾಗಿದ್ದರು. ಕೆಲವು ಕಾಲ ಶಾಲೆಯಲ್ಲಿ ಉಪಾಧ್ಯಯರಾಗಿದ್ದರಿಂದ ಅವರನ್ನು ಆಶಾನ್ (ಗುರು) ಎಂದು ಕರೆಯುತಿದ್ದರು.

ಬಾಲ್ಯ ಜೀವನ

ಬಾಲ್ಯದಲ್ಲಿ ನಾರಾಯಣಗುರುಗಳನ್ನು ‘ನಾಣು’ ಎಂದು ಕರೆಯುತ್ತಿದ್ದರು. ಕೃಷ್ಣ ವೈದ್ಯರ್ ಮತ್ತು ರಾಮನ್ ವೈದ್ಯರ್ ರವರ ಮಾರ್ಗದರ್ಶನದಲ್ಲಿ ರಾಮಾಯಣ, ಮಹಾಭಾರತ, ಭಾಗವತ ಗ್ರಂಥಗಳ ಅಧ್ಯಯನ ನಡೆಸಿದರು. ನಾಟಿ ಔಷಧಿ ತಯಾರು ಮಾಡುವುದನ್ನು ಕಲಿತು ವೈದ್ಯಕೀಯ ವೃತ್ತಿಯಲ್ಲಿಯೂ ಪ್ರಾವೀಣ್ಯತೆ ಪಡೆದಿದ್ದರು. ಸಂಸ್ಕೃತ, ತಮಿಳು, ಮಲಯಾಳಂ ಭಾಷಾ ಜ್ಞಾನವನ್ನು ಗಳಿಸಿ ವಾರಣ ಪಳ್ಳಿಯಲ್ಲಿ ರಾಮನ್ ಪಿಳ್ಳೆ ಆಶಾನ್ ರವರ ಶಿಷ್ಯತ್ವ ಸ್ವೀಕರಿಸಿ

ಹೆಚ್ಚಿನ ಪಾಂಡಿತ್ಯವನ್ನು ಗಳಿಸಿದರು. ಅಲ್ಲಿ ಅವರು ವಿದ್ಯಾರ್ಥಿಗಳೆಲ್ಲರ ‘ಚಟ್ಟಂಬಿ’ (ಮುಂದಾಳು)ಯಾಗಿ ಗುರುತಿಸಲ್ಪಟ್ಟರು. ನಂತರ ಅಧ್ಯಾಪಕ ವೃತ್ತಿ ಕೈಗೊಂಡ ನಾರಾಯಣ ಗುರುಗಳು, “ನಾಣು ಆಶಾನ್” ಎಂದು ಚಿರಪರಿಚಿತರಾದರು.

ಆಧ್ಯಾತ್ಮಿಕ ಚಿಂತನೆ

ಅವರ ತಂದೆ ಮತ್ತು ತಾಯಿ ತೀರಿ ಹೋದ ನಂತರ ಅವರು ಹೆಚ್ಚು ಆಧ್ಯಾತ್ಮಿಕ ಚಿಂತನೆ ಕಡೆಗೆ ಹೆಚ್ಚು ಒಲವು ತೋರಿಸಿದ್ದರು. ಅಧ್ಯಾಪಕ ವೃತ್ತಿಯ ಜೊತೆಗೆ ವೇದಾಂತ ಉಪನಿಷತ್ತುಗಳು ಹಾಗೂ ಇತರ ಧರ್ಮಗ್ರಂಥಗಳಾದ ಕುರಾನ್, ಬೈಬಲ್‌ಗಳ ದೀರ್ಘ ಅಧ್ಯಯನ ಮತ್ತು ಚಿಂತನೆ ನಡೆಸಿ ಆ ಮುಖಾಂತರ ಅಂತರ್ಮುಖಿ ಜ್ಞಾನವನ್ನು ಗಳಿಸಲಾರಂಭಿಸಿದರು. ಆಧ್ಯಾತ್ಮಿಕ ದೀಕ್ಷೆಯನ್ನು ಪಡೆದ ನಂತರ ನಾರಾಯಣ ಗುರು ಜನರಿಗೆ ಹೆಚ್ಚು ನಿಕಟವಾಗತೊಡಗಿದರು. ಎಲ್ಲರೊಂದಿಗೂ ಸಮಾನವಾಗಿ ಬೆರೆಯತೊಡಗಿದರು. ತನ್ನ ಪ್ರದೇಶದ ಸುತ್ತಲೂ ಇರುವ ತಳ ಸಮುದಾಯದವರ ಆರೋಗ್ಯ ವಿಚಾರಿಸಲು ಆರಂಭಿಸಿದರು.

ವೈಕಂ ಸತ್ಯಾಗ್ರಹ

ಬ್ರಹ್ಮಶ್ರೀ ನಾರಾಯಣಗುರುಗಳು ಅವರು ಹಲವಾರು ಹೋರಾಟಗಳಿಗೆ ಹೆಜ್ಜೆ ಹಾಕಿದರು. ಕೆಳವರ್ಗದವರು ದಾರಿಯಲ್ಲಿ ಮುಕ್ತವಾಗಿ ನಡೆಯುವ ಹಕ್ಕಿಗಾಗಿ “ವೈಕ್ಕಂ ಸತ್ಯಾಗ್ರಹ” ನಡೆಸಿದರು. ಅದೇ ರೀತಿ ದುಂದುವೆಚ್ಚ, ಕಂದಾಚಾರ, ಪ್ರಾಣಿಬಲಿ, ಮದ್ಯಪಾನ, ಮಹಿಳಾ ಶೋಷಣೆ, ಶಿಕ್ಷಣ, ಇತ್ಯಾದಿ ವಿಷಯಗಳ ಬಗ್ಗೆ ಜನಜಾಗೃತಿ ಮೂಡಿಸಿದ್ದರು.


Related Posts

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »