TOP STORIES:

ನಾರಾಯಣ ಗುರುಗಳ ಗುಣಗಾನ ಮಾಡಿದ ಪೋಪ್! ವ್ಯಾಟಿಕನ್ ಸಿಟಿಯಲ್ಲಿ ಕ್ರೈಸ್ತ ಪರಮೋಚ್ಛ ಗುರುವಿನಿಂದಲೇ ‘ಬ್ರಹ್ಮಶ್ರೀ’ಗೆ’ನಮನ!


బ్ర ಹ್ಮ ಶ್ರೀ ನಾರಾಯಣ ಗುರುಗಳ (Brahma Shree Narayana Guru) ಪ್ರಸ್ತುತ ಜಗತ್ತಿನಲ್ಲಿ ಬಹಳ ಪ್ರಸ್ತುತವಾಗಿವೆ ಎಂದು ಪೋಪ್‌ ಫ್ರಾನ್ಸಿಸ್ (Pope Francis) ಹೇಳಿದರು. ಪ್ರತಿಯೊಬ್ಬ ಮಾನವರೂ ಒಂದೇ ಕುಟುಂಬ ಎಂದು ಪ್ರತಿಪಾದಿಸಿದ ಸಂತರಲ್ಲಿ ಬ್ರಹ್ಮಶ್ರೀ ನಾರಾಯಣಗುರಗಳು ಅಗ್ರ ಸ್ಥಾನದಲ್ಲಿ ಬರುತ್ತಾರೆ.

ಶ್ರೀ ನಾರಾಯಣ ಗುರುಗಳು ಸಮಾಜದ ಉದ್ಧಾರಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ವ್ಯಕ್ತಿಯಾಗಿದ್ದರು ಎಂದು ಪೋಪ್ ಹೇಳಿದರು.

ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ

ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಸರ್ವಧರ್ಮ ಸಭೆಯಲ್ಲಿ ಪೋಪ್ ಅವರು ತಮ್ಮ ಆಶೀರ್ವಚನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳನ್ನು ಸ್ಮರಿಸಿದರು. ರಾಷ್ಟ್ರಗಳು ಮತ್ತು ವ್ಯಕ್ತಿಗಳ ನಡುವೆ ಅಸಹಿಷ್ಣುತೆ ಮತ್ತು ದ್ವೇಷ ಹೆಚ್ಚುತ್ತಿರುವ ಈ ಕಾಲದಲ್ಲಿ ಗುರುಗಳ ಸಂದೇಶವು ಬಹಳ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ಇಂದು ಬೆಳಗ್ಗೆ (ನವೆಂಬರ್ 30) ವ್ಯಾಟಿಕನ್ ನಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಇಟಲಿ, ಐರ್ಲೆಂಡ್, ಯುಎಇ, ಬಹೇನ್, ಇಂಡೋನೇಷ್ಯಾ, ಇಂಗ್ಲೆಂಡ್, ಅಮೆರಿಕ ಸೇರಿದಂತೆ ಹದಿನೈದಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಯಾರು ಈ ನಾರಾಯಣ ಗುರುಗಳು?

1856 ರಲ್ಲಿ ತಿರುವನಂತಪುರದ ಚೆಂಬಲಾಂತಿ ಎಂಬ ಹಳ್ಳಿಯಲ್ಲಿ ಕೆಳವರ್ಗದ ಮಧ್ಯಮ ಕುಟುಂಬದ ಈಳವ ಜಾತಿಯಲ್ಲಿ, ವಯಲ್ ವರಂ ಮನೆಯ ಮಾದನ್ ಆಶಾನ್ ಮತ್ತು ಕುಟ್ಟಿಯಮ್ಮ ಎಂಬ ದಂಪತಿಗಳ ನಾಲ್ಕನೇ ಮಗನಾಗಿ ಜನಿಸಿದರು. ತಂದೆ ಜ್ಯೋತಿಷ್ಯವನ್ನು ಬಲ್ಲ ಆಯುರ್ವೇದ ಪಂಡಿತರಾಗಿದ್ದರು. ಕೆಲವು ಕಾಲ ಶಾಲೆಯಲ್ಲಿ ಉಪಾಧ್ಯಯರಾಗಿದ್ದರಿಂದ ಅವರನ್ನು ಆಶಾನ್ (ಗುರು) ಎಂದು ಕರೆಯುತಿದ್ದರು.

ಬಾಲ್ಯ ಜೀವನ

ಬಾಲ್ಯದಲ್ಲಿ ನಾರಾಯಣಗುರುಗಳನ್ನು ‘ನಾಣು’ ಎಂದು ಕರೆಯುತ್ತಿದ್ದರು. ಕೃಷ್ಣ ವೈದ್ಯರ್ ಮತ್ತು ರಾಮನ್ ವೈದ್ಯರ್ ರವರ ಮಾರ್ಗದರ್ಶನದಲ್ಲಿ ರಾಮಾಯಣ, ಮಹಾಭಾರತ, ಭಾಗವತ ಗ್ರಂಥಗಳ ಅಧ್ಯಯನ ನಡೆಸಿದರು. ನಾಟಿ ಔಷಧಿ ತಯಾರು ಮಾಡುವುದನ್ನು ಕಲಿತು ವೈದ್ಯಕೀಯ ವೃತ್ತಿಯಲ್ಲಿಯೂ ಪ್ರಾವೀಣ್ಯತೆ ಪಡೆದಿದ್ದರು. ಸಂಸ್ಕೃತ, ತಮಿಳು, ಮಲಯಾಳಂ ಭಾಷಾ ಜ್ಞಾನವನ್ನು ಗಳಿಸಿ ವಾರಣ ಪಳ್ಳಿಯಲ್ಲಿ ರಾಮನ್ ಪಿಳ್ಳೆ ಆಶಾನ್ ರವರ ಶಿಷ್ಯತ್ವ ಸ್ವೀಕರಿಸಿ

ಹೆಚ್ಚಿನ ಪಾಂಡಿತ್ಯವನ್ನು ಗಳಿಸಿದರು. ಅಲ್ಲಿ ಅವರು ವಿದ್ಯಾರ್ಥಿಗಳೆಲ್ಲರ ‘ಚಟ್ಟಂಬಿ’ (ಮುಂದಾಳು)ಯಾಗಿ ಗುರುತಿಸಲ್ಪಟ್ಟರು. ನಂತರ ಅಧ್ಯಾಪಕ ವೃತ್ತಿ ಕೈಗೊಂಡ ನಾರಾಯಣ ಗುರುಗಳು, “ನಾಣು ಆಶಾನ್” ಎಂದು ಚಿರಪರಿಚಿತರಾದರು.

ಆಧ್ಯಾತ್ಮಿಕ ಚಿಂತನೆ

ಅವರ ತಂದೆ ಮತ್ತು ತಾಯಿ ತೀರಿ ಹೋದ ನಂತರ ಅವರು ಹೆಚ್ಚು ಆಧ್ಯಾತ್ಮಿಕ ಚಿಂತನೆ ಕಡೆಗೆ ಹೆಚ್ಚು ಒಲವು ತೋರಿಸಿದ್ದರು. ಅಧ್ಯಾಪಕ ವೃತ್ತಿಯ ಜೊತೆಗೆ ವೇದಾಂತ ಉಪನಿಷತ್ತುಗಳು ಹಾಗೂ ಇತರ ಧರ್ಮಗ್ರಂಥಗಳಾದ ಕುರಾನ್, ಬೈಬಲ್‌ಗಳ ದೀರ್ಘ ಅಧ್ಯಯನ ಮತ್ತು ಚಿಂತನೆ ನಡೆಸಿ ಆ ಮುಖಾಂತರ ಅಂತರ್ಮುಖಿ ಜ್ಞಾನವನ್ನು ಗಳಿಸಲಾರಂಭಿಸಿದರು. ಆಧ್ಯಾತ್ಮಿಕ ದೀಕ್ಷೆಯನ್ನು ಪಡೆದ ನಂತರ ನಾರಾಯಣ ಗುರು ಜನರಿಗೆ ಹೆಚ್ಚು ನಿಕಟವಾಗತೊಡಗಿದರು. ಎಲ್ಲರೊಂದಿಗೂ ಸಮಾನವಾಗಿ ಬೆರೆಯತೊಡಗಿದರು. ತನ್ನ ಪ್ರದೇಶದ ಸುತ್ತಲೂ ಇರುವ ತಳ ಸಮುದಾಯದವರ ಆರೋಗ್ಯ ವಿಚಾರಿಸಲು ಆರಂಭಿಸಿದರು.

ವೈಕಂ ಸತ್ಯಾಗ್ರಹ

ಬ್ರಹ್ಮಶ್ರೀ ನಾರಾಯಣಗುರುಗಳು ಅವರು ಹಲವಾರು ಹೋರಾಟಗಳಿಗೆ ಹೆಜ್ಜೆ ಹಾಕಿದರು. ಕೆಳವರ್ಗದವರು ದಾರಿಯಲ್ಲಿ ಮುಕ್ತವಾಗಿ ನಡೆಯುವ ಹಕ್ಕಿಗಾಗಿ “ವೈಕ್ಕಂ ಸತ್ಯಾಗ್ರಹ” ನಡೆಸಿದರು. ಅದೇ ರೀತಿ ದುಂದುವೆಚ್ಚ, ಕಂದಾಚಾರ, ಪ್ರಾಣಿಬಲಿ, ಮದ್ಯಪಾನ, ಮಹಿಳಾ ಶೋಷಣೆ, ಶಿಕ್ಷಣ, ಇತ್ಯಾದಿ ವಿಷಯಗಳ ಬಗ್ಗೆ ಜನಜಾಗೃತಿ ಮೂಡಿಸಿದ್ದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »